ಶ್ರೀರಾಮನ ಬಗ್ಗೆ ಭೈರಪ್ಪ ಮಾತನಾಡಿದರೆ ಸುಮ್ಮನಿರುತ್ತಾರೆ, ಭಗವಾನ್ ಮಾತಾಡಿದರೆ ಮಸಿ ಬಳಿಯುತ್ತಾರೆ: ಹರಿಪ್ರಸಾದ್ ಕಿಡಿ

ರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು.

SL Bhyrappa

ಬೆಂಗಳೂರು: ರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು.

ಮೇಲ್ಮನೆಯಲ್ಲಿ ಮಾತನಾಡಿದ ಹರಿಪ್ರಸಾದ್, ಸಾಹಿತಿ ಎಸ್.ಎಲ್ ಭೈರಪ್ಪ ರಾಮ ದೇವರಲ್ಲ, ಕೇವಲ ರಾಜ ಎಂದು ಹೇಳಿದ್ದಾರೆ. ರಾಮ,ಕೃಷ್ಣರ ಬಗ್ಗೆ ಮಾತಾಡುತ್ತಾರೆ. ದ್ರೌಪದಿ ಬಗ್ಗೆ ಬರೆಯುತ್ತಾರೆ. ಅವರು ನಿಮ್ಮವರು ಎಂದು ಸುಮ್ಮನಿರುತ್ತಾರೆ. 

ಅದೇ ಭಗವಾನ್ ಹೇಳಿದರೆ ಮಸಿ ಬಳಿಯುತ್ತಾರೆ. ಇಂತಹ ದ್ವಂದ್ವ ನೀತಿ ಏಕೆ? ಸಂಘ ಪರಿವಾರದವರು ಮಾತನಾಡಿದರೆ ಸುಮ್ಮನಿದ್ದು ಬೇರೆಯವರು ಮಾತನಾಡಿದರೆ ಆಕ್ಷೇಪ‌ ವ್ಯಕ್ತಪಡಿಸುವುದು ಸರಿಯಲ್ಲ. ಭೈರಪ್ಪ ಅವರ ‘ಪರ್ವ’ ಕಾದಂಬರಿಯನ್ನು ನಾಟಕ ಮಾಡಲು 1 ಕೋಟಿ ರೂ. ಕೊಡಲಾಗುತ್ತಿದೆ.

ನಿಮ್ಮ ಸಾಹಿತಿಗೆ ನೀವೇ ಪ್ರಶಸ್ತಿ ಕೊಡಿಸಿ ನಾಟಕ್ಕೂ ಹಣ ಕೊಟ್ಟಿದ್ದೀರಿ ಎಂದಾಗ ಇದಕ್ಕೆ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿ, ಭೈರಪ್ಪ ಅವರ ನಾಟಕ ‌ಸರಿಯಿಲ್ಲ‌ ಎನ್ನುವ ಹಕ್ಕು ನಿಮಗಿಲ್ಲ. ಭೈರಪ್ಪ ಜನ ಮಾನ್ಯರ ಬಗ್ಗೆ ಬರೆದಿದ್ದಾರೆ. ಅವರ ಕಾದಂಬರಿ, ಬರಹಕ್ಕೆ ಪ್ರಶಸ್ತಿ ಸಿಕ್ಕಿದೆ. ಅವರ ಒಂದು ಶಬ್ದ ಹಿಡಿದು ಈ ರೀತಿ ಹೇಳಿದರೆ ಸರಿಯಲ್ಲ ಎಂದು ಟೀಕಿಸಿದರು.

ಈ ವೇಳೆ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಮಾತನಾಡಿ, ವಿಶ್ವಮಾನವ ಸಂದೇಶ ಸಾರಿದ ಕುವೆಂಪು ರಚಿತ ಮಲೆಗಳಲ್ಲಿ ಮದುಮಗಳು ನಾಟಕಕ್ಕೆ ಯಾವ ಸರ್ಕಾರವೂ ನೆರವಿಗೆ ಬರಲಿಲ್ಲ. ಈಗ‌ ಪರ್ವಕ್ಕೆ ಸಹಕಾರ ಏಕೆ? ಈ ತಾರತಮ್ಯ ಸರಿಯಲ್ಲ, ಎಷ್ಟೆಲ್ಲಾ ಬರಹಗಾರರು, ಕಾದಂಬರಿಕಾರರಿದ್ದಾರೆ. ಆದರೆ ಅದೆಲ್ಲಾ ಬಿಟ್ಟು ಭೈರಪ್ಪ ಅವರ ನಾಟಕಕ್ಕೆ ಮಾತ್ರ ಅನುದಾನ ಕೊಟ್ಟಿರುವುದು ನಾಗರಿಕ‌ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಬಿಜೆಪಿಗರು ಸಾಹಿತಿಗಳಲ್ಲೇ ಏಕೆ ತಾರತಮ್ಯ ಮಾಡುತ್ತೀರಿ. ಬೈರಪ್ಪ ಕಾದಂಬರಿಯನ್ನು ನಾಟಕ ಮಾಡಲು 1 ಕೋಟಿ ಕೊಟ್ಟಿದ್ದಾರೆ. ಇಂತಹ ತಾರತಮ್ಯ ನಿಲ್ಲಬೇಕು ಎಂದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *