ಇನ್ನೊಂದು ತಿಂಗಳಲ್ಲಿ ಬಿಎಸ್ ವೈ, ಬಿವೈಆರ್, ಈಶ್ವರಪ್ಪ ಹಗರಣ ಬಯಲು & ಕೋಲಶಿರ್ಸಿ ಮಾರಿಕಾಂಬಾ ದೇವಾಲಯಕ್ಕೆ ಅಡಿಗಲ್ಲು

ಇನ್ನೊಂದು ತಿಂಗಳಲ್ಲಿ ಬಿಎಸ್ ವೈ, ಬಿವೈಆರ್, ಈಶ್ವರಪ್ಪ ಹಗರಣ ಬಯಲು: ಶಾಸಕ ಸಂಗಮೇಶ್

ಇನ್ನೊಂದು ತಿಂಗಳಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹಗರಣ, ಅಕ್ರಮ ಆಸ್ತಿಗಳ ವಿವರಗಳನ್ನು ಬಯಲು ಮಾಡುವುದಾಗಿ…

B.K sangamesh

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿ ಶ್ರೀ ಮಾರಿಕಾಂಬಾ ದೇವಾಲಯದ ನೂತನ ಕಟ್ಟಡ ಅಡಿಗಲ್ಲು ಕಾರ್ಯಕ್ರಮ ನಡೆಯಿತು.
ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಶಿರಸಿಯ ಅಭಿಯಂತರ ಮನು ಹೆಗಡೆ ಮಾರ್ಗದರ್ಶನ ದಲ್ಲಿ ಆಡಳಿತ ಮಂಡಳಿಯವರೇ ಕಟ್ಟಡ ನಿರ್ಮಾಣ ಮಾಡಲಿದ್ದಾರೆ.
ಆಡಳಿತ ಮಂಡಳಿ ಅಧ್ಯಕ್ಷ ವಾಸುದೇವ ಸಣ್ಣತಮ್ಮ ನಾಯ್ಕ, ಉಪಾಧ್ಯಕ್ಷ ರಾಮಚಂದ್ರ ಈರಾ ಕೊಠಾರಿ,ಕಾರ್ಯದರ್ಶಿ ಆನಂದ ಹುಲಿಯಾ ನಾಯ್ಕ ಸನ್ನು ಗೌರವಾಧ್ಯಕ್ಷರುಗಳಾದ ಸೋಮನಾಥ ಎಸ್ ಗೌಡರ್, ಗಣಪತಿ ಮಂಜುನಾಥ ಹೆಗಡೆ, ಮಾದೇವ ಲಕ್ಷ್ಮಣ ನಾಯ್ಕ, ಮಂಜುನಾಥ ಎಸ್ ಶೇಟ್, ಫಂಡು ಕರಿಯ ನಾಯ್ಕಸೆರಕ್ಕಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ ಆರ್ ವಿನಾಯಕ, ಸದಸ್ಯ ಗೋವಿಂದ ಬಿ ಕೋರೆ, ಆಡಳಿತ ಕಮಿಟಿ ಸದಸ್ಯರು, ಕಟ್ಟಡ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಬೆಂಗಳೂರು: ಇನ್ನೊಂದು ತಿಂಗಳಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹಗರಣ, ಅಕ್ರಮ ಆಸ್ತಿಗಳ ವಿವರಗಳನ್ನು ಬಯಲು ಮಾಡುವುದಾಗಿ ಸದನದಿಂದ ಅಮಾನತಾಗಿರುವ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಂಗಮೇಶ್, ಸಿಎಂ, ರಾಘವೇಂದ್ರ, ಈಶ್ವರಪ್ಪ ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ಇವರ ವರ್ತನೆ ಕಂಡು ಶಿವಮೊಗ್ಗ ಜಿಲ್ಲೆಯ ಜನರೇ ಅಸಹ್ಯ ಪಡುತ್ತಿದ್ದಾರೆ. ನಮ್ಮ ಮೇಲೆ, ಕುಟುಂಬದ ಮೇಲೆ ಕೇಸ್ ಹಾಕಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ. ಸ್ಪೀಕರ್ ನಮಗೆ ನ್ಯಾಯ ಕೊಡಿಸಬೇಕು. ಯಡಿಯೂರಪ್ಪ ಸೂಚನೆ ಮೇರೆಗೆ ಸದನದಿಂದ ನನ್ನನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಇವರ ಹಗರಣ ಹೊರಬಂದು ಬಿಜೆಪಿ ಸರ್ಕಾರ ಪತನಗೊಳ್ಳಲಿದೆ. ಬಿಜೆಪಿ ಸರ್ಕಾರ ಪತನಗೊಂಡ ಬಳಿಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದರು.

ಬಿಎಸ್ ವೈ, ರಾಘವೇಂದ್ರ, ಈಶ್ವರಪ್ಪ ಹಗರಣ ನನಗೆ ಗೊತ್ತಿದೆ. ಇನ್ನೊಂದು ತಿಂಗಳಿನಲ್ಲಿ ಅವರ ಹಗರಣ ಬಿಡುಗಡೆ ಮಾಡಿ, ಅಕ್ರಮ ಆಸ್ತಿ ದಾಖಲೆ ಬಿಡುಗಡೆ ಮಾಡುತ್ತೇನೆ. ನಾನು ಬ್ಲಾಕ್ಮೇಲ್ ಮಾಡುವ ರಾಜಕಾರಣಿಯಲ್ಲ. ಹಿಂದೆ ಎಷ್ಟು ಆಸ್ತಿಯಿತ್ತು? ಈಗ ಎಷ್ಟು ಆಸ್ತಿಯಿದೆ? ಎಂಬುದೆಲ್ಲವನ್ನೂ ನಾನು ಬಯಲು ಮಾಡುತ್ತೇನೆ. ಇನ್ನೂ ಮೂರು ತಿಂಗಳಷ್ಟೇ ಈ ಸರ್ಕಾರದ ಆಯಸ್ಸು ಎಂದು ಭವಿಷ್ಯ ನುಡಿದರು.

ಈ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರಿಗೆ ಬೆಲೆಯಿಲ್ಲದಂತಾಗಿದೆ. ಸರ್ಕಾರವನ್ನು ಹೆಣ್ಣುಮಕ್ಕಳು ಅನುಮಾನದಿಂದ ನೋಡುವಂತಾಗಿದೆ. ವಿಧಾನಸೌಧದ ಪಾವಿತ್ರ್ಯತೆ ಹಾಳಾಗಿದೆ. ಸತ್ಯವಂತರಾಗಿದ್ದರೆ ಆರು ಸಚಿವರು ನ್ಯಾಯಾಲಯಕ್ಕೆ ಹೋಗುವ ಅವಶ್ಯಕತೆಯೇನಿತ್ತು? ಏಕೆ ಇವರೆಲ್ಲ ಹೆದರಿಕೊಂಡು ಮಾಧ್ಯಮಗಳ ಸುದ್ದಿಪ್ರಸಾರಕ್ಕೆ ತಡೆ ತಂದಿದ್ದಾರೆ. ಇವರುಗಳನ್ನು ಜನರು ತಮ್ಮ ಸೇವೆ ಮಾಡಲಿ ಎಂದು ಆರಿಸಿ ಕಳುಹಿಸಿದ್ದರೆ, ಇವರೆಲ್ಲ ದುಡ್ಡು ಮಾಡುವುದು, ಮಜಾ ಮಾಡುವುದನ್ನು ಮಾಡುತ್ತಿದ್ದಾರೆ. ಭದ್ರಾವತಿಯಲ್ಲಿ ಬಿಜೆಪಿ ಮಾಡಿದ ಅನ್ಯಾಯವನ್ನು ಖಂಡಿಸಿ ಮಂಗಳವಾರ ಎಸ್.ಪಿ.ಕಚೇರಿ ಎದುರು ಪ್ರತಿಭಟಿಸಿ, ಮುತ್ತಿಗೆ ಹಾಕುವುದಾಗಿ ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *