ನಿಲ್ಕುಂದ-ಬಡಾಳ ಸರ್ವಋತು ರಸ್ತೆಗಾಗಿ ಫೆ.18 ರಂದು ಪಾದಯಾತ್ರೆ

ಸಿದ್ದಾಪುರ: ಪುರಾತನ ಕಾಲದಿಂದಲೂ ಬ್ರಿಟಷರ ಆಶ್ರಯದಲ್ಲಿಯೂ ಲೋಕೊಪಯೋಗಿ ರಸ್ತೆಯೆಂದು ಸರಕಾರದ ದಾಖಲೆಯಲ್ಲಿ ಪ್ರಸ್ತಾಪಿಸಲ್ಪಟ್ಟ ನಿಲ್ಕುಂದ ಮಾರ್ಗವಾಗಿ ಬಡಾಳ ವರೆಗೂ ಕುಮಟಾ ಸಂಪರ್ಕ ರಸ್ತೆ ಸರಕಾರ ಮತ್ತು ಜನಪ್ರತಿನಿದಿಗಳ ನಿರ್ಲಕ್ಷ್ಯದಿಂದ ಸಂಚಾರಕ್ಕೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸರ್ವಋತು ರಸ್ತೆಗೆ ಅಗ್ರಹಿಸಿ ದಿನಾಂಕ 18 ಗುರುವಾರ ಬೃಹತ್ ಪಾದಯಾತ್ರೆಯನ್ನು ಸಂಘಟಿಸಲು ತಿರ್ಮಾನಿಸಲಾಗಿದೆ.

ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ನೇತೃತ್ವದಲ್ಲಿ, ತಂಡಾಗುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬೀರಾ ಗೌಡ ಅವರ ಅಧ್ಯಕ್ಷತೆಯಲ್ಲಿ ನಿಲ್ಕುಂದದಲ್ಲಿ ದಿನಾಂಕ 12 ಸಾಯಂಕಾಲ ಜರುಗಿದ ಸಾರ್ವಜನಿಕ ಸಭೆಯಲ್ಲಿ ನಿರ್ಣಯಿಸಲಾಗಿದ್ದು ರಸ್ತೆಗಾಗಿ ಬೀದಿಗಿಳಿದು ಹೋರಾಟ ಮಾಡಲು ನಿರ್ಧರಿಸಿರುವುದು ವಿಶೇಷವಾಗಿದೆ.

ಪುರಾತನ ಕಾಲದಿಂದಲೂ ಕರಾವಳಿ ಭಾಗಕ್ಕೆ ಘಟ್ಟದ ಮೇಲಿನ ಪ್ರದೇಶಕ್ಕೆ ಏಕೈಕ ಸಂಪರ್ಕ ರಸ್ತೆ ಇದಾಗಿತ್ತು. ತದನಂತರ ದೇವಿಮನೆ ಘಟ್ಟದ ರಸ್ತೆ ಮಾಡಲ್ಪಟ್ಟಿದ್ದು ವಿಶೇಷವಾಗಿದೆ. ತದನಂತರ ನಿಲ್ಕುಂದ-ಕುಮಟ ಸಂಪರ್ಕದ ರಸ್ತೆ ಸರಕಾರ ಮತ್ತು ಜನಪ್ರತಿನಿಧಿಗಳಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿರುವುದು ವಿಷಾಧಕರ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹೋರಾಟ ಅನಿವಾರ್ಯವೆಂದು ಸಭೆಯಲ್ಲಿ ತಿರ್ಮಾನಿಸಲಾಯಿತು. ಈ ರಸ್ತೆಯ ನಂತರ ಸ್ಥಾಪಿತವಾದ ದೇವಿಮನೆ ರಸ್ತೆ ಅಭಿವೃದ್ದಿಗೆ ಸರಕಾರ ಲಕ್ಷ್ಯ ವಹಿಸಿತ್ತೆ ವಿನಹ ನಿಲ್ಕುಂದ-ಬಡಾಳ ರಸ್ತೆ ಸಂಪೂರ್ಣ ನಿರ್ಲಕ್ಷಿಸಲ್ಪಟ್ಟಿದೆ.

ಸಿದ್ಧಾಪುರ ತಾಲೂಕಿನ ನಿಲ್ಕುಂದ, ತಂಡಾಗುಂಡಿ, ಹೆಗ್ಗರಣೆ, ಜಾನ್ಮನೆ ಕೆಲವು ಭಾಗದವರಿಗೆ ಕೇವಲ 30-35 ಕೀ.ಮಿ ಅಂತರದಲ್ಲಿ ಕುಮಟಕ್ಕೆ ತಲುಪಲು ಅವಕಾಶವನ್ನು ಅಸಮರ್ಪಕ ರಸ್ತೆ ನಿರ್ವಹಣೆಯಿಂದ ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಈ ಭಾಗದವರು ಈಗ 55-60 ಕೀಮಿ ದೂರ ಪ್ರಯಾಣಿಸಿ ಕುಮಟಕ್ಕೆ ತಲುಪುವ ಪ್ರಯಾಸ ಮಾಡುತ್ತಿದ್ದಾರೆ. ಹಿಗಾಗಿ ಸಿದ್ಧಾಪುರ ತಾಲೂಕಿನ 7 ಕೀ.ಮಿ, ಕುಮಟ ತಾಲೂಕಿನ 7 ಕೀ.ಮಿ ದುರಸ್ತಿ ಮತ್ತು ಕಾಮಗಾರಿ ಕಾರ್ಯ ಆಗಬೇಕಾಗಿದೆ. ಈ ದಿಶೆಯಲ್ಲಿ ಸರಕಾರದ ಗಮನ ಸೆಳೆಯಲು ಈ ಭಾಗದ ಜನಸಾಮಾನ್ಯರ ಮೂಲಭೂತ ಸೌಕರ್ಯದಲ್ಲಿ ಒಂದಾದ ಈ ಸರ್ವಋತು ರಸ್ತೆಯನ್ನಾಗಿ ಮಾಡಲು ನಿರಂತರ ಹೋರಾಟ ಹಮ್ಮಿಕೊಳ್ಳಲು ತಿರ್ಮಾನಿಸಲಾಗಿದೆ.

ಸಭೆಯಲ್ಲಿ ನಾಗುಪತಿ ಗೌಡ ಸ್ವಾಗತಿಸಿದರು, ಕಾರ್ಯಕ್ರಮದಲ್ಲಿ ರವೀಶ್ ಗೌಡ, ಸೀತಾರಾಮ ಗೌಡ ನೀರಗಾನ ಜಿಲ್ಲಾ ಸಂಚಾಲಕರು, ಎಪಿಎಂಸಿ ಸದಸ್ಯರು ಸೀತಾರಾಮ ನಿಂಗಾ ಗೌಡ, ದೇವೆಗೌಡ ಹೆಗ್ಗೆ, ರಮೇಶ ನಾಯ್ಕ, ಮಂಜುನಾಥ ನಾಯ್ಕ ಹೊಂಡಗದ್ದೆ, ಸೀತಾರಾಮ ಗೌಡ ಹುಕ್ಕಳಿ, ಹರಿಹರ ನಾಯ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 300 ಕ್ಕೂ ಹೆಚ್ಚು ಗ್ರಾಮಸ್ಥರು ಉಪಸ್ಥಿತರಿದ್ದರು.

ಪಾದಯಾತ್ರೆ:

ಸರ್ವಋತು ರಸ್ತೆಗೆ ಅಗ್ರಹಿಸಿ ಫೆಬ್ರವರಿ 18 ಗುರುವಾರ ಮುಂಜಾನೆ 9:30 ಗಂಟೆಗೆ ನಿಲ್ಕುಂದದಿಂದ ಬೃಹತ್ ಪಾದಯಾತ್ರೆ ಪ್ರಾರಂಭವಾಗಿ ಕರ್ಮನಘಟಗಿಯಿಂದ 2 ಕೀ.ಮಿ ದೂರದಲ್ಲಿರುವ ಸಿದ್ಧಾಪುರ-ಕುಮಟ ಗಡಿಯಾದ ಪೆರಲಮಾರಿಯಲ್ಲಿಯವರೆಗೂ 7 ಕೀ.ಮಿ ಪಾದಯಾತ್ರೆಯೂ 11 ಗಂಟೆಗೆ ತಲುಪಿ ಸಭೆಯಾಗಿ ಪರಿವರ್ತನೆಗೊಳ್ಳುವುದು. ಸದ್ರಿ ಸಭೆಗೆ ಕಂದಾಯ, ಪೋಲಿಸ್, ಲೋಕೊಪಯೋಗಿ ಹಾಗೂ ಅರಣ್ಯ ಇಲಾಖೆಯವರಿಗೆ ಮುಂಚಿತವಾಗಿ ಸಭೆಯಲ್ಲಿ ಉಪಸ್ಥಿತರಿದ್ದು, ರಸ್ತೆ ದುರಸ್ಥಿಗೆ ಮತ್ತು ವಿಳಂಬಕ್ಕೆ  ಕಾರಣದ ಸ್ಪಷ್ಪೀಕರಣ ನೀಡುವಂತೆ ಅಗ್ರಹಿಸಲಾಗುವುದೆಂದು ಸಭೆಯಲ್ಲಿ ತಿರ್ಮಾನಿಸಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *