ಅವಳೀ ಶಿಶುಗಳ ತಾಯಿಯ ಆತ್ಮಹತ್ಯೆ! & ಭಟ್ಕಳದಲ್ಲಿ ಸಾರಿಗೆ ನೌಕರರ ಗಲಾಟೆ 5 ಕ್ಕಿಂತ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಮೂರು ತಿಂಗಳ ಅವಳಿ ಶಿಶುಗಳ ತಾಯಿ ಮಾನಸಿಕ ಕ್ಷೋಭೆಗೊಳಗಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಿದ್ಧಾಪುರ ಬೇಡ್ಕಣಿಯಲ್ಲಿ ನಡೆದಿದೆ. ಅಕ್ಷತಾ ಕೋಂ ರಮೇಶ್ ನಾಯ್ಕ ಕೋಲಶಿರ್ಸಿಯ ಮಹಿಳೆಯಾಗಿದ್ದು ತನ್ನ ತವರು ಮನೆ ಬೇಡ್ಕಣಿಯಲ್ಲಿ ಮಂಗಳವಾರ ಸರ್ಕಾರಿ ಬಾವಿಗೆ ಹಾರಿ ಪ್ರಾಣತೆತ್ತ 27 ವರ್ಷದ ದುರ್ದೈವಿಯಾಗಿದ್ದಾಳೆ.

ಹಿಂದಿನ ವರ್ಷ ಮೇ ತಿಂಗಳಲ್ಲಿ ಮದುವೆಯಾಗಿದ್ದ ಈಕೆ ಗಂಡನಮನೆ ಕೋಲಶಿರ್ಸಿಯಿಂದ ತವರು ಮನೆ ಬೇಡ್ಕಣಿಗೆ ತೆರಳಿ 6 ತಿಂಗಳು ಕಳೆದಿದ್ದವು. ಕಳೆದ ಮೂರು ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮನೀಡಿದ್ದ ತಾಯಿ ಅಕ್ಷತಾ ಕೆಲವು ದಿವಸಗಳ ಹೊಂದೆ ತಲೆಸುತ್ತಿನ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದಳು. ಯುಗಾದಿಯ ರಾತ್ರಿ 8ರಿಂದ 9 ಘಂಟೆಯ ಅವಧಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಭಟ್ಕಳದಲ್ಲಿ ಸಾರಿಗೆ ನೌಕರರ ಗಲಾಟೆ 5 ಕ್ಕಿಂತ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು- ಸಾರಿಗೆ ಮುಷ್ಕರದ ಅವಧಿಯಲ್ಲಿ ಸೇವೆಗೆ ಹಾಜರಾದ ಬಗ್ಗೆ ಆಕ್ಷೇಪಿಸಿ ಭಟ್ಕಳ ಘಟಕ ವ್ಯವಸ್ಥಾಪಕ ಜನಾರ್ಧನ್ ಶಂಕರ ದಿವಾಕರ್ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಆರೋಪದ ಮೇಲೆ ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳಾದ 5 ಕ್ಕೂ ಹೆಚ್ಚು ಜನರ ಮೇಲೆ ಭಟ್ಕಳದಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಕುಮಾರ ಡುಣಗೆ ಆನಂದ ಮತ್ತು ಮಹೇಶ್ ನಾಯ್ಕ, ವಸಂತ ಮತ್ತು ಸತೀಶ್ ನಾಯ್ಕ ಸೇರಿದ ಇತರರು ಯುಗಾದಿಯ ದಿನ ಸಾರಿಗೆ ನೌಕರರ ಸಂಘಟನೆಯ ಮುಷ್ಕರದ ಕರೆ ನಡುವೆಯೂ ಸೇವೆಗೆ ಹಾಜರಾಗಿ ಸಾರಿಗೆ ನೌಕರರ ಸಾಮೂಹಿಕ ತೀರ್ಮಾನಕ್ಕೆ ವಿರುದ್ಧವಾಗಿ ವರ್ತಿಸಿದ ತಮ್ಮ ಹಿರಿಯ ಅಧಿಕಾರಿಯ ಮೇಲೆಯೇ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಬಗ್ಗೆ ಆರೋಪಿಸಿ, ಪ್ರಕರಣ ದಾಖಲಿಸಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *