dog attacked by cheeta -ಕಾಡುಪ್ರಾಣಿ ಹಾವಳಿ, ಜನರಲ್ಲಿ ಹೆಚ್ಚಿದ ಆತಂಕ

ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚುತಿದ್ದು ಸಾರ್ವಜನಿಕರು ಆತಂಕಕ್ಕೀಡಾಗುವಂತೆ ವಿದ್ಯಮಾನ ನಡೆಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಡಿ, ಚಿರತೆ,ಕಾಡುಕೋಣಗಳು ಬೆಳೆ, ಸಾಕುಪ್ರಾಣಿಗಳನ್ನು ಭಕ್ಷಿಸುತಿದ್ದು ಕಾಡಂಚಿನಲ್ಲಿ ಬದುಕುತ್ತಿರುವ ಜನರು ಈ ಕಾಡುಪ್ರಾಣಿಗಳ ಉಪಟಳದಿಂದ ಬೇಸತ್ತಿದ್ದಾರೆ.

ಸಿದ್ಧಾಪುರ-ಶಿರಸಿ, ಸೊರಬಾ ಭಾಗಗಳಲ್ಲಿ ಚಿರತೆಗಳು ಓಡಾಡುತಿದ್ದು ಅವು ನಾಡಿನ ಕೋಳಿ-ನಾಯಿಗಳ ಮೇಲೆ ಕಣ್ಣಿಟ್ಟಿರುವುದರಿಂದ ಇವುಗಳಿಂದ ಸಾರ್ವಜನಿಕರಿಗೂ ತೊಂದರೆಯಾಗುವ ಆತಂಕ ವ್ಯಕ್ತವಾಗಿದೆ. ಬುಧವಾರ ರಾತ್ರಿ ಕಪ್ಪುಚಿರತೆಯೊಂದು ಐಗೋಡು ಬಳಿಯ ಜಕ್ರಗುಂಡಿ ಬಳಿಯ ರೈತರೊಬ್ಬರ ಸಾಕುನಾಯಿಯನ್ನು ಹೊತ್ತೊಯ್ದು ತಿಂದಿದೆ. ಸಿದ್ಧಾಪುರ ತಾಲೂಕಿನಲ್ಲಿ ಓಡಾಡುತ್ತಿರುವ ಕಪ್ಪು-ಮತ್ತು ಚಿಟ್ಟೆ ಹುಲಿ ಅಥವಾ ಚಿರತೆಗಳು ಹಲವು ಭಾಗಗಳಲ್ಲಿ ಕಾಣಿಸಿಕೊಂಡಿದ್ದು ಇವುಗಳ ಬಗ್ಗೆ ಜನರಲ್ಲಿ ಭಯ-ಭೀತಿ ಉಂಟಾಗುವಂತಾಗಿದೆ.

ಕಾಡುಕೋಣ-ಕಾಡು ಹಂದಿಗಳ ಕಾಟ- ಸಿದ್ಧಾಪುರ-ಶಿರಸಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆ ಮತ್ತು ಶಿವಮೊಗ್ಗಗಳಲ್ಲಿ ಕಾಡುಕೋಣ, ಕಾಡುಹಂದಿಗಳ ಕಾಟ ಮಿತಿಮೀರಿದ್ದು ಇವು ರೈತರ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿವೆ. ಇಂಥ ಕಾಡುಪ್ರಾಣಿ ದಾಳಿಗೆ ಹಾಳಾದ ಬೆಳೆಗಳಿಗೆ ಯೋಗ್ಯ ಪರಿಹಾರ ಸಿಗುತ್ತಿಲ್ಲ. ಜನರು-ರೈತರಿಗೆ ತೊಂದರೆಮಾಡುತ್ತಿರುವ ಕಾಡುಪ್ರಾಣಿಗಳನ್ನು ಹೊಡೆದರೆ ಕಠಿಣ ಶಿಕ್ಷೆ ವಿಧಿಸುವ ಸರ್ಕಾರಿ ವ್ಯವಸ್ಥೆ ಕಾಡುಪ್ರಾಣಿಗಳಿಂದಾಗುತ್ತಿರುವ ಹಾನಿ, ತೊಂದರೆಗಳ ಬಗ್ಗೆ ಸೂಕ್ತ ಕ್ರಮ, ವ್ಯವಸ್ಥೆ ಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *