ಒಂದು ಚುನಾವಣೆಯಿಂದ ಮತದಾನ ಹೆಚ್ಚಲಿದೆ

ಒಂದು ರಾಷ್ಟ್ರ, ಒಂದು ಚುನಾವಣೆಯಿಂದ ಮತದಾನ ಹೆಚ್ಚಲಿದೆ: ತಜ್ಞರು

ನಗರದ ಶ್ರೀ ಕೃಷ್ಣ ದೇವರಾಯ ಕಲಾ ಮಂದಿರದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಸಂಬಂಧರಾಜ್ಯ ಬಿಜೆಪಿಯ ಕೆಲವು ತಜ್ಞರು ಸಭೆ ನಡೆಸಿದರು.

File image

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಸಂಸತ್ತಿನಲ್ಲಿ ಚರ್ಚೆಯಾಗಬೇಕು, ವಿಧಾನಸಭೆಯಲ್ಲಿ ಅಲ್ಲ: ಎಂ ಸಿ ನಾಣಯ್ಯ 

ಮೊನ್ನೆ ಗುರುವಾರ ಆರಂಭವಾದ ರಾಜ್ಯ ವಿಧಾನ ಮಂಡಲ ಕಲಾಪದಲ್ಲಿ ವಿಧಾನಸಭೆಯಲ್ಲಿ ಮೊದಲೆರಡು ದಿನ ಒಂದು ರಾಷ್ಟ್ರ, ಒಂದು ಚುನಾವಣೆ ಸಂಬಂಧವೇ ಚರ್ಚೆ ಮೀಸಲಾಗಿತ್ತು.

M C Nanaiah

ಬೆಂಗಳೂರು: ಮೊನ್ನೆ ಗುರುವಾರ ಆರಂಭವಾದ ರಾಜ್ಯ ವಿಧಾನ ಮಂಡಲ ಕಲಾಪದಲ್ಲಿ ವಿಧಾನಸಭೆಯಲ್ಲಿ ಮೊದಲೆರಡು ದಿನ ಒಂದು ರಾಷ್ಟ್ರ, ಒಂದು ಚುನಾವಣೆ ಸಂಬಂಧವೇ ಚರ್ಚೆ ಮೀಸಲಾಗಿತ್ತು.

ಆದರೆ ಮೊದಲೆರಡು ದಿನ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ಕಾಂಗ್ರೆಸ್ ಶಾಸಕ ಸಂಗಮೇಶ್ ಸದನದಲ್ಲಿ ಶರ್ಟ್ ಬಿಚ್ಚಿದ್ದಕ್ಕೆ ಸ್ಪೀಕರ್ ಕೈಗೊಂಡ ಕಠಿಣ ನಿರ್ಧಾರ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ, ವಿರೋಧ, ಗದ್ದಲ, ಕೋಲಾಹಲಗಳಲ್ಲಿಯೇ ಎರಡು ದಿನ ಮುಕ್ತಾಯವಾಯಿತು. ವಾಸ್ತವವಾಗಿ ಹೇಳಬೇಕೆಂದರೆ ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಯಲೇ ಇಲ್ಲ.

ಈ ಬಗ್ಗೆ ಮಾಜಿ ಕಾನೂನು ಸಚಿವ, ಹಿರಿಯ ನಾಯಕ ಎಂ ಸಿ ನಾಣಯ್ಯ, ಇದೊಂದು ದೀರ್ಘ ಪ್ರಕ್ರಿಯೆಯಾಗಿದ್ದು ಈ ಬಗ್ಗೆ ಸಂಸತ್ತಿನಲ್ಲಿ ಮೊದಲು ಚರ್ಚೆಯಾಗಬೇಕೆ ಹೊರತು ರಾಜ್ಯ ವಿಧಾನಸಭೆಯಲ್ಲಿ ಅಲ್ಲ. ಚುನಾವಣೆಗೆ ಸಂಬಂಧಪಟ್ಟ ವಿಷಯಗಳನ್ನು ಚರ್ಚಿಸಲು ಮೊದಲು ಕೇಂದ್ರ ಸರ್ಕಾರ ಚುನಾವಣಾ ಸುಧಾರಣೆಗಳಲ್ಲಿ ಸಹಮತ ತಂದು ‘ಆಯ ರಾಮ್ ಗಯಾ ರಾಮ್’ ಸಂಸ್ಕೃತಿಯನ್ನು ಬಿಡಬೇಕು.

ಎಂ ಸಿ ನಾಣಯ್ಯ ಅವರು ವಿಧಾನ ಪರಿಷತ್ತಿಗೆ 5 ಬಾರಿ ಸದಸ್ಯರಾಗಿದ್ದರು. ಅವರೊಂದಿಗೆ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ: 
ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ನಿಮ್ಮ ಅಭಿಪ್ರಾಯವೇನು?
-ಈ ಹಿಂದೆ ದೇಶಾದ್ಯಂತ ಚುನಾವಣೆಗಳು ಏಕಕಾಲದಲ್ಲಿ ನಡೆಯುತ್ತಿದ್ದವು. ಆದರೆ ನಂತರ, ರಾಜ್ಯಗಳಲ್ಲಿ ಚುನಾಯಿತ ಸರ್ಕಾರಗಳನ್ನು ಸಂವಿಧಾನದ 356 ನೇ ವಿಧಿಯಡಿ ಯಾವ ಪಕ್ಷ ಅಧಿಕಾರದಲ್ಲಿದ್ದರೂ (ಕೇಂದ್ರದಲ್ಲಿ) ತೆಗೆದುಹಾಕುವ ಅಥವಾ ಕೆಳಗಿಳಿಸುವ ಪರಿಸ್ಥಿತಿಯನ್ನು ನಾವು ಕಂಡಿದ್ದೇವೆ. ಈಗಲೂ ಏನು ನಡೆಯುತ್ತಿದೆ ಮತ್ತು ಚುನಾಯಿತ ರಾಜ್ಯ ಸರ್ಕಾರಗಳು ಹೇಗೆ ಅಸ್ಥಿರಗೊಳ್ಳುತ್ತಿವೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ವಿಷಯವನ್ನು ಕೇಂದ್ರದಲ್ಲಿ ಚರ್ಚಿಸಬೇಕಾಗಿದೆ, ಬಜೆಟ್ ಅಧಿವೇಶನದಲ್ಲಿ ರಾಜ್ಯ ವಿಧಾನಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳುವ ಅಗತ್ಯವಿಲ್ಲ, ಅಗತ್ಯ ವಸ್ತುಗಳ ಬೆಲೆಗಳ ಏರಿಕೆ, ಇಂಧನ ಬೆಲೆ ಏರಿಕೆ, ಆರ್ಥಿಕ ಕುಸಿತ, ಕೋವಿಡ್-19 ಮುಂತಾದ ಹಲವಾರು ಗಂಭೀರ ವಿಷಯಗಳತ್ತ ತುರ್ತು ಗಮನ ಹರಿಸಬೇಕು.

ಇಂತಹ ಪರಿಕಲ್ಪನೆಯನ್ನು ಜಾರಿಗೆ ತರಲು ಇರುವ ಸವಾಲುಗಳೇನು?
ನಮ್ಮಲ್ಲಿ ಫೆಡರಲ್ ವ್ಯವಸ್ಥೆಯಿದೆ. ಏಕೀಕೃತ ಸರ್ಕಾರವಲ್ಲ. ಈ ವಿಷಯವನ್ನು ಮೊದಲು ಭಾರತದ ಚುನಾವಣಾ ಆಯೋಗ ಕೈಗೆತ್ತಿಕೊಳ್ಳಬೇಕಾಗಿದೆ. ಇದನ್ನು ಸಂಸತ್ತಿನಲ್ಲಿ ವಿವರವಾಗಿ ಚರ್ಚಿಸಬೇಕಾಗಿದೆ ಮತ್ತು ಎಲ್ಲಾ ರಾಜ್ಯಗಳು ಸಹಮತ ತೆಗೆದುಕೊಂಡು ಕೇಂದ್ರವು ಒಟ್ಟಾಗಿ ಆತ್ಮಸಾಕ್ಷಿಯ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ. ಸಂವಿಧಾನಕ್ಕೆ ಸೂಕ್ತ ತಿದ್ದುಪಡಿಗಳಿರಬೇಕು. ಇದು ಸುದೀರ್ಘ ಪ್ರಕ್ರಿಯೆ ಮತ್ತು ಫೆಡರಲ್ ವ್ಯವಸ್ಥೆಯಲ್ಲಿ ಅಸಾಧ್ಯವೆಂದು ನಾನು ಭಾವಿಸುತ್ತೇನೆ.

ಪಕ್ಷಾಂತರಗಳಿಂದಾಗಿ ಆಗಾಗ್ಗೆ ಚುನಾವಣೆಗಳನ್ನು ನಡೆಸುವ ಬಗ್ಗೆ, ವಿಶೇಷವಾಗಿ ಉಪಚುನಾವಣೆಗಳನ್ನು ನಾವು ಹೇಗೆ ಪರಿಹರಿಸುತ್ತೇವೆ?
ಮೊದಲಿಗೆ, ನಾವು ಚುನಾವಣಾ ಸುಧಾರಣೆಗಳನ್ನು ತರಬೇಕು ಮತ್ತು ಪಕ್ಷಾಂತರ ವಿರೋಧಿ ಕಾನೂನನ್ನು ಬಲಪಡಿಸಬೇಕು. ನಿರ್ದಿಷ್ಟ ಪಕ್ಷದಿಂದ ಚುನಾಯಿತರಾದ ವ್ಯಕ್ತಿಯು ಆ ಪಕ್ಷದಲ್ಲಿ ಐದು ವರ್ಷಗಳ ಕಾಲ ಇರಬೇಕು ಮತ್ತು ಪಕ್ಷಾಂತರದ ಸಂದರ್ಭದಲ್ಲಿ ಅವರನ್ನು ಐದು ವರ್ಷಗಳವರೆಗೆ ಸ್ವಯಂಚಾಲಿತವಾಗಿ ಅನರ್ಹಗೊಳಿಸಬೇಕು. ಹರಿಯಾಣದಲ್ಲಿ ಮೊದಲು ಪ್ರಾರಂಭವಾದ “ಆಯಾ ರಾಮ್ ಗಯಾ ರಾಮ್” ಸಂಸ್ಕೃತಿಯನ್ನು (ಬದಲಾಗುತ್ತಿರುವ ಪಕ್ಷಗಳು) ಕೊನೆಗಾಣಿಸುವ ಅವಶ್ಯಕತೆಯಿದೆ. ಈಗ ಸ್ಪೀಕರ್ ಬಳಿ ಇರುವ ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿರುವ ಅಧಿಕಾರಗಳನ್ನು ತೆಗೆದುಕೊಂಡು ಹೈಕೋರ್ಟ್ ನ್ಯಾಯಾಧೀಶರಿಗೆ ನೀಡಬೇಕಾಗಿದೆ. ಇದು ಈಗ ರಾಜಕೀಯ ನಿರ್ಧಾರವಾಗಿದೆ. ನಾನು ಇದನ್ನು ಹಲವು ವರ್ಷಗಳಿಂದ ಹೇಳುತ್ತಿದ್ದೇನೆ. ಪಕ್ಷಾಂತರಗಳ ಸಮಸ್ಯೆಯನ್ನು ನಿಭಾಯಿಸಲು ನಮಗೆ ಸಾಧ್ಯವಾದರೆ, ವ್ಯವಸ್ಥೆಯಲ್ಲಿನ ಹೆಚ್ಚಿನ ದುಷ್ಪರಿಣಾಮಗಳನ್ನು ನಾವು ಕೊನೆಗಾಣಿಸಲು ಸಾಧ್ಯವಾಗುತ್ತದೆ.

“ಒಂದು ರಾಷ್ಟ್ರ, ಒಂದು ಚುನಾವಣೆ” ಪರಿಕಲ್ಪನೆಯ ಪರವಾದ ವಾದವೆಂದರೆ, ಚುನಾವಣೆಗಳು ಏಕಕಾಲದಲ್ಲಿ ನಡೆದರೆ ನಾವು ಸಾಕಷ್ಟು ಸಮಯ ಮತ್ತು ಸಂಪನ್ಮೂಲಗಳನ್ನು ಉಳಿಸಬಹುದು, ಸರ್ಕಾರಗಳು ಆಡಳಿತದತ್ತ ಗಮನ ಹರಿಸಬಹುದು ಎಂದು, ನೀವು ಅದನ್ನು ಒಪ್ಪುತ್ತೀರಾ?
-ನಾನು ಅದನ್ನು ಒಪ್ಪುತ್ತೇನೆ, ಆದರೆ ನಾವು ಅಂತಹ ಪರಿಸ್ಥಿತಿಯನ್ನು ತಲುಪಬೇಕಾದರೆ, ನಾವು ಮೊದಲು ಪಕ್ಷಾಂತರದ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. ಈಗಿರುವ ಕಾನೂನು ಸ್ವತಃ ದೋಷಯುಕ್ತವಾಗಿದೆ ಆದರೆ ಅದನ್ನು ಮಾಡಲು ಯಾರೂ ಸಿದ್ಧರಿಲ್ಲ. ಅದನ್ನು ಮಾಡಿದರೆ, ನಮಗೆ ಪಕ್ಷಾಂತರಗಳು ಅಥವಾ ಆಗಾಗ್ಗೆ ಚುನಾವಣೆಗಳು ಅಥವಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಕಳೆದ ಸಮಯ ಇರುವುದಿಲ್ಲ. ನಾವು ಮಾತನಾಡುವ ಚುನಾವಣಾ ಸುಧಾರಣೆಗಳು ಬಹಳ ಸಮಯ ಮೀರಿದೆ.

ಅದನ್ನು ಉತ್ಸಾಹದಿಂದ ಮಾಡಬೇಕಾಗಿದೆ. ಪ್ರಜಾಪ್ರಭುತ್ವದ ಸ್ಥಾಪನೆಯಲ್ಲಿ, ಅದನ್ನು ಯಾವುದೇ ಒಂದು ಪಕ್ಷದಿಂದ ಮಾಡಲಾಗುವುದಿಲ್ಲ. ಎಲ್ಲಾ ರಾಜಕೀಯ ಪಕ್ಷಗಳು ನಿರ್ಧಾರಕ್ಕೆ ಬಂದು ಒಮ್ಮತವನ್ನು ನಿರ್ಮಿಸಲು ಕೇಂದ್ರ ಸರ್ಕಾರ ಮುಂದಾಗಬೇಕು.

ಬೆಂಗಳೂರು: ನಗರದ ಶ್ರೀ ಕೃಷ್ಣ ದೇವರಾಯ ಕಲಾ ಮಂದಿರದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಸಂಬಂಧರಾಜ್ಯ ಬಿಜೆಪಿಯ ಕೆಲವು ತಜ್ಞರು ಸಭೆ ನಡೆಸಿದರು.

ಸಂಸದ ತೇಜಸ್ವಿ ಸೂರ್ಯ, ಮಾಜಿ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ, ಸ್ವರಾಜ್ಯ ಆರ್ ಜಗನಾಥನ್ ಭಾಗವಹಿಸಿದ್ದರು.  ಒಂದು ರಾಷ್ಟ್ರದ ಒಂದು ಚುನಾವಣಾ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಸಾಂವಿಧಾನಿಕ ತಿದ್ದುಪಡಿಗಳು ಅಗತ್ಯ ಎಂದು ಹೇಳಿದ್ದಾರೆ.

ಇದು ರಾಷ್ಟ್ರೀಯ, ರಾಜ್ಯ, ನಿಗಮ ಮತ್ತು ಪಂಚಾಯತ್ ಮಟ್ಟದಲ್ಲಿ ಚುನಾವಣೆಗಳ ಏಕೀಕರಣಕ್ಕೆ ಅನುಕೂಲವಾಗಲಿದೆ ಎಂದು ಅವರು ಗಮನಸೆಳೆದರು.

ಆದರೆ ಈ ಬದಲಾವಣೆಗಳಿಗೆ ಪಕ್ಷಾಂತರ ವಿರೋಧಿ ಕಾನೂನು, ಅವಿಶ್ವಾಸ ನಿರ್ಣಯ ಮತ್ತು ಇತರ ನೀತಿಗಳ ಬಗ್ಗೆ ಮರುಚಿಂತನೆ ಅಗತ್ಯವಿರುತ್ತದೆ. ಇದು ನಾಗರಿಕರ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಆರ್ ಜಗನ್ನಾಥನ್ ವಿವರಿಸಿದರು.

ಇದು ಮತದಾರರ ಸಂಖ್ಯೆಯನ್ನು ಹೆಚ್ಚಿಸುವುದಲ್ಲದೆ, ಉತ್ತಮ ಆಡಳಿತಕ್ಕೆ ಸಹಕಾರಿಯಾಗುತ್ತದೆ, ಏಕೆಂದರೆ ಪಕ್ಷಗಳು ರಾಷ್ಟ್ರೀಯ, ರಾಜ್ಯ ಮತ್ತು ನಗರ ಮಟ್ಟದ ಪ್ರಣಾಳಿಕೆಗಳನ್ನು ಸಂಪರ್ಕಿಸಲು ಒತ್ತಾಯಿಸಲ್ಪಡುತ್ತವೆ” ಎಂದು ಅವರು ಹೇಳಿದರು.

ಚುನಾವಣಾ ಪ್ರಕ್ರಿಯೆಯಲ್ಲಿನ ಭ್ರಷ್ಟಾಚಾರವನ್ನು ತಡೆಯುವುದಲ್ಲದೇ ನನ್ನಂತಹ ಸರಳ ಕಾರ್ಯಕರ್ತರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವಂತೆ ಮಾಡುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *