ನಾಡಿನೆಲ್ಲೆಡೆ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ,ಕೆಲವೆಡೆ ಮಳೆ ರಗಳೆ….

ನಾಡಿನೆಲ್ಲೆಡೆ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ, ಸರತಿ ಸಾಲಲ್ಲಿ ನಿಂತು ಪರಮೇಶ್ವರನ ದರ್ಶನ ಪಡೆದ ಭಕ್ತರು

ನಾಡಿನೆಲ್ಲೆಡೆ ಇಂದು ಮಹಾ ಶಿವರಾತ್ರಿಯನ್ನು ಸಡಗರ, ಸಂಭ್ರಮ ಗಳಿಂದ ಆಚರಿಸಲಾಗುತ್ತಿದೆ. ವಿಶೇಷವಾಗಿ ಶಿವ ದೇವಾಲಯಗಳನ್ನು ಬಣ್ಣದ ದೀಪಗಳಿಂದ , ತಳಿರು ತೋರಣಗಳಿಂದ ಅಲಂಕರಿಸಲಾಗಿದೆ.

ಸಿದ್ದಾಪುರ: ತಾಲೂಕಿನ ತರಳಿ ಯಲ್ಲಿ ಮಹಾಶಿವರಾತ್ರಿ ಪರ್ವದ ದಿನವಾದ ಇಂದು ಶ್ರೀ ಸಂಸ್ಥಾನ ತರಳೀಮಠ ವತಿಯಿಂದ 33ನೇ ವರ್ಷದ 1008 ಶ್ರೀ ಸತ್ಯ ನಾರಾಯಣ ವೃತ ಕಳಸ ಪೂಜಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ನಡೆದ ಧರ್ಮಸಭೆಯ ದಿವ್ಯ ಸಾನಿಧ್ಯವನ್ನು ಮಿರ್ಜಾನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದ ಶ್ರೀ ಶ್ರೀ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ನೂತನ ಕಟ್ಟಡ ದ ನೀಲನಕ್ಷೆ ಅನಾವರಣಗೊಳಿಸಿ ದಿವ್ಯ ಸಾನಿಧ್ಯ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿದ್ದ ಬೆಂಗಳೂರು ಆರ್ಯ ಈಡಿದ ಸಂಘದ ಸಂಚಾಲಕರಾದ ರಾಘವೇಂದ್ರ ಗೌಡ ಮಾತನಾಡಿ ಮಠ ಧರ್ಮದ ಮಾರ್ಗದರ್ಶನ ಶೈಕ್ಷಣಿಕತೆ ಸದೃಢತೆ ಮಾಡುವುದು. ಈ ಕ್ಷೇತ್ರ ಧಾರ್ಮಿಕತೆ ಜೊತೆಗೆ ಶೈಕ್ಷಣಿಕ ಕ್ಷೇತ್ರವಾಗಬೇಕು ನಾವೆಲ್ಲರೂ ಧರ್ಮದ ಮಾರ್ಗದಲ್ಲಿ ನಡೆದಾಗ ನಮ್ಮ ಸಮಾಜ ಸದೃಢವಾಗಿ ನಿರ್ಮಾಣ ಮಾಡಬಹುದು ಎಂದರು

. ಸಿರಸಿ ಕೆನರಾ ಬ್ಯಾಂಕ್ ಮ್ಯಾನೇಜರ್ ಮನೋಜ ಸಿ ನಾಯ್ಕ, ಬೆಂಗಳೂರು ನಿಭಾ ಪೌಂಡೇಶನ್ ಅಧ್ಯಕ್ಷರಾದ ಪ್ರಕಾಶ. ಎಂ.
ಶಿರವಂತೆ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯರಾದ ವಿಜಯಕುಮಾರ್ ಮಾತನಾಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಸುಮಂಗಲ ವಸಂತ ನಾಯ್ಕ,, ಹಾರ್ಸಿಕಟ್ಟಾ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಧ್ಯಾ ಪ್ರಕಾಶ ನಾಯ್ಕ, ನಿವೃತ್ತ ಎಸ್ ಪಿ , ಎಸ್ ಎಚ್ ನಾಯ್ಕ, ಉಪಸ್ಥಿತರಿದ್ದರು.
ವೃತ ಸಮಿತಿ ಅಧ್ಯಕ್ಷ ರಾಜೇಶ ನಾರಾಯಣ ನಾಯ್ಕ ಕತ್ತಿ ಕೋಲಸಿರ್ಸಿ ದಂಪತಿಗಳು ಸ್ವಾಮೀಜಿಯ ಪಾದ ಪೂಜೆ ನೆರವೇರಿಸಿದರು
ಕರಾಟೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬಂಗಾರದ ಪದಕ ವಿಜೇತ ಕೊಂಡ್ಲಿ ಆನಂದಕೃಷ್ಣ ನಾಯ್ಕ,
ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಅತಿ ಹೆಚ್ಚು ಅಂಕ ಪಡೆದು ರ್ಯಾಂಕ್ ಪಡೆದಿರುವ ಮಾನಸ ಯಜ್ಞೇಶ್ವರ ನಾಯ್ಕ,ಲಕ್ಷ್ಮೀಶ್ ಚಂದ್ರಶೇಖರ್ ನಾಯ್ಕ ಕಲ್ಲೂರು ಅವರ ಅನುಪಸ್ಥಿತಿಯಲ್ಲಿ ಪಾಲಕರನ್ನು ಪುರಸ್ಕರಿಸಲಾಯಿತು.
ಕರಾಟೆ ಪಟು ಕೊಂಡ್ಲಿಯ ಆನಂದ ಕೃಷ್ಣ ನಾಯ್ಕ, ಅನಿಸಿಕೆ ವ್ಯಕ್ತಪಡಿಸಿದರು.

ಆಡಳಿತ ಮಂಡಳಿ ಅಧ್ಯಕ್ಷ ಎನ್ ಡಿ ನಾಯ್ಕ,
ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು
ಪ್ರಾಚಾರ್ಯ ಎಂ ಕೆ ನಾಯ್ಕ ಹೊಸಳ್ಳಿ ಕಾರ್ಯಕ್ರಮ ನಿರೂಪಿಸಿದರು.

Devotees throng at Shiva temples

ಬೆಂಗಳೂರು: ನಾಡಿನೆಲ್ಲೆಡೆ ಇಂದು ಮಹಾ ಶಿವರಾತ್ರಿಯನ್ನು ಸಡಗರ, ಸಂಭ್ರಮ ಗಳಿಂದ ಆಚರಿಸಲಾಗುತ್ತಿದೆ. ವಿಶೇಷವಾಗಿ ಶಿವ ದೇವಾಲಯಗಳನ್ನು ಬಣ್ಣದ ದೀಪಗಳಿಂದ , ತಳಿರು ತೋರಣಗಳಿಂದ ಅಲಂಕರಿಸಲಾಗಿದೆ.

ಬೆಂಗಳೂರಿನ ಗವಿ ಗಂಗಾಧರ ದೇವಸ್ಥಾನದಲ್ಲಿ ಮುಂಜಾನೆಯೇ ಶಿವನಿಗೆ ಅಭಿಷೇಕ ಹಾಗೂ ವಿಶೇಷ ಪೂಜೆಗಳ ವೈಭವ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ. ಇಂದು ಬೆಳಗ್ಗೆಯಿಂದಲೇ ಯಿಂದಲೇ ರುದ್ರಾಭಿಷೇಕ, ಕ್ಷೀರಾಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯುತ್ತಿವೆ. ವಿಶೇಷ ಪೂಜೆ, ಪುನಸ್ಕಾರ ಮತ್ತು ಬಿಲ್ವ ಪತ್ರೆ ಅರ್ಪಣೆ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳಿಗೆ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತರಿಗೆ ವಿಶೇಷ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರಿನ ವಿವಿಧ ಶಿವದೇಗುಲಗಳಲ್ಲಿ ಶಿವನ ದರ್ಶನಕ್ಕೆ ಅವಕಾಶ
ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಶಿವನ ಸನ್ನಿಧಾನಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಕಾಡುಮಲ್ಲೇಶ್ವರ, ಗವಿಗಂಗಾಧರೇಶ್ವರ, ಸೋಮೇಶ್ವರ ದೇವಸ್ಥಾನಗಳಲ್ಲಿ ಮುಂಜಾನೆಯೆ ಪರಮೇಶ್ವರನಿಗೆ ರುದ್ರಾಭಿಷೇಕದ ಮಜ್ಜನ, ಜಲಾಭಿಷೇಕ, ಪಂಚಾಮೃತ ಅಭಿಷೇಕಗಳನ್ನು ಮಾಡಲಾಗುತ್ತಿದೆ. ಬೆಂಗಳೂರಿನ ಶಿವನ ದೇವಾಲಯಗಳು ವಿಶೇಷ ಅಲಂಕಾರಗಳಿಂದ ಕಂಗೊಳಿಸುತ್ತಿವೆ. ಇಡೀ ದೇವಾಲಯವನ್ನು ತಳಿರು ತೋರಣದಿಂದ ಸಿಂಗರಿಸಿ ಕಬ್ಬು, ಹೂವಿನಿಂದ ಅದ್ದೂರಿ ಅಲಂಕಾರ ಮಾಡಲಾಗಿದೆ. ರಾತ್ರಿ ಜಾಗರಣೆ‌ ಹಿನ್ನೆಲೆ, ನಾಳೆ ಬೆಳಗ್ಗೆಯವರೆಗೂ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಚಾಮರಾಜಪೇಟೆಯ ಈದ್ಗಾ ಮೈದಾನದ ಬಳಿ ಇರುವ ಮಹದೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದ್ದು, ಭಕ್ತಾದಿಗಳು ಸರತಿ ಸಾಲಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. 

