Ambedkar b day -ಸಂಗೀತ-ಸಂಗತ


ಸಿದ್ದಾಪುರ : ಅಂತಃಕರಣ ಶುದ್ಧವಾದಾಗ ಬದುಕಿನಲ್ಲಿ ಸುಖ,ನೆಮ್ಮದಿ, ಶಾಂತಿ ದೊರೆಯುತ್ತದೆ. ಪೂಜೆ-ಪುನಸ್ಕಾರ, ಧ್ಯಾನ ಮನಸ್ಸನ್ನು ಶುದ್ಧ ಮಾಡುವ ವಿಧಾನಗಳಾಗಿವೆ ಎಂದು ಶಿರಳಗಿಯ ಚೈತನ್ಯ ರಾಜಾರಾಮ ಕ್ಷೇತ್ರದ ಬ್ರಹ್ಮಾನಂದ ಭಾರತೀ ಸ್ವಾಮೀಜಿ ಅಭಿಪ್ರಾಯ ಪಟ್ಟರು.
ಯುಗಾದಿಯ ಅಂಗವಾಗಿ ತಾಲ್ಲೂಕಿನ ಸುಷಿರ ಸಂಗೀತ ಪರಿವಾರದ ಆಶ್ರಯದಲ್ಲಿ, ಮಗೆಗಾರಿನ ಮಹಾಗಣಪತಿ ದೇವಾಲಯದ ಸಹಯೋಗದಲ್ಲಿ, ಮಗೇಗಾರಿನ ಮಹಾಗಣಪತಿ ದೇವಾಲಯದಲ್ಲಿ ಮಂಗಳವಾರ ನಡೆದ ʼಸಂಗೀತ-ಸಂಗತʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಂತಃಕರಣ ಶುದ್ಧಿಯ ಮೂಲಕ ನಮ್ಮನ್ನು ನಾವೇ ಮೇಲ್ಮಟ್ಟಕ್ಕೆ ಏರಿಸಿಕೊಳ್ಳಬೇಕು. ಕಷ್ಟ ಅಥವಾ ತಾಪತ್ರದ ನಡುವೆಯೇ ನಮ್ಮ ಬದುಕು ಹಣ್ಣಾಗಬೇಕು. ಮನಸ್ಸಿನ ಕೊಳೆ ತೊಳೆದು,ಅಂತಃಕರಣ ಶುದ್ಧವಾಗಬೇಕುʼ ಎಂದರು.
ನಾವು ನಮ್ಮ ಬುದ್ಧಿ ಮತ್ತು ಅಹಂಕಾರವನ್ನು ದಾಟಿದರೆ ಸತ್ಯವನ್ನು ನೋಡಬಹುದು. ಎಲ್ಲವೂ ಈಶ್ವರನ ಲೀಲೆ ಎಂಬುದು ಅರಿವಿಗೆ ಬರುತ್ತದೆ. ಕಷ್ಟ ಮತ್ತು ನೋವು ಪ್ರತಿದಿನವೂ ಬರುತ್ತವೆ.ಇವುಗಳನ್ನು ಎದುರಿಸಲು ಅಧ್ಯಾತ್ಮ ಅಗತ್ಯ. ಆಧ್ಯಾತ್ಮಿಕತೆ ಮನಸ್ಸನ್ನು ಗಟ್ಟಿ ಮಾಡುತ್ತದೆ ಎಂದರು.
ಜಯರಾಮ ಭಟ್ಟ ಹೆಗ್ಗಾರಳ್ಳಿ(ಹಾರ್ಮೋನಿಯಂ),ಶಶಾಂಕ ಹೆಗಡೆ ( ತಬಲಾ)ಅವರ ಸಹಕಾರದೊಂದಿಗೆ, ಸುಧೀರ ಬೇಂಗ್ರೆ ಭಕ್ತಿ ಸಂಗೀತ ಪ್ರಸ್ತುತ ಪಡಿಸಿದರು. ಸುಷಿರ ಸಂಗೀತ ಪರಿವಾರದ ಸಂಚಾಲಕ ನಾರಾಯಣ ಹೆಗಡೆ ಕಲ್ಲಾರೆಮನೆ ಇದ್ದರು. ರವೀಂದ್ರ ಭಟ್ ಬಳಗುಳಿ ಸ್ವಾಗತಿಸಿದರು. ಎಂ.ಎಂ.ಹೆಗಡೆ ಮಗೇಗಾರ ವಂದಿಸಿದರು.

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬಾಲಿಕೊಪ್ಪದಲ್ಲಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಧ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅಚರಿಸಲಾಯಿತು.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ನಂತರ ಅಂಬೇಡ್ಕರ್ ವಿಚಾರಧಾರೆಯ ಕುರಿತು ಶಿಕ್ಷಕರು ತಮ್ಮ ಅನಿಸಿಕೆ-ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಅಧ್ಯಕ್ಷ ಸತೀಶ ಹೆಗಡೆ ಕಾರ್ಯದರ್ಶಿ ಗುರುರಾಜ ನಾಯ್ಕ,ಗೌರವಾಧ್ಯಕ್ಷರಾದ ಧರ್ಮ ನಾಯ್ಕ,ಮಂಜುಳಾ ಪಟಗಾರ,ನಮೃತಾ ಪೈ,ಬಸವರಾಜ ಕಡಪಟ್ಟಿ,ಅರ್ಜುನ ಚವ್ಹಾಣ,ಧರ್ಮಣ್ಣ,ಜೆ.ಎನ್.ಗೌಡ,ಮಾರುತಿ ಆಚಾರಿ,ಭಾಸ್ಕರ ಮಡಿವಾಳ,ಕೆ.ಎನ್.ಹೆಗಡೆ ಹಾಗೂ ಅನೇಕ ಶಿಕ್ಷಕರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *