ಭಕ್ತರಿಗೆ ಸಂತಸದ ಸುದ್ದಿ: ಜಾತ್ರೆ, ಧಾರ್ಮಿಕ ಉತ್ಸವಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. 

Yediyurappa

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. 

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿನ ಎಲ್ಲ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ ಮತ್ತು ರಥೋತ್ಸವ ಸೇರಿದಂತೆ ಎಲ್ಲ ಧಾರ್ಮಿಕ ಆಚರಣೆಗಳಿಗೆ ಮುಜರಾಯಿ ಇಲಾಖೆ ಅನುಮತಿ ನೀಡಿದ್ದು ಮುಂಜಾಗ್ರತಾ ಕ್ರಮ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.

ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮಂಗಳವಾರ ಹೊರಡಿಸಿರುವ ಆದೇಶದಂತೆ ಜಾತ್ರೆ, ಉತ್ಸವ, ಅನ್ನದಾಸೋಹ, ವಿಶೇಷ ಪೂಜೆ ಮತ್ತು ಪ್ರಸಾದ ವಿತರಣೆಯಂತಹ ಧಾರ್ಮಿಕ ಚಟುವಟಿಕೆಗಳಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ.

2020ರ ಮಾರ್ಚ್ ತಿಂಗಳಿನಿಂದಲೂ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಾಲಯಗಳಲ್ಲಿ ಈ ಹಿಂದಿನಂತೆ ಸಂಪ್ರದಾಯಗಳಿಗೆ ಅನುಗುಣವಾಗಿ ಉತ್ಸವ ಮತ್ತು ಪೂಜಾ ಕೈಂಕರ್ಯಗಳು ನಡೆದಿಲ್ಲ.

ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರ್ಕಾರಗಳು, ಜಿಲ್ಲಾಧಿಕಾರಿಗಳು ಹೊರಡಿಸಿರುವ ಮತ್ತು ಹೊರಡಿಸಲಿರುವ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಈ ಎಲ್ಲ ಕಾರ್ಯಗಳನ್ನೂ ನಡೆಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ. ಸೆಪ್ಟೆಂಬರ್ 1ರಂದು ಧಾರ್ಮಿಕ ಕೇಂದ್ರಗಳಲ್ಲಿ ಷರತ್ತು ಬದ್ಧ ಸೇವೆಗಳಿಗೆ ಅವಕಾಶ ನೀಡಲಾಗಿತ್ತು. (kpc)

training programme @ kavalkoppa-

ಸಿದ್ದಾಪುರ: ತಾಲೂಕಿನ ಕವಲಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ ಡಿ ಎಮ್ ಸಿ ಯವರಿಗೆ ಒಂದು ದಿನದ ತರಭೇತಿ ಕಾರ್ಯ ಗಾರ ಇಂದು ನಡೆಯಿತು.
ಎಸ ಡಿ ಎಂ ಸಿ ಸದಸ್ಯೆ ಪಾವನ ರಾಘವೇಂದ್ರ ಹೆಗಡೆ ದೀಪ ಬೆಳಗಿಸುವ ಮೂಲಕ ತರಬೇತಿ ಗೆ ಚಾಲನೆ ನೀಡಿದರು
ಪ್ರಾಸ್ತಾ ವಿಕವಾಗಿ ಮುಖ್ಯೋಧ್ಯಾಪಕರಾದ ಮಂಗಲ ಆರ ಮಡಿವಾಳ ಮಾತನಾಡಿದರು . ಸಂಪನ್ಮೂಲ ವ್ಯಕ್ತಿ ಯಾಗಿ ಶಿಕ್ಷಕಿ ವೈಶಾಲಿ ಎಸ್ ಡಿ ಎಮ್ ಸಿ ಕುರಿತಾಗಿ ಮಾಹಿತಿ ನೀಡಿದರು
ಎಲ್ಲಾ ಸದಸ್ಯರುಗಳು ತರಬೇತಿ ಪಡೆದರು. ಮನರಂಜನೆ ಗಾಗಿ ಮ್ಯೂಸಿಕಲ್ ಚೇರ್, ಗುಂಡು ಎಸೆತ ದ ಸ್ಪರ್ಧೆ ಗಳನ್ನು ನಡೆಸಲಾಯಿತು.

ಮ್ಯೂಸಿಕಲ್ ಚೇರ್ ಸ್ಪರ್ಧೆಯಲ್ಲಿ ಪಾವನ ರಾಘವೇಂದ್ರ ಹೆಗಡೆ ಪ್ರಥಮ
ರೇಖಾ ಪ್ರಶಾಂತ್ ನಾಯ್ಕ್ ದ್ವಿತೀಯ ಅನಸೂಯಾ ಪ್ರಕಾಶ್ ನಾಯ್ಕ್ ತೃತೀಯ ಸ್ಥಾನ
ಗುಂಡು ಎಸೆತ ದಲ್ಲಿ ಚಂದ್ರಶೇಖರ ನಾಲಿ ಗಾ ರ್ ಪ್ರಥಮ ರೇಖಾ ಪ್ರಶಾಂತ್ ನಾಯ್ಕ್ ದ್ವಿತೀಯ ನಿರ್ಮಲ ಚಂದ್ರಶೇಖರ ತೃತೀಯ ಸ್ಥಾನ ಪಡೆದರು
ಎಸ್ ಡಿ ಎಮ್ ಸಿ ಯ ಸದಸ್ಯರುಗಳಾದ ರಾಜೇಶ್ವರಿ ಹೆಗಡೆ ಅನಸೂಯಾ ಪ್ರಕಾಶ ನಾಯ್ಕ್ ,ರೇಖಾ ಪ್ರಶಾಂತ್ ನಾಯ್ಕ್, ಉಪಸ್ಥಿತರಿದ್ದರು.

ಶಿಕ್ಷಕ ನಾಗರಾಜ ಟಿ ಸ್ವಾಗತಿಸಿದರು. ಶಿಕ್ಷಕಿ ನಮ್ರತಾ ಪೈ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *