ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ಧ ಜನಾಕ್ರೋಶ

ಪಿಎಂ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪನವರು ರೈತರಿಗೆ ಸುಳ್ಳು ಹೇಳುತ್ತಿದ್ದಾರೆ. ರೈತರ ಭೂಮಿ ಕಿತ್ತುಕೊಳ್ಳುವ ಕಾನೂನು ಮಾಡುತ್ತಿದ್ದಾರೆ. ಹಾಗಾಗಿ ಈ ಮಹಾಪಂಚಾಯತ್‌ ಮೂಲಕ ರೈತರ ಶಕ್ತಿ ಪ್ರದರ್ಶನ ಮಾಡುತ್ತಿದ್ದು, ಈ ಕಾನೂನುಗಳನ್ನು ವಾಪಸ್ ಪಡೆಯದಿದ್ದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುತ್ತೇವೆ

ದಕ್ಷಿಣ ಭಾರತದ ಮತ್ತು ಕರ್ನಾಟಕದ ಮೊದಲ ರೈತ ಮಹಾಪಂಚಾಯತ್‌ಗೆ ಇಂದು ಶಿವಮೊಗ್ಗ ಸಾಕ್ಷಿಯಾಯಿತು. ಐತಿಹಾಸಿಕ ಮಹಾಪಂಚಾಯತ್‌ನಲ್ಲಿ ಹತ್ತಾರು ಸಾವಿರ ರೈತರು ನೆರೆದು ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದ ಸೈನ್ಸ್ ಕಾಲೇಜು ಮೈದಾನದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ದೆಹಲಿಯ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್ ಮತ್ತು ಯುದುವೀರ್‌ ಸಿಂಗ್‌ರವರು ಭಾಗವಹಿಸಿ ಹೋರಾಟಕ್ಕೆ ಚಾಲನೆ ನೀಡಿದರು.

ಡಾ.ದರ್ಶನ್ ಪಾಲ್ ಮಾತನಾಡಿ, “ಈ ಮಣ್ಣಿಗೆ ನಾನು ನಮನ ಸಲ್ಲಿಸಲು ಬಯಸುತ್ತೇನೆ. ಏಕೆಂದರೆ ಬಸವಣ್ಣ ಮತ್ತು ಟಿಪ್ಪುಗೆ ಜನ್ಮಕೊಟ್ಟ ಭೂಮಿ ಇದು, ಇಲ್ಲಿನ ಜನರಿಗೆ ನಮನ ಸಲ್ಲಿಸಲು ಬಯಸುತ್ತೇನೆ. ಏಕೆಂದರೆ ತುಂಗಾ ಮೂಲ ಉಳಿಸಿ ಹೋರಾಟದ ಮೂಲಕ ದಿಟ್ಟ ಹೋರಾಟ ಮಾಡಿದವರು, ನಿಮಗೆ ನಮನ” ಎಂದರು.

ದೆಹಲಿಯ ಗಡಿಗಳಲ್ಲಿ ಕೂತಿರುವ ರೈತರು ದೇಶದ ಎಲ್ಲಾ ಭಾಗದಲ್ಲಿರುವ ರೈತರು ಈ ಆಂದೋಲನದ ಬಗ್ಗೆ ಏನು ಭಾವಿಸುತ್ತಾರೆ ಎಂದು ಯೋಚಿಸುತ್ತಿದ್ದಾರೆ. ನೀವು ಇಲ್ಲಿ ಸಹಸ್ರಾರು ಜನ ಒಟ್ಟು ಸೇರಿ ಆ ರೈತ ಬಂಧುಗಳಿಗೆ ಗಟ್ಟಿ ಸಂದೇಶ ನೀಡಿದ್ದೀರಿ.. ನಾವು ಜೊತೆಗಿದ್ದೇವೆ ಎಂದು ನೀವು ಹೇಳಿದ್ಧೀರಿ ನಿಮಗೆ ಧನ್ಯವಾದ ಎಂದರು.

32 ವರ್ಷಗಳಿಂದ ಎಂಎಸ್‌ಪಿಗಾಗಿ ಹೋರಾಡುತ್ತಿದ್ದೇವೆ. ರೈತರ ಆತ್ಮಹತ್ಯೆಗಳ ವಿರುದ್ಧ ನಾವು ಹೋರಾಡುತ್ತಿರುವಾಗ ಕೋವಿಡ್ ಕಾಲದಲ್ಲಿ ಕೇಂದ್ರ ಸರ್ಕಾರ ಈ ಕರಾಳ ಕಾನೂನುಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿದೆ. ಇದರ ವಿರುದ್ಧ ಕಳೆದ 8 ತಿಂಗಳುಗಳಿಂದ ಹೋರಾಟ ನಡೆಸುತ್ತಿದ್ದೇವೆ. ನಾವು ಇಡೀ ಪಂಜಾಬ್‌ ಬಂದ್ ಮಾಡಿದ್ದೇವೆ. ರೈಲು ಸೇವೆ ಸ್ಥಗಿತಗೊಳಿಸಿದ್ದೇವೆ. ರಿಲಾಯನ್ಸ್ ಮತ್ತು ಎಸ್ಸಾರ್ ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಿ ಹೋರಾಟ ಮಾಡಿದ್ದೇವೆ ಎಂದು ದರ್ಶನ್ ಪಾಲ್ ಪಂಜಾಬ್‌ ಹೋರಾಟದ ಕುರಿತು ಮಾಹಿತಿ ನೀಡಿದರು.

ಇಂದಿಗೆ ದೆಹಲಿಯ ರೈತ ಹೋರಾಟಕ್ಕೆ 115 ದಿನಗಳಾಗಿವೆ. ಸರ್ಕಾರ ಈ ಆಂದೋಲನ ಮುರಿಯಲು ಪ್ರಯತ್ನಿಸಿತು. ಆದರೆ ಮೀನಾ ಮುತ್ತು ಗುಜ್ಜರ್‌ ರೈತರು ಒಂದೂಗೂಡಿ ರಾಜಸ್ಥಾನದಲ್ಲಿ ಹೋರಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಹಿಂದೂ ಮುಸ್ಲಿಮರು ಒಂದುಗೂಡಿ ಹೋರಾಡುತ್ತಿದ್ದಾರೆ. ಅಂದರೆ ಈ ರೈತ ಹೋರಾಟ ದಿನೇ ದಿನೇ ಗಟ್ಟಿಗೊಳ್ಳುತ್ತಿದೆ ಮತ್ತು ದೇಶಕ್ಕೆ ವಿಸ್ತರಿಸುತ್ತಿದೆ ಎಂದರು.

ಕರ್ನಾಟಕದಲ್ಲಿ ನೀವು ಐಕ್ಯ ಹೋರಾಟ ಮಾಡುತ್ತಿದ್ದೀರಿ. ಸಂಯುಕ್ತ ಹೋರಾಟ ನಡೆಸುತ್ತಿದ್ದಾರೆ. ನಾವು ಪಂಜಾಬ್‌ನಲ್ಲಿ 31 ಸಂಘಟನೆಗಳು ಒಂದುಗೂಡಿದ್ದಕ್ಕೆ ದೆಹಲಿಯ ಗಡಿಗಳಲ್ಲಿ ಗಟ್ಟಿ ಹೋರಾಟ ನಡೆಸಲು ಸಾಧ್ಯವಾಯಿತು. ಅದೇ ರೀತಿ ನೀವು ಸಹ ಒಂದುಗೂಡಿ ಹೋರಾಡುತ್ತೀರಿ ಎಂದು ನಂಬಿದ್ದೇವೆ. ಈ ಕಾರ್ಪೋರೇಟ್‌ಗಳ ವಿರುದ್ದದ ಹೋರಾಟದಲ್ಲಿ ನೀವು ಕೈ ಜೋಡಿಸುತ್ತೀರಿ ಅಲ್ಲವೇ ಎಂದು ಪಾಲ್ ಪ್ರಶ್ನಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್‌ರವರು ಮಾತನಾಡಿ “ಶಿವಮೊಗ್ಗ ಸಮಾಜವಾದಿ ಚಳವಳಿಯ ತವರೂರು. ರೈತ ಚಳವಳಿಯ ನೆಲೆ. ಕೇಂದ್ರದ ಈ ಕರಾಳ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮೊದಲ ರೈತ ಮಹಾಪಂಚಾಯತ್‌ಗೂ ಇದು ಸಾಕ್ಷಿಯಾಗಿದೆ. ಮೋದಿ ಸರ್ಕಾರ ಹಿಂದೆ ಸರಿಯುವವರೆಗೂ, ಎಂಎಸ್‌ಪಿಗಾಗಿ ಕಾನೂನು ಜಾರಿಗೊಳಿಸುವವರೆಗೂ ನಾವು ವಿರಮಿಸುವುದಿಲ್ಲ ಎಂದರು.

ಎಂಎಸ್‌ಪಿ ಇದೆ ಎಂದು ಪಿಎಂ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪನವರು ರೈತರಿಗೆ ಸುಳ್ಳು ಹೇಳುತ್ತಿದ್ದಾರೆ. ರೈತರ ಭೂಮಿ ಕಿತ್ತುಕೊಳ್ಳುವ ಕಾನೂನು ಮಾಡುತ್ತಿದ್ದಾರೆ. ಹಾಗಾಗಿ ಈ ಮಹಾಪಂಚಾಯತ್‌ ಮೂಲಕ ರೈತರ ಶಕ್ತಿ ಪ್ರದರ್ಶನ ಮಾಡುತ್ತಿದ್ದು, ಈ ಕಾನೂನುಗಳನ್ನು ವಾಪಸ್ ಪಡೆಯದಿದ್ದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುತ್ತೇವೆ ಎಂದು ಸವಾಲು ಹಾಕಿದರು. (ಗೌರಿಡಾಟ್.ಕಾಂ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *