ಹಕ್ಕುಚ್ಯುತಿ ಕುರಿತು ಚರ್ಚೆಗೆ ಅವಕಾಶ ನೀಡದ ಸ್ಪೀಕರ್‌ ವಿರುದ್ಧ ಕಾಂಗ್ರೆಸ್‌ ಸದಸ್ಯರ ಧರಣಿ

ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಅವರಿಗೆ ಅವಕಾಶ ನೀಡದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆ ವಿರೋಧಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಸೋಮವಾರ ಧರಣಿ ನಡೆಸಿದರು.

Assembly session

ಬೆಂಗಳೂರು: ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಅವರಿಗೆ ಅವಕಾಶ ನೀಡದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆ ವಿರೋಧಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಸೋಮವಾರ ಧರಣಿ ನಡೆಸಿದರು.

ಪ್ರಶ್ನೋತ್ತರ ಅವಧಿ ಮುಗಿಯುತ್ತಿದ್ದಂತೆ ಹಕ್ಕುಚ್ಯುತಿ ಮಂಡಿಸಲು ಅವಕಾಶ ನೀಡಬೇಕು ಎಂದು ಶರತ್‌ ಬಚ್ಚೇಗೌಡ ಮನವಿ ಮಾಡಿದರು. ಆಗ ಕಾಗೇರಿ, ಕಲಾಪ ಸಲಹಾ ಸಮಿತಿ ನಡೆಯುತ್ತಿದ್ದ ವೇಳೆಯಲ್ಲಿ ಶರತ್‌ ಅವರು ಹಕ್ಕು ಚ್ಯುತಿ ಕುರಿತು ಪತ್ರವೊಂದನ್ನು ನೀಡಿದ್ದಾರೆ. ಅದನ್ನು ನಾನು ಪರಿಶೀಲಿಸಿಲ್ಲ. ಪೂರಕ ಮಾಹಿತಿ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದರು. 

ಆದರೆ, ಇದಕ್ಕೊಪ್ಪದ ಶರತ್‌, ನನ್ನ ಹಕ್ಕುಚ್ಯುತಿಯಾಗಿದ್ದು, ವಿಷಯ ಪ್ರಸ್ತಾವಕ್ಕೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಧ್ವನಿಗೂಡಿಸಿದರು. ಚರ್ಚೆ ನಂತರ ನಡೆಸಬಹುದು, ಆದರೆ, ಪ್ರಸ್ತಾಪಿಸಲು ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಕಾಂಗ್ರೆಸ್‌ನ ಕೃಷ್ಣ ಬೈರೇಗೌಡ, ಹಕ್ಕುಚ್ಯುತಿಯಾಗಿದೆ ಎಂದು ಸದಸ್ಯರು ನೋಟಿಸ್‌ ನೀಡಿದ ಬಳಿಕ ವಿಷಯ ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂಬುದು ಕಲಾಪದ ನಿಯಮ ಎಂದರು. 

ಇದಕ್ಕೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ಯಾವಾಗ ಚರ್ಚೆಗೆ ಅವಕಾಶ ನೀಡಬೇಕು ಎಂಬುದನ್ನು ಸಭಾಧ್ಯಕ್ಷರು ನಿರ್ಣಯಿಸುತ್ತಾರೆ ಎಂದರು. 

ಆದರೆ, ಕಾಗೇರಿ ಮಾತ್ರ ಪತ್ರ ನೋಡಿದ ಬಳಿಕ ಅವಕಾಶ ನೀಡುವುದಾಗಿ ಪುನರುಚ್ಚರಿಸಿದರು. ಅದಕ್ಕೆ ಕಾಂಗ್ರೆಸ್‌ ಸದಸ್ಯರು ಒಪ್ಪಲಿಲ್ಲ. ಶರತ್‌ ಬಚ್ಚೇಗೌಡ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ಧರಣಿ ನಡೆಸಿದರು. ಈ ಧರಣಿ, ಗದ್ದಲದ ನಡುವೆಯೂ ಸಭಾಧ್ಯಕ್ಷರು ಮೂರು ವಿಧೇಯಕಗಳನ್ನು ಮಂಡನೆಯನ್ನು ಅನುಮೋದಿಸಿದರು. 

ನಂತರ, ಧರಣಿ ನಿರತರನ್ನು ಉದ್ದೇಶಿಸಿ, ನೀವೆಲ್ಲ ಈ ರೀತಿಯಾಗಿ ಒತ್ತಡ ಹೇರುವುದು ಸರಿಯಲ್ಲ’ ಎಂದು ಸಭಾಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು. ಪತ್ರ ನೋಡಿ ಇವತ್ತೇ ಚರ್ಚೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದರು. 
ಆಗ ಸಿದ್ದರಾಮಯ್ಯ, ಧರಣಿ ಕೈಬಿಡಲು ಸದಸ್ಯರಿಗೆ ಸೂಚಿಸಿದರು. 

ನಂತರ ಸ್ಪೀಕರ್‌, ಡಿ.ಕೆ.ಶಿವಕುಮಾರ್ ಅವರೇ, ಯಾವ ಸಂದೇಶ ನೀಡಬೇಕು ಎಂದು ಭಾವಿಸಿದ್ದೀರೋ ಅದನ್ನು ತಲುಪಿಸಿದ್ದೀರಿ ಎಂದರು. ಅದಕ್ಕೆ ಕಾಂಗ್ರೆಸ್‌ ಸದಸ್ಯರು ನಗೆಚಟಾಕಿ ಹಾರಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *