ವಾಟರ್ ಸ್ಪೋರ್ಟ್ಸ್ ಗಳಲ್ಲಿ ಆಯೋಜಕರಿಂದ ಸುರಕ್ಷತಾ ನಿಯಮ ಉಲ್ಲಂಘನೆ: ಅಪಾಯದಲ್ಲಿ ಪ್ರವಾಸಿಗರು!

ಕಾಳಿ ನದಿಯಲ್ಲಿ ನಡೆಸುವ ವಾಟರ್ ಸ್ಪೋರ್ಟ್ಸ್ ಗಳಲ್ಲಿ ಆಯೋಜಕರು ಮತ್ತು ಪ್ರವಾಸಿಗರು ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ

Nearly 10,000 tourists are gathering along the Kali for watersports during weekends

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಯಲ್ಲಿ ನಡೆಸುವ ವಾಟರ್ ಸ್ಪೋರ್ಟ್ಸ್ ಗಳಲ್ಲಿ ಆಯೋಜಕರು ಮತ್ತು ಪ್ರವಾಸಿಗರು ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. 

ದಾಂಡೇಲಿಯ ಪ್ರವಾಸಿ ಸ್ಥಳದಲ್ಲಿ ಆಯೋಜಕರು ರಿವರ್ ರಾಪ್ಟಿಂಗ್ ನಡೆಸುವ ವೇಳೆ ಪ್ರವಾಸಿಗರಿಗೆ ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಿಲ್ಲ,  ವಾರಾಂತ್ಯದಲ್ಲಿ ಸುಮಾರು 10 ಸಾವಿರ ಪ್ರವಾಸಿಗರು ಬರುತ್ತಾರೆ.

ಆದರೆ ಇಲ್ಲಿ ಆಯೋಜಕರು ಪ್ರವಾಸಿಗರಿಗೆ ಅಗತ್ಯವಾದ ಲೈಫ್ ಜಾಕೆಟ್ ಕೊಡುತ್ತಿಲ್ಲ, ಕಳೆದ ಭಾನುವಾರ, ಜನಸಂದಣಿಯ ತೆಪ್ಪದ ಚಿತ್ರದಲ್ಲಿ  ಹಲವರು ಲೈಫ್ ಜಾಕೆಟ್ ಧರಿಸದಿರುವ ಫೋಟೋ ವೈರಲ್ ಆಗಿದೆ.

ಕಾಳಿ ನದಿ ಜಲಾನಯನ ಪ್ರದೇಶದ ಹೆಚ್ಚಿನ ಭಾಗವು ಕರ್ನಾಟಕ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುತ್ತದೆ, ಅನೇಕ ನಿರ್ವಾಹಕರು ಯಾವುದೇ ಪರಿಣಿತ ತರಬೇತುದಾರರಿಲ್ಲದೇ ಮತ್ತು  ಅಪಘಾತದ ಸಂದರ್ಭದಲ್ಲಿ ಯಾವುದೇ ಬ್ಯಾಕ್-ಅಪ್ ಯೋಜನೆಯಿಲ್ಲದೆ ರಾಫ್ಟಿಂಗ್ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ.

ನಾಲ್ಕು ವರ್ಷದ ಹಿಂದೆ ರಿವರ್ ರ್ಯಾಪ್ಟಿಂಗ್ ನಲ್ಲಿ ಕೂರ್ಗ್ ನಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ.  ಆಗಿನಿಂದ ಅಲ್ಲಿ ರಿವರ್ ರ್ಯಾಪ್ಟಿಂಗ್ ನಿಷೇಧಿಸಲಾಗಿದೆ ಎಂದು  ಸ್ಪೋರ್ಟ್‌ಗಳಿಗಾಗಿ ಸರ್ಕಾರಿ ಟೆಂಡರ್ ತೆಗೆದುಕೊಂಡ ಟೂರ್ ಆಪರೇಟರ್ ಒಬ್ಬರು ತಿಳಿಸಿದ್ದಾರೆ.

ಅನೇಕ ಹೊಸ ನಿರ್ವಾಹಕರು ಸ್ಥಳೀಯ ಆಡಳಿತದಿಂದ ವಾಟರ್‌ ಸ್ಪೋರ್ಟ್ ಹೆಸರಿನಲ್ಲಿ ರಾಫ್ಟಿಂಗ್‌ಗೆ ಅನುಮತಿ ಪಡೆಯುತ್ತಿದ್ದಾರೆ. “ಆದರೆ ರಿವರ್ ರಾಫ್ಟಿಂಗ್ ಹೆಚ್ಚಿನ ಅಪಾಯದ ಜಲಾನಯನ ಪ್ರದೇಶವಾಗಿದೆ ಮತ್ತು ಪರಿಣತಿ ಮತ್ತು ತರಬೇತಿ ಪಡೆದ ಮಾನವಶಕ್ತಿಯ ಅಗತ್ಯವಿರುತ್ತದೆ, ಲೈಫ್ ಜಾಕೆಟ್ ಇಲ್ಲದೇ ಪ್ರವಾಸಿಗರನ್ನು ಕಳುಹಿಸುತ್ತಿರುವುದು ಅತಿ ಹೆಚ್ಚಿನ ಅಪಾಯವಾಗಿದೆ ಎಂದು ಮತ್ತೊಬ್ಬ ನಿರ್ವಾಹಕ ಹೇಳಿದ್ದಾರೆ.

ಅಧಿಕೃತ ಟೆಂಡರ್‌ಗಳೊಂದಿಗೆ ವಾಟರ್‌ ಸ್ಪೋರ್ಟ್ಸ್ ಗಳನ್ನು ನಡೆಸುವವರು ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಹಣವನ್ನು ಪಾವತಿಸುತ್ತಾರೆ.  ಆದರೆ ಈಗ ನಡೆಸುತ್ತಿರುವ ಇಬ್ಬರು ಹೊಸ ಆಪರೇಟರ್ಸ್ ಸರ್ಕಾರಕ್ಕೆ ಹಣ ನೀಡುತ್ತಿಲ್ಲ,  ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಲಾಗುತ್ತದೆ, ಆದರೆ ಸರ್ಕಾರವು ಅಂತಹ ಆಪರೇಟರ್ ಗಳಿಂದ ಏನನ್ನೂ ಪಡೆಯುವುದಿಲ್ಲ.

ಕಾಳಿ ನದಿಯಲ್ಲಿನ ಎಲ್ಲಾ ಜಲಾನಯನ ಪ್ರದೇಶಗಳ ಕ್ರೀಡೆಗಳನ್ನು  ಸರ್ಕಾರ ಕಾನೂನುಬದ್ಧಗೊಳಿಸಬೇಕು ಮತ್ತು ಮನರಂಜನಾ ಪ್ರವಾಸಗಳು ದುರಂತಗಳಾಗಿ ಬದಲಾಗದಂತೆ ನೋಡಿಕೊಳ್ಳಲು ನಿಯಮಗಳನ್ನು ರೂಪಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ ಎಂದು ಗಣೇಶಗುಡಿ ಪ್ರವಾಸಿ ಸ್ಥಳದ ಮಾಲೀಕರೊಬ್ಬರು ಒತ್ತಾಯಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *