ಅರಣ್ಯ ಇಲಾಖೆಗೆ ಕೇಂದ್ರದಿಂದ ಅಪಾರ ಹಣ: ಅನುದಾನ ಬಳಕೆಗೆ ಗೊಂದಲದಲ್ಲಿರುವ ಅಧಿಕಾರಿಗಳು!

ಅರಣ್ಯ ನಿರ್ವಹಣೆಗಾಗಿ ಈ ವರ್ಷ ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಲ್ಲಿ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಸಿಂಹ ಪಾಲು ಪಡೆದಿದೆ. 

Representational image

ಬೆಂಗಳೂರು: ಅರಣ್ಯ ನಿರ್ವಹಣೆಗಾಗಿ ಈ ವರ್ಷ ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಲ್ಲಿ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಸಿಂಹ ಪಾಲು ಪಡೆದಿದೆ. 

ಮೊದಲ ಬಾರಿಗೆ 1,350 ಕೋಟಿ ರು. ಅನುದಾನ ದೊರೆತಿದ್ದು, ಅದನ್ನು ಬಳಸಲು ಇಲಾಖೆ ಗೊಂದಲದಲ್ಲಿ ಕುಳಿತಿದೆ. ಎಲ್ಲಾ ಹುಲಿ ಮೀಸಲು ಅರಣ್ಯ, ವನ್ಯಜೀವಿ ಅಭಯಾರಣ್ಯಗಳು ಮತ್ತು ಇತರ ಕಾಡುಗಳ ನಿರ್ವಹಣೆಗೆ ಅರಣ್ಯ ಇಲಾಖೆಯು ಪಡೆಯುವ ಮೊತ್ತಕ್ಕಿಂತ ಈ ವರ್ಷ ರಾಜ್ಯದ ಪಾಲು ಹೆಚ್ಚು ಅನುದಾನ ಸಿಕ್ಕಿದೆ.

https://imasdk.googleapis.com/js/core/bridge3.438.0_debug_en.html#goog_1963966494

ಸಾಮಾನ್ಯವಾಗಿ ರಾಜ್ಯಕ್ಕೆ ಸುಮಾರು 80-100 ಕೋಟಿ ರೂ. ಅನುದಾನ ಸಿಗುತ್ತಿತ್ತು. ಕಳೆದ ವರ್ಷ, ಅರಣ್ಯ ಇಲಾಖೆಯು ಅವರು ಕೈಗೊಳ್ಳಬೇಕಾದ ಕೆಲಸಗಳಿಗಾಗಿ 269 ಕೋಟಿ ರೂ. ನೀಡಲಾಗಿತ್ತು. ಈ ವರ್ಷ ಅರಣ್ಯ ಸಂರಕ್ಷಣೆಗಾಗಿ ಕೇಂದ್ರವು ಎಲ್ಲಾ ರಾಜ್ಯಗಳಿಗೆ ಒಟ್ಟು 48,000 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ.

ಈ ಮೊತ್ತವು ಅಪಾರವಾಗಿದ್ದು ಹಣವನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಇಲಾಖೆ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ ಎಂದು ತಜ್ಞರು ತಿಳಿಸಿದ್ದಾರೆ, ಅರಣ್ಯ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಕ್ರಮ ಮಾಡುವ ಬದಲು, ಅರಣ್ಯ ಇಲಾಖೆಯು ಬುಡಕಟ್ಟು ಜನಾಂಗದವರ ಪುನರ್ವಸತಿಗಾಗಿ ಕೆಲಸ ಮಾಡಬೇಕು, ಏಕೆಂದರೆ ಅರಣ್ಯ ಸಂರಕ್ಷಣೆಗೆ ಸಿದ್ಧರಿದ್ದಾರೆ ಎಂದು ಇಲಾಖೆಯ ಕೆಲ ಅದಿಕಾರಿಗಳು ತಿಳಿಸಿದ್ದಾರೆ. 

ಹಣವನ್ನು ಯಾವುದಕ್ಕೆ ಬಳಸಬೇಕು, ಯಾವ ಕೆಲಸಕ್ಕೆ ಬಳಸಬಾರದು ಎಂಬು ಬಗ್ಗೆ ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಲು ಇದು ಸೂಕ್ತ ಸಮಯ ಎಂದು ತಿಳಿಸಿದ್ದಾರೆ. ಅರಣ್ಯ ಕಾವಲುಗಾರರಿಗೆ ಪಡಿತರ, ಬಟ್ಟೆ ಇತ್ಯಾದಿಗಳನ್ನು ಒದಗಿಸುವಂತಹ ಕೆಲಸಗಳನ್ನು 4-5 ಕೋಟಿ ರೂ. ಗಳಲ್ಲಿ ಮಾಬಡಬಹುದು, ಇದರ ಬದಲಿಗೆ ಅವರು ಅರಣ್ಯ ಕಾವಲುಗಾರರ ವೇತನವನ್ನು ಪಾವತಿಸುವ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ. 

ಕ್ಯಾಂಪಾ ನಿಧಿಯ ರಾಜ್ಯದ ಪಾಲನ್ನು ಒಂದೇ ಸಮಯದಲ್ಲಿ ಬಳಸಲಾಗುವುದಿಲ್ಲ. ಖರ್ಚು ಮಾಡುವ ಮೊದಲು ರಾಷ್ಟ್ರೀಯ ಕ್ಯಾಂಪಾ ಫಂಡ್ ಮಂಡಳಿಯ ಅನುಮೋದನೆ ಅಗತ್ಯವಿದೆ ಎಂದು ಕ್ಯಾಂಪಾದ ಹೆಚ್ಚುವರಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಪುನೀತ್ ಪಾಠಕ್ ಹೇಳಿದ್ದಾರೆ. 

ಈ ಹಣವನ್ನು ಅರಣ್ಯೀಕರಣ, ವನ್ಯಜೀವಿ, ಸಂರಕ್ಷಣೆ ಮುಂತಾದವುಗಳಿಗೆ ಮಾತ್ರ ಬಳಸಬಹುದು, ಶಾಶ್ವತ ಸ್ಥಾಪನೆ ಯೋಜನೆಗಳಿಗಾಗಿ ಬಳಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಂದರ್ಭಿಕ ಚಿತ್ರ‌ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ೨೪ ಗಂಟೆಗಳಲ್ಲಿ ನಿರಂತರ ಮಳೆಯಾಗಿದೆ. ಇದರ ಪರಿಣಾಮ ಶಿರಸಿ-ಅಂಕೋಲಾ ಮಾರ್ಗದ ಮಧ್ಯೆ ಗುಡ್ಡ...

Recommended For You

About the Author: Kanneshwar Naik

Leave a Reply

Your email address will not be published. Required fields are marked *