ಸೈನಿಕ ಸಂದೀಪ್ ಪಾರ್ಥಿವ ಶರೀರ ನೋಡದ ಜನಪ್ರತಿನಿಧಿಗಳು:ಸಾರ್ವತ್ರಿಕ ಅಸಮಾಧಾನ, ಆಕ್ರೋಶ.

ಜಾರಕಂಡ ರಾಜ್ಯದ ಹಜಾರಿಭಾಗ್ ಬರಿ ಸಿ.ಆರ್.ಪಿ.ಫ್ ಕೋಬ್ರಾ ಕಮಾಂಡೋ ಪಡೆಯ ಯೋಧ ಸಿದ್ಧಾಪುರ ಹಂಗಾರಖಂಡದ ಸಂದೀಪ್ ನಾರಾಯಣ ನಾಯ್ಕ ಸಾವು ಉತ್ತರ ಕನ್ನಡ ಜಿಲ್ಲೆಯ ಜನರ ಮನಸ್ಸನ್ನು ಘಾಸಿ ಮಾಡಿದೆ. ಈ ಆಕಸ್ಮಿಕ ಸಾವಿನ ಹಿನ್ನೆಲೆಯಲ್ಲಿ ಜಿಲ್ಲೆ, ಪರಜಿಲ್ಲೆಗಳ ಜನರು ಸಾಂತ್ವನ ಹೇಳಿದ್ದಾರೆ. ಆದರೆ ಶಿರಸಿ-ಸಿದ್ದಾಪುರದ ಶಾಸಕ ರಾಜ್ಯ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಕೇಂದ್ರದ ಮಾಜಿ ಸಚಿವ ಸಂಸದ ಅನಂತಕುಮಾರ ಹೆಗಡೆ ಯೋಧನ ಸಾವನ್ನು ಉಪೇಕ್ಷಿಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಗುರುವಾರ ಮುಂಜಾನೆ ಜಾರಕಂಡ ಹಜಾರಿಭಾಗನಿಂದ ಹೊರಟ ಯೋಧನ ಶವ ಇಂದು ಮುಂಜಾನೆ ಗೋವಾ ಮೂಲಕ ಕಾರವಾರ ಮಾರ್ಗವಾಗಿ ಶಿರಸಿ ತಲುಪಿ ನಂತರ ಪಾರ್ಥಿವ ಶರೀರದ ಅಂತಿಮ ಮೆರವಣಿಗೆಯೊಂದಿಗೆ ಸ್ವಗ್ರಾಮ ತಲುಪಿತು. ಈ ಅವಧಿಯಲ್ಲಿ ತ್ಯಾಗಲಿ, ಕಾನಸೂರು ಗ್ರಾಮ ಪಂಚಾಯತ್ ಗಳ ಜನಪ್ರತಿನಿಧಿಗಳು ಭೇಟಿ ನೀಡಿದ್ದು ಬಿಟ್ಟರೆ ಈ ಭಾಗದ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸದಸ್ಯರು, ಅಧ್ಯಕ್ಷರು ಬರಲೇ ಇಲ್ಲ. ಕೆಲವು ಮುಖಂಡರು, ರಾಜಕೀಯ ನಾಯಕರು ಸೌಜನ್ಯದ ಭೇಟಿ ಮಾಡಿ ಯೋಧನ ಶವದ ಅಂತಿಮ ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಇಂದು ಮುಂಜಾನೆ ಎರಡ್ಮೂರು ಘಂಟೆಗಳ ಕಾಲ ಯೋಧನ ಶವದ ಅಂತಿಮ ದರ್ಶನ ನಡೆದರೂ ಸ್ವ ಕ್ಷೇತ್ರ, ಊರಿನಲ್ಲಿದ್ದ ಶಾಸಕ, ಸಂಸದರು ಯೋಧನ ಪಾರ್ಥಿವ ಶರೀರ ದರ್ಶನ ಮಾಡದ ಬಗ್ಗೆ ಸಾರ್ವಜನಿಕ ವಲಯ, ಸಾಮಾಜಿಕ ಜಾಲತಾಣಗಳಲ್ಲಿ ತೀವೃ ವಿರೋಧ ವ್ಯಕ್ತವಾಗಿದೆ. ಶಿರಸಿ ಮೂಲದ ಸಂಸದ ಅನಂತಕುಮಾರ ಹೆಗಡೆ, ಶಾಸಕ ವಿಶ್ವೇಶ್ವರ ಹೆಗಡೆ ಇಂದು ಸ್ವ ಕ್ಷೇತ್ರದಲ್ಲೇ ಇದ್ದು ಸಿದ್ಧಾಪುರದ ಕೊಂಡ್ಲಿ ಜಾತ್ರೆ, ಹಬ್ಬಗಳ ಮೋಜು ಮಸ್ತಿಯಲ್ಲಿ ತೊಡಗಿ ಸೈನಿಕನನ್ನು ಉಪೇಕ್ಷಿಸಿರುವ ಈ ಜನಪ್ರತಿನಿಧಿಗಳ ಉಡಾಫೆ, ಬೇಜವಾಬ್ಧಾರಿತನ ಟೀಕಿಸಿರುವ ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.

ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಶಿರಸಿ ಅಜ್ಜೀಬಳದ ದಿನೇಶ್ ನಾಯ್ಕ ಶಾಸಕ, ಸಂಸದರು ಹಿಂದತ್ವ, ಕೋಮುವಾದದ ಅಮಲಲ್ಲಿ ತೇಲುತಿದ್ದಾರೆ. ಚುನಾವಣಾ ವೇಳೆ ಕ್ಷೇತ್ರ, ಸೈನಿಕರು, ಹಿಂದುತ್ವದ ಬೂಟಾಟಿಕೆಯ ಬೊಗಳೆ ಬಿಡುವ ನಮ್ಮ ಪ್ರತಿನಿಧಿಗಳು ಸೈನಿಕನ ಸಾವನ್ನು ಉಪೇಕ್ಷಿಸಿ ನಮಗೆ ದ್ರೋಹ ಬಗೆದಿದ್ದಾರೆ ಇವರು ಸಾರ್ವಜನಿಕವಾಗಿ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಸಾರ್ವಜನಿಕ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ಈ ಬಗ್ಗೆ ಆಕ್ರೋಶದ ಮಾತುಗಳನ್ನಾಡಿರುವ ಜಿಲ್ಲಾ ಜನಪರ ವೇದಿಕೆಯ ಸದಸ್ಯ ಕೆ.ಟಿ. ನಾಯ್ಕ ಹೆಗ್ಗೇರಿ 25 ವರ್ಷಗಳಿಂದ ದೇವರು, ಧರ್ಮದ ಕ್ಷುಲ್ಲಕ ರಾಜಕೀಯ ಮಾಡುತ್ತಿರುವ ಈ ಕ್ಷೇತ್ರದ ಶಾಸಕ, ಸಂಸದರು ಜಾತ್ರೆ, ಹಬ್ಬ, ಧರ್ಮದ ನಾಟಕ ಮಾಡುತ್ತಾ ದೇವರ ಪೂಜೆ ಮಾಡುವ ಪುರೋಹಿತರಾಗಲು ಲಾಯಕ್ಕೇ ಹೊರತು ಇವರು ಜನಪ್ರತಿನಿಧಿಗಳಾಗಲು ಅಯೋಗ್ಯರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತ್ತ ಸೈನಿಕನ ಅಂತಿಮಯಾತ್ರೆ, ಶವಸಂಸ್ಕಾರದ ಕ್ರೀಯಾವಿಧಿ ನಡೆಯುತಿದ್ದರೆ… ಇತ್ತ ಗೌರವಾನ್ವಿತ ಸಭಾಪತಿಗಳು ಜಾತ್ರೆಯಲ್ಲಿ ಪಕ್ಷದ ಲೋಕಲ್ ಮುಖಂಡರ ಜೊತೆ ಪೋಟೋ ಗಳಿಗೆ ಪೋಜ್ ನೀಡುತ್ತಿರುವ ದೃಶ್ಯ
ಸಾಮಾಜಿಕ ಜಾಲತಾಣದಲ್ಲಿ ಸಂಸದ,ಶಾಸಕರಿಗೆ ಶಾಕ್…

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *