ಅಬ್ಬಿ ಜಲಪಾತದಲ್ಲಿ ಭೂಕುಸಿತ: ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ದುರಂತ ಸಾವು

ಮಲವಂತಿಗೆ ಗ್ರಾಮದ ಬದಮನೆ ಅಬ್ಬಿ ಜಲಪಾತದಲ್ಲಿ ಗುಡ್ಡ ಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ಸನತ್ ಶೆಟ್ಟಿ (18) ಮೃತದೇಹ ಶೋಧಕಾರ್ಯ ವಿಫಲವಾಗಿದೆ. ಜಲಪಾತದಲ್ಲಿ ಸೋಮವಾರ ಸಂಭವಿಸಿದ್ದ ಭೂಕುಸಿತದಿಂದಾಗಿ ಸನತ್ ಭಾರೀ ಪ್ರಮಾಣದ ಮಣ್ಣು ಮತ್ತು ಇತರ ಭಗ್ನಾವಶೇಷಗಳಡಿ ಸಿಲುಕಿದ್ದರು.


ಕ್ರಿಕೆಟ್ ಪಂದ್ಯಾವಳಿ-

ಗಣರಾಜ್ಯೋತ್ಸವದ ಅಂಗವಾಗಿ ತಾಲೂಕಾ ಆಡಳಿತದ ಸಂಯೋಜನೆ ಹಾಗೂ ತಾಲೂಕಾ ಪತ್ರಕರ್ತರ ಸಂಘದ ಅಯೋಜನೆಯಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಕಡಕೇರಿ ಶಾಲಾ(ಮಹಾತ್ಮಾ ಗಾಂಧಿ) ಮೈದಾನದಲ್ಲಿ ಆಯೋಜಿಸಲಾಗಿತ್ತು.

ಪಂದ್ಯಾವಳಿಯ ನ್ನು ತಹಶೀಲ್ದಾರ್ ಮಂಜುಳ ಭಜಂತ್ರಿ ಉದ್ಘಾಟಿಸಿ ಮಾತನಾಡಿ ಕ್ರೀಡೆ ಸಂತೋಷ ನೀಡುತ್ತದೆ. ಕ್ರೀಡೆಯಲ್ಲಿ ಸಂತೋಷ ದಿಂದ ಪಾಲ್ಗೊಳ್ಳಬೇಕು ಎಂದರು.
ಎಸಿಎಫ್ ಅಜೀಜ್ ಮಾತನಾಡಿ ಗುಂಪು ಕ್ರೀಡೆಗಳಿಂದ ನಾಯಕತ್ವ ಗುಣ ಬೆಳೆಯುತ್ತದೆ. ಮನರಂಜನೆ, ದೈಹಿಕ ಸಾಮರ್ಥ್ಯ ಬೆಳೆಯುತ್ತದೆ. ಸೋಲು ಗೆಲುವು ಮುಖ್ಯ ವಲ್ಲ ಕ್ರೀಡಾ ಮನೋಭಾವದಿಂದ ಆಡಬೇಕು ಎಂದರು.
ಸಿಪಿಐ ಎನ್ ಮಹೇಶ್ ಮಾತನಾಡಿ ಕ್ರೀಡಾ ಮನೋಭಾವದಿಂದ ಆಡೋಣ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಗ್ರಾಮ ಪಂಚಾಯತ್ ಸದಸ್ಯ ಕ್ರಷ್ಣಮೂರ್ತಿ ಮಡಿವಾಳ, ಪ್ರಾಥಮಿಕ ಶಾಲಾ ನೌಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಗಣೇಶ ಭಟ್ ಮಾತನಾಡಿದರು.
ನಿರ್ಣಾಯಕ ಟಿ ಬಿ ಗೌಡ ಉಪಸ್ಥತರಿದ್ದರು
ಸುರೇಶ ಕಡಕೇರಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬದಮನೆ ಅಬ್ಬಿ ಜಲಪಾತದಲ್ಲಿ ಗುಡ್ಡ ಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ಸನತ್ ಶೆಟ್ಟಿ (18) ಮೃತದೇಹ ಶೋಧಕಾರ್ಯ ವಿಫಲವಾಗಿದೆ. ಜಲಪಾತದಲ್ಲಿ ಸೋಮವಾರ ಸಂಭವಿಸಿದ್ದ ಭೂಕುಸಿತದಿಂದಾಗಿ ಸನತ್ ಭಾರೀ ಪ್ರಮಾಣದ ಮಣ್ಣು ಮತ್ತು ಇತರ ಭಗ್ನಾವಶೇಷಗಳಡಿ ಸಿಲುಕಿದ್ದರು.

ಅಗ್ನಿಶಾಮಕ ದಳ, ರಾಜ್ಯ ವಿಪತ್ತು ನಿರ್ವಹಣಾ ಘಟಕ, ಪೊಲೀಸ್, ಧರ್ಮಸ್ಥಳದ ವಿಪತ್ತು ನಿರ್ವಹಣಾ ತಂಡ ಮತ್ತು 150 ಕ್ಕೂ ಹೆಚ್ಚು ಸ್ಥಳೀಯರು ಮಣ್ಣಿನ ಪದರಗಳನ್ನು ಸರಿಸಲು ಇಡೀ ದಿನ ಮಾಡಿದ ಪ್ರಯತ್ನಗಳು ಯಶಸ್ವಿಯಾಗಿಲ್ಲ. ಸಂಜೆ 6 ಗಂಟೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ದುರ್ಗಮ ಪ್ರದೇಶವಾದ ಕಾರಣ ಜೆಸಿಬಿಗಳು ಘಟನಾ ಸ್ಥಳ ತಲುಪಲು ಸಾಧ್ಯವಾಗಿಲ್ಲ. ಅಲ್ಲದೆ ಮಣ್ಣಿನ ಪದರವು ಇಡೀ ಜಲಪಾತವನ್ನು ಆವರಿಸಿದೆ.

ಈ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ ಮೊದಲ ಘಟನೆ ಇದಾಗಿದೆ, ಕೆಲವು ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್‌ನಲ್ಲಿನ ಸೋರಿಕೆ ಭೂಕುಸಿತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ಹೇಳಿದ್ದಾರೆ. ಶಾಸಕ ಹರೀಶ್ ಪೂಂಜ, ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ,, ಹಂಗಾಮಿ ತಹಶೀಲ್ದಾರ್ ರಮೇಶ್ ಬಾಬು ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸನತ್ ಅವರ ಸಹೋದರ ಶಮಿತ್ ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *