ಕ್ಷಮೆ ಕೇಳದಿದ್ದರೆ ಪ್ರತಿಭಟನೆ, ಬಿ.ಜೆ.ಪಿ.ಯಲ್ಲಿ ಅಸ್ನೋಟಿಕರ್ ರಿಗೆ ಅವಕಾಶವಿಲ್ಲ

ಆತ್ಮೀಯ ಕೆ. ಜಿ. ನಾಯ್ಕರವರಿಗೆ ಅತೀವ ಪ್ರೇಮಾದರಾಭಿನಪೂರ್ವಕ ಹಾರ್ದಿಕ ಅಭಿನಂದನೆಗಳು. ಬಿಡುವಿಲ್ಲದ ರಾಜಕೀಯ ಜವಾಬ್ದಾರಿಗಳು ಮತ್ತು ಚಟುವಟಿಕೆಗಳ ಜೊತೆಗೆ ಕೊಂಡ್ಲಿ ಶ್ರೀ ಮಾರಿಕಾಂಬೆಯ ಜಾತ್ರಾ ಕಮಿಟಿಯ ಎರಡನೆಯ ಬಾರಿಗೆ ಅಧ್ಯಕ್ಷರಾಗಿ ನೀವು ಯಶಸ್ವಿಯಾಗಿ ನಿರ್ವಹಿಸಿದ ಕಾರ್ಯ/ ಜವಾಬ್ದಾರಿಗಳು, ನಿಮ್ಮ ವೈರಿಗಳೂ ಸಹ ಮೆಚ್ಚುವಂತಿತ್ತು. ನಿಜಕ್ಕೂ ಇದೊಂದು ಅತಿ ಸವಾಲಿನ ಕಾರ್ಯ. ಭಿನ್ನ ಭಿನ್ನ ಮನೋಭಾವದ ಜನರು, ಬೇರೆ ಬೇರೆ ಇಲಾಖೆಗಳು. ಕರೋನಾ ಹಾವಳಿ, ಚಿಕ್ಕ ಪುಟ್ಟ ದೋಷ, ನ್ಯೂನತೆಗಳನ್ನೇ ದೊಡ್ಡದು ಮಾಡಿ ಗಲಾಟೆ ಎಬ್ಬಿಸಲು ಸಿದ್ಧರಾಗಿರುವ ವಿಘ್ನ ಸಂತೋಷಿಗಳು, ಲಾಭವನ್ನೆ ಪ್ರಧಾನವಾಗಿಟ್ಟುಕೊಂಡು ಬಂದ ವ್ಯಾಪಾರಿಗಳು, ಶಿಸ್ತು, ಸ್ವಚ್ಛತಾ ವ್ಯವಸ್ಥೆ, ಕಾಲಕಾಲಕ್ಕೆ ಕ್ರಮಬದ್ಧವಾಗಿ ಆಗಲೇಬೇಕಾದ ವಿನಿಯೋಗಗಳು. ಸಂಪ್ರದಾಯಗಳು, ಜನರ ಟೀಕೆ ಟಿಪ್ಪಣೆಗಳು ಇವೇ ಮುಂತಾದ ಎಲ್ಲ ವಿಷಯಗಳಲ್ಲೂ ಸಮರ್ಪಕವಾದ, ದ್ರಢ ಹಾಗೂ ಶೀಘ್ರ ನಿರ್ಣಯಗಳನ್ನು ತೆಗೆದುಕೊಂಡು, ಅಹೋರಾತ್ರಿ ಕಾರ್ಯ ತತ್ಪರರಾಗಿದ್ದುಕೊಂಡು “ಜಾತ್ರೆ ಅತ್ಯುತ್ತಮ ರೀತಿಯಲ್ಲಿ ಸಂಪನ್ನಗೊಂಡಿತು” ಎಂಬ ಸತ್ಕೀರ್ತಿಗೆ ನೀವು ಪಾತ್ರರಾಗಿರುವಿರಿ.

ತನ್ಮೂಲಕ ಈ ಊರಿಗೆ ಊರೇ ಹೆಮ್ಮೆ ಪಡುವಂತೆ ಮಾಡಿರುವಿರಿ. ಈ ಕಾರ್ಯದಲ್ಲಿ ಬಹುಶಃ ಈ ಸಂಘಟನೆಯ ಎಲ್ಲ ಸದಸ್ಯರೂ. ಮಾರಿಕಾಂಬೆ ದೇವಾಲಯದ ಮಾನ್ಯ ಮೊಕ್ತೇಸರರ. ಆದಿಯಾಗಿ ಎಲ್ಲ ಸದಸ್ಯರು, ಉತ್ಸಾಹೀ ಸ್ವಯಂಸೇವಕರು, ಕಾರ್ಯಕರ್ತರು ಎಲ್ಲರೂ ತಮ್ಮೊಂದಿಗೆ ಜಾತ್ರೆಯ ಯಶಸ್ಸಿಗೆ ಶಕ್ತಿಮೀರಿ ಕೈಜೋಡಿಸಿದ್ದಾರೆ, ಶ್ಲಾಘನೀಯ ಸೇವೆ ಮಾಡಿದ್ದಾರೆ. ತಮಗೂ, ಅವರೆಲ್ಲರಿಗೂ ವೈಯಕ್ತಿಕವಾಗಿ ಹಾಗೂ ಸಾರ್ವಜನಿಕರ ಪರವಾಗಿ ಹಾರ್ದಿಕ ಅಭಿನಂದನೆ, ಶುಭಾಶಯಗಳನ್ನು ಈ ಮೂಲಕ ಸಲ್ಲಿಸುತ್ತಿದ್ದೇನೆ. ತಾಯಿ ಮಾರಿಕಾಂಬೆ, ಸರ್ವರ ಇಷ್ಟಾರ್ಥಗಳನ್ನು ಈಡೇರಿಸಿ ಲೋಕಕ್ಕೇ ಮಂಗಳವನ್ನು ಉಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ. —- ಆರ್. ಜಿ. ಪೈ, ಮಂಜೈನ್

ಆನಂದ ಅಸ್ನೋಟಿಕರ್ ರನ್ನು ಬಿ.ಜೆ.ಪಿ.ಗೆ ತಂದು ಜನಪ್ರತಿನಿಧಿ ಮಾಡುವ ದರ್ದು ಬಿ.ಜೆ.ಪಿ.ಗೆ ಇಲ್ಲ ಎಂದಿರುವ ರಾಜ್ಯ ಬಿ.ಜೆ.ಪಿ. ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ ಹಣಜಿಬೈಲ್ ಆನಂದ ಅಸ್ನೋಟಿಕರ್ ಸಂಸದರ ಬಗ್ಗೆ ಆಡಿರುವ ಮಾತು ಹಿಂಪಡೆದು ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಬಿ.ಜೆ.ಪಿ.ಯಿಂದ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ.

ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿರುವ ಅವರು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಮೇಲೆ ಅವಹೇಳನಕಾರಿ ಮಾತನಾಡಿರುವುದು ಅವರಿಗೆ ಜೀವಬೆದರಿಕೆ ಕರೆ ಬಂದಿರುವುದು ದುರದೃಷ್ಟಕರ ಸರ್ಕಾರ ಕೊಲೆ ಬೆದರಿಕೆ ಹಾಕಿದವರನ್ನು ಪತ್ತೆ ಮಾಡಿ ಸೂಕ್ತಕ್ರಮ ಜರುಗಿಸಬೇಕು. ಆನಂದ ಅಸ್ನೋಟಿಕರ್ ತಮ್ಮ ನಡವಳಿಕೆ ತಿದ್ದಿಕೊಳ್ಳಬೇಕು ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *