ಸುಧಾಕರ್ ನಿವಾಸದಲ್ಲಿ ವಲಸಿಗ ಸಚಿವರ ಸಭೆ; ಖಾತೆ ಕಸಿದುಕೊಂಡಿದ್ದಕ್ಕೆ ತೀವ್ರ ಅಸಮಾಧಾನ

ಬೆಂಗಳೂರು: ಸಚಿವರಿಗೆ ಖಾತೆ ಹಂಚಿಕೆ, ಖಾತೆಗಳ ಬದಲಾವಣೆ ಮಾಡಿದ ಬೆನ್ನಲ್ಲೇ ವಲಸಿಗ ಸಚಿವರಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಮಸ್ಯೆ ಬಗೆಹರಿಯದಿದ್ದರೆ ಬಂಡಾಯ ಏಳುವ ಮುನ್ಸೂಚನೆ ನೀಡಿದ್ದಾರೆ.

ಸಚಿವ ಡಾ. ಕೆ. ಸುಧಾಕರ್ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದ ವಲಸಿಗ ಸಚಿವರು, ಮುಖ್ಯಮಂತ್ರಿ ಧೋರಣೆಗೆ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ. ತಾವು ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರೂ ಸಹ ತಮ್ಮ ಖಾತೆ ಬದಲಾವಣೆ ಮಾಡಲಾಗಿದೆ. ಇದು ಸರಿಯಲ್ಲ ಎಂದು ಹೇಳಿದ್ದಾರೆ.

ಖಾತೆ ಖ್ಯಾತೆ ಇಡೀ ದಿನ ವ್ಯಾಪಕ ರಾಜಕೀಯ ಚಟುವಟಿಕೆಗೆ ಕಾರಣವಾಗಿತ್ತು. ಬಳಿಕ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದ ನಂತರ ಖ್ಯಾತೆ ತೆಗೆದ ಸಚಿವರು ಸುಮ್ಮನಾದರು. ಆದರೆ ಸಚಿವರಾದ ಎಂ.ಟಿ.ಬಿ.ನಾಗರಾಜ್, ಕೆ. ಗೋಪಾಲಯ್ಯ ಮತ್ತು ಡಾ.ಕೆ. ಸುಧಾಕರ್ ಸಚಿವ ಸಂಪುಟ ಸಭೆಯಿಂದ ದೂರ ಉಳಿದಿದ್ದರು. ಎಂ.ಟಿ.ಬಿ. ನಾಗರಾಜ್ ತಮ್ಮ ಖಾತೆ ಬದಲಾವಣೆ ಮಾಡದಿದ್ದರೆ ಅಧಿಕಾರ ಸ್ವೀಕರಿಸುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ.

ಬೆಳಗ್ಗೆಯಿಂದಲೇ ಸದಾಶಿವನಗರದಲ್ಲಿವ ಸುಧಾಕರ್ ನಿವಾಸದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ಖಾತೆಗಳ ಬದಲಾವಣೆಯಾಗುತ್ತಿದ್ದಂತೆ ಅಸಮಾಧಾನಗೊಂಡ ಗೋಪಾಲಯ್ಯ ಮತ್ತು ನಾರಾಯಣಗೌಡ ಸುಧಾಕರ್ ನಿವಾಸಕ್ಕೆ ಆಗಮಿಸಿದರು. ಎಂಟಿಬಿ ನಾಗರಾಜ್ ಕೂಡ ಅಬಕಾರಿ ಖಾತೆ ನೀಡಿರುವುದಕ್ಕೆ ಅಸಮಧಾನ ಗೊಂಡಿದ್ದು ಸುಧಾಕರ್ ನಿವಾಸದ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯಲ್ಲಿ ಗೋಪಾಲಯ್ಯ ತೀವ್ರ ಅಸಮಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ. ಕೊರೊನಾ ವೇಳೆ ಉತ್ತವಾಗಿ ಕೆಲಸ ಮಾಡಿದ್ದೇನೆ ಈ ಬಗ್ಗೆ ಕೇಂದ್ರದ ನಾಯಕರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಆದರೂ ಯಾಕೆ ಖಾತೆ ಬದಲಾವಣೆ ಮಾಡಿದರು ಎಂದು ಕಿಡಿಕಾರಿದ್ದಾರೆ.ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಪಡೆದು ತೋಟಗಾರಿಕೆ ಮತ್ತು ಸಕ್ಕರೆ ಖಾತೆ ನೀಡಿರುವುದಕ್ಕೆ ಅವರು ತೀವ್ರ ಅಸಮಧಾನಗೊಂಡಿದ್ದಾರೆ.


ಇನ್ನು ನಾರಾಯಣಗೌಡ ಕೂಡ ಅಸಮಧಾನ ಹೊರಹಾಕಿದ್ದಾರೆ. ಉತ್ತಮ ರೀತಿಯಲ್ಲಿ ಇಲಾಖೆ ನಿರ್ವಹಣೆ ಮಾಡಿದರೂ ಖಾತೆ ಬದಲಿಸಿದ್ದಾರೆ. ತೋಟಗಾರಿಕೆ ವಾಪಸ್ ಪಡೆದು ಕ್ರೀಡೆ ,ಹಜ್ಜ್ ಮತ್ತು ವಕ್ಫ್ ಖಾತೆ ನೀಡಿದ್ದಾರೆ ಇಂದು ಖಾತೆ ವಾಪಸ್ ಪಡೆದವರು ನಾಳೆ ಸಚಿವ ಸ್ಥಾನ ಪಡೆಯಲ್ಲ ಎನ್ನುವುದಕ್ಕೆ ಏನು ಸಾಕ್ಷಿ ಎಂದು ಸಭೆಯಲ್ಲಿ ಕಿಡಿಕಾರಿದ್ದಾರೆ.

ಎಂಟಿಬಿ ನಾಗರಾಜ್ ಕೂಡ ಅಬಕಾರಿ ಖಾತೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ವಸತಿ ಸಚಿವ ಸ್ಥಾನವನ್ನು ತೊರೆದು ರಾಜೀನಾಮೆ ಕೊಟ್ಟು ಬಂದಿದ್ದೇನೆ, ಸಚಿವ ಸ್ಥಾನಕ್ಕಾಗಿ ವರ್ಷ ಕಾದಿದ್ದೇನೆ ಈಗ ಅವಕಾಶ ಸಿಕ್ಕಿದೆ ಆದರೆ ಜನರ ಪರ ಕೆಲಸ ಮಾಡಲು ಸಾಧ್ಯವಾಗದ ಖಾತೆ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಸುಧಾಕರ್ ಕೂಡ ಬೇಸರಗೊಂಡಿದ್ದಾರೆ, ವೈದ್ಯಕೀಯ ಶಿಕ್ಷಣ ಖಾತೆಯನ್ನು ಉತ್ತಮವಾಗಿ ನಿಭಾಯಿಸಿಕೊಂಡು ಬಂದಿದ್ದೇನೆ, ಹೆಚ್ಚುವರಿಯಾಗಿ ಆರೋಗ್ಯ ಖಾತೆಯನ್ನೂ ನಿರ್ವಹಿಸಿದ್ದೇನೆ ಆದರೂ ಆರೋಗ್ಯ ಬಿಟ್ಟು ಕೊಟ್ಟು ವೈದ್ಯಕೀಯ ಖಾತೆ ವಾಪಸ್ ಪಡೆದಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.

ಮೇಟಿಗಿಲ್ಲ ಎಂಟ್ರಿ:.
ಇನ್ನು ಖಾಸಗಿ ಕೆಲಸದ ನಿಮಿತ್ತ ಇಂದು ಭೇಟಿಗೆ ಸುಧಾಕರ್ ಮಾಜಿ ಸಚಿವ ಮೇಟಿಗೆ ಸಮಯಾವಕಾಶ ನೀಡಿದ್ದರು ಆದರೆ ರಾಜಕೀಯ ಬೆಳವಣಿಗೆ ವಲಸಿಗ ಸಚಿವರ ಜೊತೆ ಸಭೆ ಹಿನ್ನಲೆಯಲ್ಲಿ ಮೇಟಿಯನ್ನು ಭೇಟಿಯಾಗಲಿಲ್ಲ,ಕೆಲಕಾಲ ಬಾಗಿಲ ಹೊರಗಡೆಯೇ ಇದ್ದು,ಇಂದು ಭೇಟಿ ಮಾಡಲ್ಲ ಎಂದು ಸಿಬ್ಬಂದಿ ಹೇಳಿದ ನಂತರ ನಿರಾಸೆಯಿಂದ ವಾಪಸ್ಸಾದರು. ಹಿರಿಯ ನಾಯಕರಾಗಿದ್ದು ಮಾಜಿ ಸಚಿವರೊಬ್ಬರನ್ನು ಮನೆ ಬಾಗಿಲ ಹೊರಗೆ ನಿಲ್ಲಿಸಿ ಮಾತನಾಡದೇ ಕಳಿಸಿದ್ದು ಕೂಡ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಮಂತ್ರಿ ಸಭೆಯ ನಂತರ ಸಚಿವರಾದ ಎಂ.ಟಿ.ಬಿ. ನಾಗರಾಜ್, ಕೆ.ಗೋಪಾಲಯ್ಯ ಮತ್ತಿತರರು ತಮಗೆ ಅಸಮಾಧಾನ ಆಗಿದ್ದು ಸಹಜ. ಮುಖ್ಯಮಂತ್ರಿ ಅವರ ಮೇಲೆ ನಂಬಿಕೆ ಇದೆ. ಏನೇ ಸಮಸ್ಯೆ ಇದ್ದರೂ ಪಕ್ಷದ ವಲಯದಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದರು. 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಹ ಈ ಕುರಿತು ಮಾತನಾಡಿ, ಖಾತೆಗಳ ಬಗ್ಗೆ ಅಸಮಾಧಾನ ಇದ್ದರೆ ಬಗೆಹರಿಸುತ್ತೇವೆ. ಸ್ವಲ್ಪ ದಿನ ಇದೇ ಖಾತೆಗಳಲ್ಲಿ ಮುಂದುವರೆಯಲಿ, ನಂತರ ಬೇಕಿದ್ದರೆ ಬದಲಾವಣೆ ಮಾಡೋಣ ಎಂದು ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಂದರ್ಭಿಕ ಚಿತ್ರ‌ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ೨೪ ಗಂಟೆಗಳಲ್ಲಿ ನಿರಂತರ ಮಳೆಯಾಗಿದೆ. ಇದರ ಪರಿಣಾಮ ಶಿರಸಿ-ಅಂಕೋಲಾ ಮಾರ್ಗದ ಮಧ್ಯೆ ಗುಡ್ಡ...

Recommended For You

About the Author: Kanneshwar Naik

Leave a Reply

Your email address will not be published. Required fields are marked *