ಅಬ್ಬಿ ಜಲಪಾತದಲ್ಲಿ ಭೂಕುಸಿತ: ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ದುರಂತ ಸಾವು

ಮಲವಂತಿಗೆ ಗ್ರಾಮದ ಬದಮನೆ ಅಬ್ಬಿ ಜಲಪಾತದಲ್ಲಿ ಗುಡ್ಡ ಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ಸನತ್ ಶೆಟ್ಟಿ (18) ಮೃತದೇಹ ಶೋಧಕಾರ್ಯ ವಿಫಲವಾಗಿದೆ. ಜಲಪಾತದಲ್ಲಿ ಸೋಮವಾರ ಸಂಭವಿಸಿದ್ದ ಭೂಕುಸಿತದಿಂದಾಗಿ ಸನತ್ ಭಾರೀ ಪ್ರಮಾಣದ ಮಣ್ಣು ಮತ್ತು ಇತರ ಭಗ್ನಾವಶೇಷಗಳಡಿ ಸಿಲುಕಿದ್ದರು.


ಕ್ರಿಕೆಟ್ ಪಂದ್ಯಾವಳಿ-

ಗಣರಾಜ್ಯೋತ್ಸವದ ಅಂಗವಾಗಿ ತಾಲೂಕಾ ಆಡಳಿತದ ಸಂಯೋಜನೆ ಹಾಗೂ ತಾಲೂಕಾ ಪತ್ರಕರ್ತರ ಸಂಘದ ಅಯೋಜನೆಯಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಕಡಕೇರಿ ಶಾಲಾ(ಮಹಾತ್ಮಾ ಗಾಂಧಿ) ಮೈದಾನದಲ್ಲಿ ಆಯೋಜಿಸಲಾಗಿತ್ತು.

ಪಂದ್ಯಾವಳಿಯ ನ್ನು ತಹಶೀಲ್ದಾರ್ ಮಂಜುಳ ಭಜಂತ್ರಿ ಉದ್ಘಾಟಿಸಿ ಮಾತನಾಡಿ ಕ್ರೀಡೆ ಸಂತೋಷ ನೀಡುತ್ತದೆ. ಕ್ರೀಡೆಯಲ್ಲಿ ಸಂತೋಷ ದಿಂದ ಪಾಲ್ಗೊಳ್ಳಬೇಕು ಎಂದರು.
ಎಸಿಎಫ್ ಅಜೀಜ್ ಮಾತನಾಡಿ ಗುಂಪು ಕ್ರೀಡೆಗಳಿಂದ ನಾಯಕತ್ವ ಗುಣ ಬೆಳೆಯುತ್ತದೆ. ಮನರಂಜನೆ, ದೈಹಿಕ ಸಾಮರ್ಥ್ಯ ಬೆಳೆಯುತ್ತದೆ. ಸೋಲು ಗೆಲುವು ಮುಖ್ಯ ವಲ್ಲ ಕ್ರೀಡಾ ಮನೋಭಾವದಿಂದ ಆಡಬೇಕು ಎಂದರು.
ಸಿಪಿಐ ಎನ್ ಮಹೇಶ್ ಮಾತನಾಡಿ ಕ್ರೀಡಾ ಮನೋಭಾವದಿಂದ ಆಡೋಣ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಗ್ರಾಮ ಪಂಚಾಯತ್ ಸದಸ್ಯ ಕ್ರಷ್ಣಮೂರ್ತಿ ಮಡಿವಾಳ, ಪ್ರಾಥಮಿಕ ಶಾಲಾ ನೌಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಗಣೇಶ ಭಟ್ ಮಾತನಾಡಿದರು.
ನಿರ್ಣಾಯಕ ಟಿ ಬಿ ಗೌಡ ಉಪಸ್ಥತರಿದ್ದರು
ಸುರೇಶ ಕಡಕೇರಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬದಮನೆ ಅಬ್ಬಿ ಜಲಪಾತದಲ್ಲಿ ಗುಡ್ಡ ಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ಸನತ್ ಶೆಟ್ಟಿ (18) ಮೃತದೇಹ ಶೋಧಕಾರ್ಯ ವಿಫಲವಾಗಿದೆ. ಜಲಪಾತದಲ್ಲಿ ಸೋಮವಾರ ಸಂಭವಿಸಿದ್ದ ಭೂಕುಸಿತದಿಂದಾಗಿ ಸನತ್ ಭಾರೀ ಪ್ರಮಾಣದ ಮಣ್ಣು ಮತ್ತು ಇತರ ಭಗ್ನಾವಶೇಷಗಳಡಿ ಸಿಲುಕಿದ್ದರು.

ಅಗ್ನಿಶಾಮಕ ದಳ, ರಾಜ್ಯ ವಿಪತ್ತು ನಿರ್ವಹಣಾ ಘಟಕ, ಪೊಲೀಸ್, ಧರ್ಮಸ್ಥಳದ ವಿಪತ್ತು ನಿರ್ವಹಣಾ ತಂಡ ಮತ್ತು 150 ಕ್ಕೂ ಹೆಚ್ಚು ಸ್ಥಳೀಯರು ಮಣ್ಣಿನ ಪದರಗಳನ್ನು ಸರಿಸಲು ಇಡೀ ದಿನ ಮಾಡಿದ ಪ್ರಯತ್ನಗಳು ಯಶಸ್ವಿಯಾಗಿಲ್ಲ. ಸಂಜೆ 6 ಗಂಟೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ದುರ್ಗಮ ಪ್ರದೇಶವಾದ ಕಾರಣ ಜೆಸಿಬಿಗಳು ಘಟನಾ ಸ್ಥಳ ತಲುಪಲು ಸಾಧ್ಯವಾಗಿಲ್ಲ. ಅಲ್ಲದೆ ಮಣ್ಣಿನ ಪದರವು ಇಡೀ ಜಲಪಾತವನ್ನು ಆವರಿಸಿದೆ.

ಈ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ ಮೊದಲ ಘಟನೆ ಇದಾಗಿದೆ, ಕೆಲವು ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್‌ನಲ್ಲಿನ ಸೋರಿಕೆ ಭೂಕುಸಿತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ಹೇಳಿದ್ದಾರೆ. ಶಾಸಕ ಹರೀಶ್ ಪೂಂಜ, ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ,, ಹಂಗಾಮಿ ತಹಶೀಲ್ದಾರ್ ರಮೇಶ್ ಬಾಬು ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸನತ್ ಅವರ ಸಹೋದರ ಶಮಿತ್ ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *