ಮಾದಕ ವಸ್ತುಗಳ ಪಟ್ಟಿಗೆ ಅಡಿಕೆ ಬೆಳೆ ಸೇರ್ಪಡೆ: ಬಿಜೆಪಿ ಶಾಸಕರ ಆಕ್ರೋಶ, ಕೈಬಿಡಲು ಆಗ್ರಹ

ಕೃಷಿ ಮಾರಾಟ ವಾಹಿನಿ ವೆಬ್‌ಸೈಟ್‌ನಲ್ಲಿ ಅಡಿಕೆ ಬೆಳೆಯನ್ನು ಡ್ರಗ್ಸ್‌ ಆ್ಯಂಡ್ ನಾರ್ಕೊಟಿಕ್‌ ವಿಭಾಗದಲ್ಲಿ ಸೇರಿಸಲಾಗಿದ್ದು, ಇದರಿಂದ ಅಡಿಕೆ ಬೆಲೆಯ ಮೇಲೆ ಪರಿಣಾಮ ಬೀರುತ್ತಿದೆ.

Vidhana Sabha

ಬೆಂಗಳೂರು: ಕೃಷಿ ಮಾರಾಟ ವಾಹಿನಿ ವೆಬ್‌ಸೈಟ್‌ನಲ್ಲಿ ಅಡಿಕೆ ಬೆಳೆಯನ್ನು ಡ್ರಗ್ಸ್‌ ಆ್ಯಂಡ್ ನಾರ್ಕೊಟಿಕ್‌ ವಿಭಾಗದಲ್ಲಿ ಸೇರಿಸಲಾಗಿದ್ದು, ಇದರಿಂದ ಅಡಿಕೆ ಬೆಲೆಯ ಮೇಲೆ ಪರಿಣಾಮ ಬೀರುತ್ತಿದೆ. ತಕ್ಷಣ ಅದನ್ನು ವೆಬ್‌ಸೈಟ್‌ನಿಂದ ತೆಗೆಯಬೇಕು ಮತ್ತು ಈ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿಯ ಹಲವು ಶಾಸಕರು ಸರ್ಕಾರವನ್ನು ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಶುಕ್ರವಾರ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಶಾಸಕ ಹರತಾಳು ಹಾಲಪ್ಪ, ರಾಜ್ಯದ ದೊಡ್ಡ ಸಂಖ್ಯೆಯ ರೈತರು ಬೆಳೆಯುತ್ತಿರುವ ಅಟಿಕೆಯನ್ನು ಮಾದಕ ವಸ್ತುವಿನ ವಿಭಾಗದಲ್ಲಿ ಸೇರಿಸಿರುವುದು ಯಾರು? ಸರ್ಕಾರದ ಸೂಚನೆಯ ಮೇರೆಗೆ ವೆಬ್‌ಸೈಟ್‌ನಲ್ಲಿ ಸೇರಿಸಲಾಗಿದೆಯೇ? ಅಥವಾ ಅಧಿಕಾರಿಗಳೇ ಈ ತೀರ್ಮಾನ ತೆಗೆದುಕೊಂಡಿದ್ದಾರಾ ಎಂದು ಪ್ರಶ್ನಿಸಿದರು. 

https://imasdk.googleapis.com/js/core/bridge3.436.0_debug_en.html#goog_1450650061

ಈ ವಿಷಯ ಜನರಿಗೆ ತಿಳಿದಿದ್ದರಿಂದ ಒಂದೇ ದಿನದಲ್ಲಿ ಅಡಿಕೆಯ ಧಾರಣೆ 5 ಸಾವಿರ ರೂ.ಗಳಷ್ಟು ಕಡಿಮೆ ಆಗಿದೆ. ಈಗ ಅಡಿಕೆ ಕೊಯಿಲಿನ ಸಮಯ. ಅಡಿಕೆ ಕೊಯಿಲಿಗೆ ಬಂದಾಗಲೇ ಇಂತಹ ವಿಚಾರಗಳು ಮುನ್ನೆಲೆಗೆ ಬರುತ್ತವೆ. ಬೆಲೆ ಕುಸಿದು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ಷೇಪಿಸಿದರು. 

ಇದಕ್ಕೆ ಧ್ವನಿಗೂಡಿಸಿದ ಆರಗ ಜ್ಞಾನೇಂದ್ರ, ವೆಬ್‌ಸೈಟ್‌ನಲ್ಲಿ ಅಡಿಕೆಯನ್ನು ಸೇರಿಸಿದ ಮಹಾನುಭವರು ಯಾರು ಎಂಬ ಬಗ್ಗೆ ತನಿಖೆ ನಡೆಸಬೇಕು. ಇದು ಬೆಲೆ ಕೈಗೆ ಬರುವ ಸಂದರ್ಭದಲ್ಲಿ ಅದರ ಧಾರಣೆ ಇಳಿಸಲು ನಡೆಸುವ ವ್ಯವಸ್ಥಿತ ಪಿತೂರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾಡಾಳು ವಿರೂಪಾಕ್ಷಪ್ಪ, ಎಂ.ಪಿ.ಕುಮಾರಸ್ವಾಮಿ ಮತ್ತಿತರರು ಧ್ವನಿಗೂಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಎಪಿಎಂಸಿ ಸಚಿವರ ಗಮನಕ್ಕೆ ತಂದು ಈ ಲೋಪ ಸರಿಪಡಿಸಲಾಗುವುದು. ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *