

ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನಕಾಯಿಲೆ ಮುಂಜಾಗ್ರತಾ ಕ್ರಮಗಳನ್ನು ತ್ವರಿತವಾಗಿ,ಆದ್ಯತೆಗಳ ಆಧಾರದಲ್ಲಿ ಕೈಗೊಳ್ಳುವುದಾಗಿ ಭರವಸೆ ನೀಡಿದ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಮಂಗನಕಾಯಿಲೆ ಪೀಡಿತ ಮತ್ತು ಮಂಗನಕಾಯಿಲೆಯಿಂದ ಚೇತರಿಸಿಕೊಂಡವರಿಗೆ ಅಗತ್ಯ ಚಿಕಿತ್ಸೆ,ಅನಿವಾರ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಸಿದ್ಧವಿದೆ ಎಂದಿದ್ದಾರೆ.

ಸಿದ್ಧಾಪುರದ ತಾಲೂಕಾ ಪಂಚಾಯತ್ ಸಭಾಭವನದಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಈ ಭರವಸೆ ನೀಡುವ ಮೊದಲು ವೈದ್ಯರು, ಅಧಿಕಾರಿಗಳಿಂದ ಮಂಗನಕಾಯಿಲೆ ಮುಂಜಾಗ್ರತೆ ಕ್ರಮಗಳ ಬಗ್ಗೆ ಪ್ರಗತಿ ಪರಿಶೀಲಿಸಿದರು. ಅಧಿಕಾರಿಗಳು, ಸಾರ್ವಜನಿಕರ ಅಹವಾಲುಗಳು, ಪ್ರಶ್ನೆಗಳಿಗೆ ಉತ್ತರಿಸಿ ಸಲಹೆ ಪಡೆದ ಅವರು ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ವಿಳಂಬವಿಲ್ಲದೆ ಮಾಡುತ್ತೇವೆ. ಅವಶ್ಯ ವೈದ್ಯಕೀಯ ಸಲಕರಣೆ,ಸಂರಚನೆ ಸೇರಿದ ವ್ಯವಸ್ಥೆಗಳನ್ನು ಮಾಡಿ ಮಂಗನಕಾಯಿಲೆ ನಿಯಂತ್ರಣಕ್ಕೆ ಮತ್ತು ಸಾರ್ವಜನಿಕ ಆರೋಗ್ಯ ರಕ್ಷಣೆಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