ಮೈಸೂರು ಅರಮನೆ ದೇಗುಲದಲ್ಲಿ ವಿಶೇಷ ಆಚರಣೆ ನಡೆಯುತ್ತಿದ್ದು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯದ ಶಿವಲಿಂಗಕ್ಕೆ ಚಿನ್ನದ ಕೊಳಗ (ಮುಖವಾಡ) ಧಾರಣೆ ಮಾಡಲಾಗಿದೆ. ಬರೋಬ್ಬರಿ 11 ಕೆಜಿ ತೂಕದ ಅಪರಂಜಿ ಚಿನ್ನದಿಂದ ಮಾಡಿರುವ ಕೊಳಗ ಇದಾಗಿದ್ದು ಶಿವರಾತ್ರಿ ದಿನದಂದು ಮಾತ್ರ ಶ್ರೀ ತ್ರೀನೇಶ್ವರ ದೇವಾಲಯದ ಶಿವಲಿಂಗಕ್ಕೆ ಧಾರಣೆ ಮಾಡಲಾಗುತ್ತದೆ. ಇದನ್ನು ಮಹಾರಾಜ ಜಯ ಚಾಮರಾಜ ಒಡೆಯರ್ ಅವರು ನೀಡಿದ್ದ ಕೊಡುಗೆ. ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತಿವೆ. ಚಿನ್ನದ ಮುಖವಾಡ ಧಾರಣೆ ಮಾಡಿದ ಶಿವಲಿಂಗ ನೋಡಲು ಭಕ್ತ ಸಾಗರವೇ ಹರಿದು ಬರುತ್ತಿದೆ.

ಇತ್ತ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇಗುಲದಲ್ಲಿ ವಿಜೃಂಭಣೆಯಿಂದ ಶಿವನಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಬೆಳಗಿನಿಂದಲೇ ದೇವಾಲಯಕ್ಕೆ ಆಗಮಿಸಿದ್ದಾರೆ. ಸರದಿ ಸಾಲಿನಲ್ಲಿ ಭಕ್ತರಿಗೆ ಶಿವನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರೆಲ್ಲ ಆತ್ಮ ಲಿಂಗ ಸ್ಪರ್ಶ ಪೂಜೆ ಮಾಡಿ ಶಿವನ ಆಶೀರ್ವಾದ ಪಡೆಯುತ್ತಿದ್ದಾರೆ. 

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಾದಪ್ಪನಿಗೆ ಹಣ್ಣುಗಳಿಂದ ಶೃಂಗಾರ ಮಾಡಲಾಗಿದೆ. ಶಿವನಿಗೆ ಸೇಬು, ದ್ರಾಕ್ಷಿ ಹಣ್ಣುಗಳಿಂದ ಶೃಂಗಾರ ಮಾಡಲಾಗಿದೆ. ವಿವಿಧ ಬಗೆಯ ತರಕಾರಿಗಳಿಂದಲೂ ಮಾದಪ್ಪನಿಗೆ ಅಲಂಕಾರ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಮಾದಪ್ಪನಿಗೆ ವಿಶೇಷ ಪೂಜೆ ಕೈಗೊಳ್ಳಲಾಗಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಹೊರಗಿನಿಂದ ಬರುವ ಭಕ್ತರಿಗೆ ಇಂದಿನಿಂದ ನಾಲ್ಕು ದಿನಗಳ ಕಾಲ ಮಾದಪ್ಪನ ದರ್ಶನಕ್ಕೆ ಅವಕಾಶ ಕಲ್ಪಿಸಿಲ್ಲ. ಕೇವಲ ಮಲೆ ಮಹದೇಶ್ವರ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನರಿಗಷ್ಟೇ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬರುವ ಪ್ರತಿಯೊಬ್ಬರೂ ಗುರುತಿನ ಚೀಟಿ ತೋರಿಸುವುದು ಕಡ್ಡಾಯ ಮಾಡಲಾಗಿದೆ.

ಕಲಬುರಗಿ ನಗರದ ಹೊರವಲಯದಲ್ಲಿರುವ ಬ್ರಹ್ಮಕುಮಾರಿ ಆಶ್ರಮದಲ್ಲಿರುವ ಶಿವಲಿಂಗಕ್ಕೆ ಆಂಧ್ರಪ್ರದೇಶ, ತೆಲಂಗಾಣ, ಮತ್ತು ಮೌಂಟ್ ಅಬುದಿಂದ 1 ಲಕ್ಷ 20 ಸಾವಿರ ಮುತ್ತುಗಳಿಂದ ಶಿವಲಿಂಗಕ್ಕೆ ಅಲಂಕಾರ ಮಾಡಲಾಗಿದೆ. 31 ಅಡಿ ಎತ್ತರದ ಮುತ್ತಿನ ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮುತ್ತಿನ ವಿಶೇಷ ಶಿವಲಿಂಗ ನೋಡಲು ಭಕ್ತರು ಆಗಮಿಸುತ್ತಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *