ಸಿದ್ಧಾಪುರ ಮಂಜುಳಾ ಕಾರವಾರಕ್ಕೆ…ದಾವಣಗೆರೆ ತಹಸಿಲ್ಧಾರ್ ಪ್ರಸಾದ್ ಎಸ್.ಎ.ಸಿದ್ಧಾಪುರಕ್ಕೆ

ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ಸಿದ್ದಾಪುರ ತಹಸಿಲ್ಧಾರರಾಗಿ ಕೆಲಸ ಮಾಡುತಿದ್ದ ಮಂಜುಳಾ ಭಜಂತ್ರಿ ಕಾರವಾರಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ತಹಸಿಲ್ಧಾರ್ ಆಗಿ ವರ್ಗಾವಣೆಯಾಗಿದ್ದರೆ ಅವರ ಜಾಗಕ್ಕೆ ದಾವಣಗೆರೆಯಲ್ಲಿ ಚುನಾವಣಾ ತಹಸಿಲ್ಧಾರ್ ಆಗಿ ಕಾರ್ಯನಿರ್ವಹಿಸುತಿದ್ದ ಪ್ರಸಾದ್ ಎಸ್. ಎ. ಯವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ.

ಸಿದ್ದಾಪುರ:ಜೀವನಕ್ಕೆ ಬೆಳಕು ನೀಡುವಗುರುವಿನ ಜನ್ಮೋತ್ಸವವನ್ನು ಪ್ರತಿ ಮನೆಯಿಂದ ದೀಪ ತಂದು ದೀಪೋತ್ಸವದರೀತಿಯಲ್ಲಿ ಆಚರಿಸಿರುವುದು ಒಂದುಅರ್ಥಪೂರ್ಣವಾದಕಾರ್ಯವಾಗಿದೆಎಂದು ನಿವೃತ್ತ ಪ್ರಿನ್ಸಿಪಾಲ್ ಸುರೇಂದ್ರದಫೇ ದಾರಅಭಿಪ್ರಾಯಪಟ್ಟರು.
ಅವರುತಾಲೂಕಿನ ಹೆರವಳ್ಳಿಯಲ್ಲಿ ಮಡಿವಾಳ ಮಾಚಿದೇವರ ಮಂದಿರದಲ್ಲಿಆಚರಿಸಲಾದ ವಚನರಕ್ಷಕ ವೀರ ಮಡಿವಾಳ ಜಯಂತ್ಯೋತ್ಸವದಲ್ಲಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮೊಳಗೆ ದೇವರನ್ನುಕಾಣಬೇಕು.ಹಿರಿಯರನ್ನುಗೌರವಿಸಬೇಕು.ತಮ್ಮಲ್ಲಿರುವ ಒಣ ಪ್ರತಿಷ್ಠೆಯನ್ನು ಬಿಟ್ಟುಎಲ್ಲರನ್ನು ಸಮಾನವಾಗಿಕಾಣಬೇಕು.ಅವಾಗ ಸಮಾಜದಅಭಿವೃದ್ಧಿಯಾಗುತ್ತದೆಎಂದರು.

ಪತ್ರಕರ್ತಕನ್ನೇಶ ಕೋಲಸಶಿರ್ಸಿ ಮಾತನಾಡಿ ಷೋಷಣೆಗೆ ಒಳಗಾದವರನ್ನು ರಕ್ಷಿಸಲು ಹೋರಾಟ ಮಾಡಿದ ಮಹಾನ್ ವ್ಯಕ್ತಿಗಳು ಶಿವಶರಣರು. ನೇರ ನುಡಿಯ ವ್ಯಕ್ತಿತ್ವದ ಮಾಚಿದೇವರು ಸಮಾಜದಲ್ಲಿನ ಮನಸ್ಸಿನ ಕೊಳೆ ತೊಳೆಯಲು ಅವತಾರ ವೆತ್ತಿದ್ದರು. ಸಮಾಜದಲ್ಲಿ ಸತ್ಯ, ಪ್ರಾಮಾಣಿಕತೆಗೆ ಬೆಲೆ ಇದೆಎಂದು ತೋರಿಸಿಕೊಟ್ಟವರು ಮಾಚಿದೇವರು.ಶರಣರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕುಎಂದರು.
ಪತ್ರಕರ್ತ ದೀವಾಕರ ನಾಯ್ಕ ಶಿವಶರಣರ ವಚನಗಳಲ್ಲಿ ಮನುಕುಲದಉದ್ಧಾರದ ಸಂದೇಶಗಳಿವೆ. ಇಂತಹ ಕಾರ್ಯಕ್ರಮಗಳಿಂದ ಸಮಾಜದ ಸಮ್ಮಿಳಿತವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿಪತ್ರಕರ್ತ ಸುರೇಶ ಮಡಿವಾಳಕಡಕೇರಿ,ಗ್ರಾಮಕಮಿಟಿಅಧ್ಯಕ್ಷ ಕೃಷ್ಣ ಮಡಿವಾಳ ಉಪಸ್ಥಿತರಿದ್ದರು.ಅರ್ಚಕ ಸದಾನಂದಎಸ್‍ಗೌಡ ಸ್ವಾಗತಿಸಿದರು.ಧರ್ಮಪ್ಪ ನಿರೂಪಿಸಿ ವಂದಿಸಿದರು.

ಅವಿರೋಧ ಆಯ್ಕೆ- ಸಿದ್ದಾಪುರ:ತಾಲೂಕಿನ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷದ ಅವಧಿಗೆ ಅಧ್ಯಕ್ಷರಾಗಿ ಮಹಾಬಲೇಶ್ವರ ದೇವರು ಭಟ್ಟ ಅಗ್ಗೆರೆ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಗಜಾನನ ಹೆಗಡೆ ಹಾರ್ಸಿಕಟ್ಟಾ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಸೋಮವಾರ ಸಂಘದ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಆಡಳಿತ ಮಂಡಳಿ ನಿರ್ದೇಶಕ ಅನಂತ ವಿಘ್ನೇಶ್ವರ ಹೆಗಡೆ ಗೊಂಟನಾಳ,ಅನಂತ ಸುಬ್ರಾಯ ಹೆಗಡೆ ಹೊಸಗದ್ದೆ, ಅಶೋಕ ರಾಮಚಂದ್ರ ಹೆಗಡೆ ಹೀನಗಾರ, ನಾಗರಾಜ ಶೇಷಗಿರಿ ಹೆಗಡೆ ಹುಲಿಮನೆ, ಮಂಜುನಾಥ ಕೃಷ್ಣ ನಾಯ್ಕ ತೆಂಗಿನಮನೆ, ವಿಘ್ನೇಶ್ವರ ಹನುಮಂತ ಗೌಡ ಮಾದ್ಲಮನೆ, ಸುಮಾ ಮಂಜುನಾಥ ಹೆಗಡೆ ಹೊನ್ನೆಹದ್ದ, ನಾಗರಾಜ ಬಂಗಾರೇಶ್ವರ ಹೆಗಡೆ ಹೊಲಗದ್ದೆ, ಸುಧಾಕರ ಗಣಪ ಹರಿಜನ ಹೊನ್ನೆಹದ್ದ ಉಪಸ್ಥಿತರಿದ್ದರು. ಚುನಾವಣಾಧಿಕಾರಿ ಆಗಿ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಕುಮಾರ ಸಿ.ಜಿ. ಕಾರ್ಯನಿರ್ವಹಿಸಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *