ನಾಳೆ ಸೀತಾಸ್ವಯಂವರ- ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ., ರಾವಣನ ಲಂಕೆಯಲ್ಲಿ 51 ರೂ.: ಕೇಂದ್ರದ ವಿರುದ್ಧ ಮತ್ತೆ ಸ್ವಾಮಿ ಕಿಡಿ!

ಸ್ವಪಕ್ಷೀಯ ಸರ್ಕಾರದ ವಿರುದ್ಧ ಮುಲಾಜಿಲ್ಲದೇ ಟೀಕೆ ಮಾಡುವ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 

Subramanian Swamy

ಬುಧವಾರ ಸೀತಾ ಸ್ವಯಂವರ- 2020-21 ರ ಒಡ್ಡೋಲಗ ರಂಗಪರ್ಯಟನ ರಂಗಪ್ರಸ್ತುತಿಯ ಸೀತಾಸ್ವಯಂವರ ಮೊದಲ ಪ್ರದರ್ಶನ ಫೆ,3 ರ ಬುಧವಾರಸಂಜೆ ಆರು ಗಂಟೆಗೆ ಸಿದ್ಧಾಪುರ ಶಂಕರಮಠ ಸಭಾಭವನದಲ್ಲಿ ನಡೆಯಲಿದೆ ಎಂದು ಒಡ್ಡೋಲಗ ಸಂಸ್ಥೆಯ ಅಧ್ಯಕ್ಷ ಗಣಪತಿ ಹೆಗಡೆ ಹಿತ್ತಲಕೈ ಹೇಳಿದರು. ಶಂಕರಮಠದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ನಮ್ಮ ನಾಟಕ, ರಂಗಚಟುವಟಿಕೆಗಳಿಗೆ ಶಂಕರಮಠದ ವಿಜಯ ಹೆಗಡೆಯವರ ಸಹಕಾರ ಸಿಗುತ್ತಿದೆ. ಸ್ಥಳೀಯರೂ ಕಲಾವಿದರಾಗಿ, ಕಲಾಭಿಮಾನಿಗಳಾಗಿ ನಮ್ಮನ್ನು ಪ್ರೋತ್ಸಾಹಿಸುತಿದ್ದಾರೆ. ಈ ವರ್ಷದ ಸೀತಾ ಸ್ವಯಂವರ ಎಂ.ಎಲ್. ಶ್ರೀಕಂಠೇಶಗೌಡರ ರಚನೆಯಾಗಿದ್ದು ರಂಗಕರ್ಮಿ ಪ್ರಮೋದ್ ಶಿಗ್ಗಾಂ ಒಂದು ತಿಂಗಳ ಕಾಲ ಇಲ್ಲೇ ಉಳಿದು ಈ ನಾಟಕ ನಿರ್ಧೇಶಿಸಿ ನಮಗೆ ನೆರವಾಗಿದ್ದಾರೆ ಎಂದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಂಗಕರ್ಮಿ ಪ್ರಮೋದ್ ಶಿಗ್ಗಾಂ ಸಿದ್ಧಾಪುರದಲ್ಲಿ ರಂಗಾಸಕ್ತರು, ಪ್ರತಿಭಾವಂತ ಕಲಾವಿದರ ತಂಡಗಳಿದ್ದು ಇಲ್ಲಿಯ ಜನರ ಕಲಾಭಿರುಚಿ, ಆಸಕ್ತಿ,ಈ ಪರಿಸರದ ಮೋಹದಿಂದ ರಂಗಕ್ಷೇತ್ರದ ಆಸಕ್ತಿಯಿಂದ ಇಲ್ಲಿ ತೊಡಗಿಸಿಕೊಂಡಿದ್ದೇನೆ. ನನಗಂತೂ ರಂಗಭೂಮಿಯೇ ಬದುಕು ಎಂದರು. ಸಿದ್ಧಾಪುರದ ಎರಡು ರಂಗತಂಡಗಳು,ಎರಡು ಸಂಗೀತ ತಂಡಗಳು ಇಲ್ಲಿಯ ಹೆಮ್ಮೆ,ಇಂಥ ಕಲಾಸಕ್ತರು, ಸಂಗೀತ-ಸಾಂಸ್ಕೃತಿಕ ಪ್ರೇಮಿಗಳ ಜೊತೆಗಿರುವುದೇ ನಮಗೆ ಖುಷಿ ಎಂದು ವಿಜಯ ಹೆಗಡೆ ದೊಡ್ಮನೆ ಮತ್ತು ರಂಗಕರ್ಮಿ ಗುರುಮೂರ್ತಿ ವರದಾಮೂಲ ಹೇಳಿದರು.

ನವದೆಹಲಿ: ಸ್ವಪಕ್ಷೀಯ ಸರ್ಕಾರದ ವಿರುದ್ಧ ಮುಲಾಜಿಲ್ಲದೇ ಟೀಕೆ ಮಾಡುವ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 

ಈ ಬಾರಿ ಪೆಟ್ರೋಲ್ ಬೆಲೆ ವಿಷಯಕ್ಕಾಗಿ ಕೇಂದ್ರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಫೋಟೋ ವೈರಲ್ ಆಗತೊಡಗಿದೆ. 

https://imasdk.googleapis.com/js/core/bridge3.437.0_debug_en.html#goog_1371170616

ಕೇಂದ್ರ ಬಜೆಟ್-2021 ಮಂಡನೆಯಾದ ಬಳಿಕ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಈ ಫೋಟೋ ಹಂಚಿಕೊಂಡಿರುವುದು ಮಹತ್ವ ಪಡೆದುಕೊಂಡಿದೆ. 

ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಸ್ವಾಮಿ, ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 93 ರೂಪಾಯಿಗಳಾಗಿದೆ. ಸೀತೆಯ ನೇಪಾಳದಲ್ಲಿ ಪ್ರತಿ ಲೀಟರ್ ಗೆ 53 ರೂಪಾಯಿಗಳಾಗಿದ್ದರೆ ರಾವಣನ ಲಂಕೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 51 ರೂಪಾಯಿಗಳು ಎಂದು ಬರೆದಿದ್ದು, ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಸತತ 6ನೇ ದಿನ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗದೇ ಯಥಾಸ್ಥಿತಿಯಲ್ಲಿ ಮುಂದುವರೆದಿದೆ. ದೆಹಲಿ ಹಾಗೂ ಮುಂಬೈ ಗಳಲ್ಲಿ ಪೆಟ್ರೋಲ್ ಬೆಲೆ ಅನುಕ್ರಮವಾಗಿ ಪ್ರತಿ ಲೀಟರ್ ಗೆ 86.30 ರೂಪಾಯಿ ಹಾಗೂ 92.86 ರೂಪಾಯಿಗಳಷ್ಟಾಗಿದೆ. 

ಡೀಸೆಲ್ ಬೆಲೆ ರಾಷ್ಟ್ರ ರಾಜಧಾನಿಯಲ್ಲಿ 76.48 ರೂಪಾಯಿಗಳಿದ್ದರೆ ಮುಂಬೈ ನಲ್ಲಿ 83.30 ರೂಪಾಯಿಗಳಷ್ಟಾಗಿದೆ. ಇಂಧನದ ಮೇಲೆ ವಿಧಿಸಲಾಗಿರುವ ಕೃಷಿ ಸೆಸ್ ನಿಂದಾಗಿ ತೈಲ ಬೆಲೆ ಏರಿಕೆಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *