ಡಾ.ಹರೀಶ್ ಕುಮಾರ್ ಸೇರಿ 9 ಜಿಲ್ಲಾಧಿಕಾರಿಗಳ ವರ್ಗಾವಣೆ

Yediyurappa

ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ ಹರೀಶ್ ಕುಮಾರ್ ಉದ್ಯೋಗ ಮತ್ತು ತರಬೇತಿ ಕೇಂದ್ರದ ಕಮೀಷನರ್ ಆಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಅವರ ಜಾಗಕ್ಕೆ ಮುಲ್ಲಾ ಎಂ. ರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ 9 ಜಿಲ್ಲಾಧಿಕಾರಿಗಳು ಸೇರಿದಂತೆ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಆಯುಕ್ತರಾಗಿ ಕೆ.ವಿ. ತ್ರಿಲೋಕಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ತ್ರಿಲೋಕ್ ಅವರು ಈ ಹಿಂದೆ ಕರ್ನಾಟಕ ಕೋವಿಡ್ -19 ಕ್ರಿಟಿಕಲ್ ಕೇರ್ ಸಪೋರ್ಟ್ ಕಮಿಟಿಯ ಮುಖ್ಯಸ್ಥರಾಗಿದ್ದರು.

ಐಎಎಸ್ ಅಧಿಕಾರಿ ತುಷಾರ್‌ ಗಿರಿನಾಥ್‌ ಅವರಿಗೆ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ನೀಡಲಾಗಿದೆ.

ವರ್ಗಾವಣೆಗೊಂಡ ಇತರೆ ಅಧಿಕಾರಿಗಳು
ರಾಮ್‍ಪ್ರಸಾದ್ ಮನೋಹರ್-ವ್ಯವಸ್ಥಾಪಕ ನಿರ್ದೇಶಕರು ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮ.
ಆರ್.ವೆಂಕಟೇಶ್ ಕುಮಾರ್- ಜಂಟಿ ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕಲ್ಬುರ್ಗಿ).
ಜಿ.ಎನ್.ಶಿವಮೂರ್ತಿ – ಆಯುಕ್ತರು. ಕೇನ್ ಡೆವಲಪ್‍ಮೆಂಟ್ ಮತ್ತು ನಿರ್ದೇಶಕರು, ಸಕ್ಕರೆ ಇಲಾಖೆ (ಬೆಂಗಳೂರು).
ಜೆ.ಮಂಜುನಾಥ್-ಜಿಲ್ಲಾಧಿಕಾರಿಗಳು. ಬೆಂಗಳೂರು ನಗರ.
ಡಾ.ಬಿ.ಆರ್.ಮಮತಾ- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಾರ್ವಜನಿಕ ಭೂ ನಿಗಮ. (ಬೆಂಗಳೂರು).
ಹೆಬ್ಸಿಬಾ ರಾಣಿ ಕೋರ್ಲಪತಿ – ಜಂಟಿ ವ್ಯವಸ್ಥಾಪಕ ನಿರ್ದೇಶಕರು ಕೆಯುಐಡಿಎಫ್‍ಸಿ (ಬೆಂಗಳೂರು).
ಡಾ.ರಾಕೇಶ್ ಕುಮಾರ್ -ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ (ಬೆಂಗಳೂರು).
ಡಾ.ಸೆಲ್ವಮಣಿ – ಜಿಲ್ಲಾಧಿಕಾರಿ (ಕೋಲಾರ).
ರಶ್ಮಿ ಮಹೇಶ್- ಪ್ರಧಾನ ಕಾರ್ಯದರ್ಶಿ. ಹಿಂದುಳಿದ ವರ್ಗ ಮತ್ತು ಕಲ್ಯಾಣ ಇಲಾಖೆ (ಬೆಂಗಳೂರು).
ಡಾ.ಜೆ.ರವಿಶಂಕರ್ -ಕಾರ್ಯದರ್ಶಿ. ಕನ್ನಡ ಮತ್ತು ಸಂಸೃತಿ ಇಲಾಖೆ.
ಡಾ.ಕೆ.ವಿ.ತ್ರಿಲೋಕ್‍ಚಂದ್ರ- ಆಯುಕ್ತರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.
ಡಾ.ಎಂ.ಬಿ.ವೆಂಕಟೇಶ್- ಆಯುಕ್ತರು, ವಾಟರ್ ಶೆಡ್ ಡೆವಲಪ್‍ಮೆಂಟ್ ಬೋರ್ಡ್.
ಡಾ.ಬಗಾದಿ ಗೌತಮ್- ಹೆಚ್ಚುವರಿ ಆಯುಕ್ತರು , ವಾಣಿಜ್ಯ ತೆರಿಗೆ ಇಲಾಖೆ ಜಾರಿ (ಬೆಂಗಳೂರು). (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *