

ರೈತರ ಹೋರಾಟ ರಾಜ್ಯಕ್ಕೆ ವಿಸ್ತರಣೆ: ರೈತರ ಪ್ರತಿಭಟನೆಯ ಮುಖಂಡರಾಗಿ ಗುರುತಿಸಿಕೊಂಡಿರುವ ರಾಕೇಶ್ ಟಿಕಾಯತ್ ಈ ತಿಂಗಳ ಅಂತ್ಯದಲ್ಲಿ ಉತ್ತರ ಕರ್ನಾಟಕದಲ್ಲಿ ಮಹಾ ಪಂಚಾಯತ್ ಎಂಬ ಸಾಮೂಹಿಕ ರ್ಯಾಲಿಯನ್ನು ನಡೆಸಲಿದ್ದಾರೆ.

ಮೈಸೂರು: ರೈತರ ಪ್ರತಿಭಟನೆಯ ಮುಖಂಡರಾಗಿ ಗುರುತಿಸಿಕೊಂಡಿರುವ ರಾಕೇಶ್ ಟಿಕಾಯತ್ ಈ ತಿಂಗಳ ಅಂತ್ಯದಲ್ಲಿ ಉತ್ತರ ಕರ್ನಾಟಕದಲ್ಲಿ ಮಹಾ ಪಂಚಾಯತ್ ಎಂಬ ಸಾಮೂಹಿಕ ರ್ಯಾಲಿಯನ್ನು ನಡೆಸಲಿದ್ದಾರೆ.

ತಮ್ಮ ಪ್ರತಿಭಟನೆಗೆ ಇನ್ನಷ್ಟು ಸಂಖ್ಯೆಯಲ್ಲಿ ರೈತರನ್ನು ಸೇರಿಸಲು ಟಿಕಾಯತ್ ಕರ್ನಾಟಕಕ್ಕೆ ಬರುತ್ತಿದ್ದಾರೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಬಡಗಲ್ಪುರ ನಾಗೇಂದ್ರ, ರಾಜ್ಯ ಬಜೆಟ್ ಅಧಿವೇಶನ ಸಂದರ್ಭದಲ್ಲಿ ರೈತರು ವಿಧಾನ ಸೌಧ ಚಲೋ ರ್ಯಾಲಿಯನ್ನು ನಡೆಸಿ ಕೃಷಿ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಲಿದ್ದಾರೆ ಎಂದರು.
ಪ್ರತಿ ಜಿಲ್ಲೆಯಿಂದ ಸೇರಿದಂತೆ 50 ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ. ಕೇರಳ ರಾಜ್ಯದಲ್ಲಿ ರೇಷ್ಮೆ ಮತ್ತು ಇತರ ಬೆಳೆಗಳಿಗೆ ಇರುವಂತೆ ಕಾಫಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಲಿದ್ದಾರೆ. ಅಲ್ಲದೆ ಪ್ರತಿಭಟನಾಕಾರರು, ಬೆಂಗಳೂರಿನಲ್ಲಿ ದಕ್ಷಿಣ ಭಾರತ ರೈತರ ದುಂಡು ಮೇಜಿನ ಸಮ್ಮೇಳನ ನಡೆಸಲಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
