ಸೈನಿಕ ಸಂದೀಪ್ ಪಾರ್ಥಿವ ಶರೀರ ನೋಡದ ಜನಪ್ರತಿನಿಧಿಗಳು:ಸಾರ್ವತ್ರಿಕ ಅಸಮಾಧಾನ, ಆಕ್ರೋಶ.

ಜಾರಕಂಡ ರಾಜ್ಯದ ಹಜಾರಿಭಾಗ್ ಬರಿ ಸಿ.ಆರ್.ಪಿ.ಫ್ ಕೋಬ್ರಾ ಕಮಾಂಡೋ ಪಡೆಯ ಯೋಧ ಸಿದ್ಧಾಪುರ ಹಂಗಾರಖಂಡದ ಸಂದೀಪ್ ನಾರಾಯಣ ನಾಯ್ಕ ಸಾವು ಉತ್ತರ ಕನ್ನಡ ಜಿಲ್ಲೆಯ ಜನರ ಮನಸ್ಸನ್ನು ಘಾಸಿ ಮಾಡಿದೆ. ಈ ಆಕಸ್ಮಿಕ ಸಾವಿನ ಹಿನ್ನೆಲೆಯಲ್ಲಿ ಜಿಲ್ಲೆ, ಪರಜಿಲ್ಲೆಗಳ ಜನರು ಸಾಂತ್ವನ ಹೇಳಿದ್ದಾರೆ. ಆದರೆ ಶಿರಸಿ-ಸಿದ್ದಾಪುರದ ಶಾಸಕ ರಾಜ್ಯ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಕೇಂದ್ರದ ಮಾಜಿ ಸಚಿವ ಸಂಸದ ಅನಂತಕುಮಾರ ಹೆಗಡೆ ಯೋಧನ ಸಾವನ್ನು ಉಪೇಕ್ಷಿಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಗುರುವಾರ ಮುಂಜಾನೆ ಜಾರಕಂಡ ಹಜಾರಿಭಾಗನಿಂದ ಹೊರಟ ಯೋಧನ ಶವ ಇಂದು ಮುಂಜಾನೆ ಗೋವಾ ಮೂಲಕ ಕಾರವಾರ ಮಾರ್ಗವಾಗಿ ಶಿರಸಿ ತಲುಪಿ ನಂತರ ಪಾರ್ಥಿವ ಶರೀರದ ಅಂತಿಮ ಮೆರವಣಿಗೆಯೊಂದಿಗೆ ಸ್ವಗ್ರಾಮ ತಲುಪಿತು. ಈ ಅವಧಿಯಲ್ಲಿ ತ್ಯಾಗಲಿ, ಕಾನಸೂರು ಗ್ರಾಮ ಪಂಚಾಯತ್ ಗಳ ಜನಪ್ರತಿನಿಧಿಗಳು ಭೇಟಿ ನೀಡಿದ್ದು ಬಿಟ್ಟರೆ ಈ ಭಾಗದ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸದಸ್ಯರು, ಅಧ್ಯಕ್ಷರು ಬರಲೇ ಇಲ್ಲ. ಕೆಲವು ಮುಖಂಡರು, ರಾಜಕೀಯ ನಾಯಕರು ಸೌಜನ್ಯದ ಭೇಟಿ ಮಾಡಿ ಯೋಧನ ಶವದ ಅಂತಿಮ ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಇಂದು ಮುಂಜಾನೆ ಎರಡ್ಮೂರು ಘಂಟೆಗಳ ಕಾಲ ಯೋಧನ ಶವದ ಅಂತಿಮ ದರ್ಶನ ನಡೆದರೂ ಸ್ವ ಕ್ಷೇತ್ರ, ಊರಿನಲ್ಲಿದ್ದ ಶಾಸಕ, ಸಂಸದರು ಯೋಧನ ಪಾರ್ಥಿವ ಶರೀರ ದರ್ಶನ ಮಾಡದ ಬಗ್ಗೆ ಸಾರ್ವಜನಿಕ ವಲಯ, ಸಾಮಾಜಿಕ ಜಾಲತಾಣಗಳಲ್ಲಿ ತೀವೃ ವಿರೋಧ ವ್ಯಕ್ತವಾಗಿದೆ. ಶಿರಸಿ ಮೂಲದ ಸಂಸದ ಅನಂತಕುಮಾರ ಹೆಗಡೆ, ಶಾಸಕ ವಿಶ್ವೇಶ್ವರ ಹೆಗಡೆ ಇಂದು ಸ್ವ ಕ್ಷೇತ್ರದಲ್ಲೇ ಇದ್ದು ಸಿದ್ಧಾಪುರದ ಕೊಂಡ್ಲಿ ಜಾತ್ರೆ, ಹಬ್ಬಗಳ ಮೋಜು ಮಸ್ತಿಯಲ್ಲಿ ತೊಡಗಿ ಸೈನಿಕನನ್ನು ಉಪೇಕ್ಷಿಸಿರುವ ಈ ಜನಪ್ರತಿನಿಧಿಗಳ ಉಡಾಫೆ, ಬೇಜವಾಬ್ಧಾರಿತನ ಟೀಕಿಸಿರುವ ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.

ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಶಿರಸಿ ಅಜ್ಜೀಬಳದ ದಿನೇಶ್ ನಾಯ್ಕ ಶಾಸಕ, ಸಂಸದರು ಹಿಂದತ್ವ, ಕೋಮುವಾದದ ಅಮಲಲ್ಲಿ ತೇಲುತಿದ್ದಾರೆ. ಚುನಾವಣಾ ವೇಳೆ ಕ್ಷೇತ್ರ, ಸೈನಿಕರು, ಹಿಂದುತ್ವದ ಬೂಟಾಟಿಕೆಯ ಬೊಗಳೆ ಬಿಡುವ ನಮ್ಮ ಪ್ರತಿನಿಧಿಗಳು ಸೈನಿಕನ ಸಾವನ್ನು ಉಪೇಕ್ಷಿಸಿ ನಮಗೆ ದ್ರೋಹ ಬಗೆದಿದ್ದಾರೆ ಇವರು ಸಾರ್ವಜನಿಕವಾಗಿ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಸಾರ್ವಜನಿಕ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ಈ ಬಗ್ಗೆ ಆಕ್ರೋಶದ ಮಾತುಗಳನ್ನಾಡಿರುವ ಜಿಲ್ಲಾ ಜನಪರ ವೇದಿಕೆಯ ಸದಸ್ಯ ಕೆ.ಟಿ. ನಾಯ್ಕ ಹೆಗ್ಗೇರಿ 25 ವರ್ಷಗಳಿಂದ ದೇವರು, ಧರ್ಮದ ಕ್ಷುಲ್ಲಕ ರಾಜಕೀಯ ಮಾಡುತ್ತಿರುವ ಈ ಕ್ಷೇತ್ರದ ಶಾಸಕ, ಸಂಸದರು ಜಾತ್ರೆ, ಹಬ್ಬ, ಧರ್ಮದ ನಾಟಕ ಮಾಡುತ್ತಾ ದೇವರ ಪೂಜೆ ಮಾಡುವ ಪುರೋಹಿತರಾಗಲು ಲಾಯಕ್ಕೇ ಹೊರತು ಇವರು ಜನಪ್ರತಿನಿಧಿಗಳಾಗಲು ಅಯೋಗ್ಯರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತ್ತ ಸೈನಿಕನ ಅಂತಿಮಯಾತ್ರೆ, ಶವಸಂಸ್ಕಾರದ ಕ್ರೀಯಾವಿಧಿ ನಡೆಯುತಿದ್ದರೆ… ಇತ್ತ ಗೌರವಾನ್ವಿತ ಸಭಾಪತಿಗಳು ಜಾತ್ರೆಯಲ್ಲಿ ಪಕ್ಷದ ಲೋಕಲ್ ಮುಖಂಡರ ಜೊತೆ ಪೋಟೋ ಗಳಿಗೆ ಪೋಜ್ ನೀಡುತ್ತಿರುವ ದೃಶ್ಯ
ಸಾಮಾಜಿಕ ಜಾಲತಾಣದಲ್ಲಿ ಸಂಸದ,ಶಾಸಕರಿಗೆ ಶಾಕ್…

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *