ಸಾಹಸ,ಕ್ರೀಡೆ, ಟ್ರೆಕ್ಕಿಂಗ್ ಗೆ ಮನಮೋಹಕ ತಾಣ ಹೊನ್ನೇಮರಡು!

ದೈನಂದಿನ ಜಂಜಾಟದಿಂದ ಹೊರಬಂದು ಒಂದೆರಡು ದಿನ  ಹಾಯಾಗಿ ಕಾಲ ಕಳೆಯಬೇಕು ಜೊತೆಗೆ ಒಂದಿಷ್ಟು ಮನಸೋಲ್ಲಾಸ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಅಂದುಕೊಳ್ಳುವವರಿಗೆ ಶಿವಮೊಗ್ಗ ಜಿಲ್ಲೆಯ ಹೊನ್ನೇಮರಡು ಸುಂದರ ವಾರಾಂತ್ಯದ ರಜೆಯ ತಾಣವಾಗಿದೆ.

Honneramadu1

ಶಿವಮೊಗ್ಗ: ದೈನಂದಿನ ಜಂಜಾಟದಿಂದ ಹೊರಬಂದು ಒಂದೆರಡು ದಿನ ಹಾಯಾಗಿ ಕಾಲ ಕಳೆಯಬೇಕು ಜೊತೆಗೆ ಒಂದಿಷ್ಟು ಮನಸೋಲ್ಲಾಸ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಅಂದುಕೊಳ್ಳುವವರಿಗೆ ಜಿಲ್ಲೆಯ ಹೊನ್ನೇಮರಡು ವಾರಾಂತ್ಯದ ರಜೆಯ ತಾಣವಾಗಿದೆ.

ಇಲ್ಲಿ ನೀವು ತಂಪಾದ ಕೊಳದಲ್ಲಿ ಈಜಾಡಬಹುದು ಅಥವಾ ದೋಣಿಯಲ್ಲಿ ಸಂಚರಿಸಬಹುದು ಅಥವಾ ನಿಸರ್ಗದ ಸೌಂದರ್ಯ ಸವಿಯುತ್ತ ಚಾರಣ ಮಾಡಬಹುದು. ಸಾಗರದಿಂದ 22 ಕಿಲೋ ಮೀಟರ್ ದೂರದಲ್ಲಿರುವ ಹೊನ್ನೇಮರಡು, ಶರಾವತಿ ಹಿನ್ನೀರಿನ ಪ್ರದೇಶವಾಗಿದೆ. ಸಾಹಸಮಯ ಕ್ರೀಡೆಗೂ ಇದು ಅತ್ಯುತ್ತಮ ಸ್ಥಳವಾಗಿದೆ. 

ಹೊನ್ನೇಮರಡುವಿನ ಅಡ್ವೆಂಚರ್ ಗಳು ಕಾಲೇಜ್ ವಿದ್ಯಾರ್ಥಿಗಳು ಮತ್ತು ಕಾರ್ಪೋರೇಟ್ ಎಕ್ಸಿಕ್ಯೂಟಿವ್ ಗಳಿಗೆ ತರಬೇತಿ ಅಲ್ಲದೇ, ವಿಶೇಷ ಚೇತನ ಮಕ್ಕಳಿಗೆ ಸೇವಾ ಆಧಾರಿತ ಕ್ಯಾಂಪ್ ಗಳನ್ನು ನಡೆಸಲಾಗುತ್ತದೆ. ಇಲ್ಲಿಗೆ ಭೇಟಿ ನೀಡುವ ವಿದ್ಯಾರ್ಥಿಗಳು, ಪ್ರವಾಸಿಗರು ಜಲಕ್ರೀಡೆಗಳು, ಟ್ರೆಕ್ಕಿಂಗ್ ಮತ್ತಿತರ ಸಾಹಸ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಆನಂದಪಡುತ್ತಾರೆ. 

ಹೊನ್ನೇಮರಡುವಿನ ಕೈಗೊಳ್ಳಬಹುದಾದ ಚಟುವಟಿಕೆಗಳು:

ಫೈರ್ ಕ್ಯಾಂಪಿಂಗ್: ಇಲ್ಲಿ ಫೈರ್ ಕ್ಯಾಂಪಿಂಗ್ ಗೆ ಅವಕಾಶ ನೀಡಲಾಗುತ್ತದೆ. ನಿಸರ್ಗಕ್ಕೆ ತೊಂದರೆಯಾಗದ ರೀತಿಯಲ್ಲಿ ಫೈರ್ ಕ್ಯಾಂಪ್ ಮಾಡಲಾಗುತ್ತದೆ. ಶಿಬಿರದಲ್ಲಿ ಪಾಲ್ಗೊಳ್ಳುವವರಿಗೆ ಇದರ ಕೌಶಲ್ಯದ ಬಗ್ಗೆ ತಿಳಿಸಿಕೊಡಲಾಗುತ್ತದೆ. 

ಸ್ವಿಮ್ಮಿಂಗ್:  ಶರಾವತಿ ಹಿನ್ನೀರಿನಲ್ಲಿ ಈಜಾಡಬಹುದು. ಇಲ್ಲಿ 60 ರಿಂದ 140 ಅಡಿ ಅಳದವರೆಗೂ ನೀರು ಇರುತ್ತದೆ. ಲೈಫ್ ಜಾಕೆಟ್ ಕಡ್ಡಾಯವಾಗಿದೆ.

ಕೋರಾಕ್ಲಿಂಗ್: ಇದು ಸ್ಥಳಿಯ ಸಾಂಪ್ರದಾಯಿಕ ತೆಪ್ಪಾದ ರೀತಿಯ ದೋಣಿಯಾಗಿದೆ. 4 ರಿಂದ 6 ಜನರು ಇದರಲ್ಲಿ ತೆರಳಿ ಎಂಜಾಯ್ ಮಾಡಬಹುದು.

ಕ್ಯಾನೋಯಿಂಗ್: ಉದ್ದನೆಯ ಬೋಟ್ ನಲ್ಲಿ ಇಬ್ಬರಿಗೆ ಅವಕಾಶ ನೀಡಲಾಗುತ್ತದೆ. ಮುಂಭಾಗ ಕುಳಿತವರು ರೋಯಿಂಗ್ ಮಾಡಿದರೆ ವೇಗ ಹೆಚ್ಚಾಗುತ್ತದೆ.

ಕಾಯಕಿಂಗ್: ಒಬ್ಬನೇ ವ್ಯಕ್ತಿ  ದೋಣಿಯನ್ನು ಚಲಿಸುತ್ತಾ ನೀರಿನಲ್ಲಿ ಸಂತೋಪಡಬಹುದು ಆದರೆ, ಗಮನ, ತಾಂತ್ರಿಕ ಕೌಶಲ್ಯ ಅಗತ್ಯವಿದೆ. 

ಟ್ರೆಕ್ಕಿಂಗ್: ಬೆಟ್ಟ ಪ್ರದೇಶ ಹತ್ತಿರದಲ್ಲಿರುವುದರಿಂದ ಚಾರಣದ ಮಜಾ ಅನುಭವಿಸಬಹುದು.

ಹೊನ್ನೇಮರಡುವಿನಲ್ಲಿ ಏನನ್ನು ಮಾಡಬಹುದು, ಮಾಡಬಾರದು

ಧೂಮಪಾನ, ಮದ್ಯಪಾನ, ಮಾಂಸಾಹಾರಿ ಆಹಾರ, ಎಲೆಕ್ಟ್ರಾನಿಕ್ ಮ್ಯೂಸಿಕ್ ಬಳಸಬಾರದು, ನಿಮ್ಮ ತ್ಯಾಜ್ಯಕ್ಕೆ ನೀವೆ ಹೊಣೆ. ಆದಾಗ್ಯೂ, ನಿಮ್ಮ ಕುಟುಂಬದವರೊಂದಿಗೆ ಮಾತನಾಡಲು ಮೊಬೈಲ್ ಬಳಸಬಹುದು. ಆದರೆ, ಸಂಗೀತ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ನಿಮ್ಮ ಸ್ವಂತ ತಟ್ಟೆ, ಸ್ಫೂನ್ ಮತ್ತು ಮಗ್ಗುಗಳನ್ನು ತರಬೇಕು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *