ಸೈನಿಕನಿಗೆ ಅಗೌರವ: ಶಾಸಕ,ಸಂಸದರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರದ ಹಂಗಾರಕಂಡದ ಯುವಕ ಸಂದೀಪ ನಾಯ್ಕ ಸಾವು ಈಗ ಬೇರೆಯದೇ ಕಾರಣಕ್ಕೆ ಚರ್ಚೆಯ ವಿಷಯವಾಗಿದೆ.

ಹಂಗಾರಕಂಡದ ಸಂದೀಪ ನಾರಾಯಣ ನಾಯ್ಕ ಜಾರ್ಕಂಡ ಬರ್ರಿ ಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದರು. ಅವರ ಪಾರ್ಥಿವ ಶರೀರ ಶುಕ್ರವಾರ ಬೆಳಿಗ್ಗೆ ಸ್ವಗ್ರಾಮಕ್ಕೆ ಬಂದು ಮಧ್ಯಾಹ್ನದ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಸಂದೀಪನಾಯ್ಕ ಹಿತೈಶಿಗಳು,ಜಿಲ್ಲಾಡಳಿತ, ಸೇನೆಯ ಸಿಬ್ಬಂದಿಗಳು ಉಪಸ್ಥಿತರಿದ್ದು ಅಂತಿಮ ಕ್ರೀಯಾವಿಧಿ ನೆರವೇರಿಸಿದ್ದರು. ಈ ಸಮಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಸೇರಿದಂತೆ ಕೆಲವು ಪ್ರಮುಖರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಆದರೆ ಈ ಯೋಧನ ಪಾರ್ಥಿವಶರೀರ ದರ್ಶನ ಮತ್ತು ಅಂತ್ಯ ಸಂಸ್ಕಾರದ ವೇಳೆ ಸ್ಥಳಿಯ ಪ್ರಮುಖ ರಾಜಕೀಯ ನಾಯಕರು ಜನಪ್ರತಿನಿಧಿಗಳಾದ ತಾಲೂಕು ಪಂಚಾಯತ್ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಸ್ಥಳಿಯ ಶಾಸಕರು ಮತ್ತು ಸಂಸದರು ಬಾರದೆ ಸೇನೆ, ಸೈನಿಕನಿಗೆ ಅವಮಾನ ಮಾಡಿದ್ದಾರೆಂಬ ಬಗ್ಗೆ ವಿರೋಧ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರೀಯಿಸಿರುವ ಕಾಂಗ್ರೆಸ್ ಸೇನೆ ಸೈನಿಕನಿಗೆ ಅವಮಾನ ಮಾಡಿದ ಪ್ರಮುಖ ವ್ಯಕ್ತಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪೋಸ್ಟ್ ಹರಿಬಿಡುತ್ತಿರುವ ಸ್ಥಳಿಯ ಯುವಕರು ಶಿರಸಿಯಲ್ಲಿದ್ದು ಕೊಂಡ್ಲಿ ಜಾತ್ರೆಗೆ ಬೆಂಬಲಿಗರೊಂದಿಗೆ ಬರುವ ಜನಪ್ರತಿನಿಧಿಗಳಿಗೆ ಮಾರ್ಗ ಮಧ್ಯದಲ್ಲಿ ನಡೆಯುತ್ತಿದ್ದ ಸೈನಿಕನ ಅಂತ್ಯ ಸಂಸ್ಕಾರ ಬೇಡದ ವಿಚಾರವಾಯಿತೆ ಎಂದು ಪ್ರಶ್ನಿಸಿದ್ದಾರೆ.

ಜವಾಬ್ಧಾರಿಯುತ ಜನಪ್ರತಿನಿಧಿಗಳು ಯೋಧರು, ಸೇನೆಯ ಬಗ್ಗೆ ಗೌರವ, ಆದರ ಹೊಂದಿರಬೇಕು ಆದರೆ ವೇದಿಕೆ ಮೇಲೆ ದೇಶಪ್ರೇಮದ ಭಾಷಣ ಮಾಡುವವರು ಸೈನಿಕನ ಪಾರ್ಥಿವ ಶರೀರವನ್ನೂ ನೋಡದೆ ಜಾತ್ರೆ ಮಾಡುವುದೆಂದರೆ…. ಅದು ಯೋಧರಿಗೆ ಸೇನೆಗೆ ಮಾಡುವ ಅವಮಾನ ಸಂಸದ ಶಾಸಕರಿಗೆ ನೈತಿಕ ಜವಾಬ್ಧಾರಿ ಇದ್ದರೆ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಿ ರಾಜೀನಾಮೆ ನೀಡಬೇಕು.- ಭೀಮಣ್ಣ ನಾಯ್ಕ (ಡಿ.ಸಿ.ಸಿ. ಅಧ್ಯಕ್ಷರು)

ಸೈನಿಕ ಮೃತನಾಗಿ ಅಂತಿಮ ಯಾತ್ರೆ ನಡೆಯುತಿದ್ದಾಗ ಅದೇ ಮಾರ್ಗದಲ್ಲಿ ಬಂದ ಸಂಸದ ಶಾಸಕರು ಸೌಜನ್ಯಕ್ಕೂ ಮೃತರ ಪಾರ್ಥಿವ ಶರೀರ ದರ್ಶನ ಮಾಡದಿರುವುದು, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳದಿರುವುದು ಜನಪ್ರತಿನಿಧಿಗಳು, ನಾಯಕತ್ವಕ್ಕೆ ಶೋಭೆಯಲ್ಲ. ಜನಪ್ರತಿನಿಧಿಗಳಾಗಿ ಪಕ್ಷಪಾತ, ಜಾತೀಯತೆ ಮಾಡಿದ ಸಂಸದರು, ಶಾಸಕರು ಇದಕ್ಕೆ ಬೆಲೆ ತೆರಬೇಕಾಗುತ್ತದೆ. ಈಗಲೂ ಕ್ಷಮೆ ಕೇಳಿ, ನೈತಿಕತೆ, ಜವಾಬ್ಧಾರಿ ಇದ್ದರೆ ರಾಜೀನಾಮೆ ನೀಡಿ. – ವಸಂತ ನಾಯ್ಕ ಮಳಲವಳ್ಳಿ ( ಸಿದ್ಧಾಪುರ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *