ಡಕಾಯಿತಿ ಕಳ್ಳತನ ಗಲಭೆ ಹಾಗೂ ಇನ್ನಿತರ ಪ್ರಕರಣಗಳಲ್ಲಿ 25 ವರ್ಷಗಳಿಂದ ನಾಪತ್ತೆಯಾಗಿದ್ದ ಆರೋಪಿಯ ಬಂಧನ

* 1996 ಹಾಗೂ 1998 ನೇ ಸಾಲಿನಲ್ಲಿ ಸಿದ್ದಾಪುರ ತಾಲೂಕಿನಲ್ಲಿ ನಡೆದ ಡಕಾಯತಿ ಕಳ್ಳತನ ಹಾಗೂ ಗಲಭೆ ಮತ್ತು ಗಲಾಟೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಗ್ರಾಮದ ನಿವಾಸಿಯಾದ ಕಮಲಾಕರ್ ತಂದೆ ನಾರಾಯಣ ಕೋಡಿಯಾ ಅವನ ವಿರುದ್ಧ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದು ಹೋದವನು ಮರಳಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡು ಮುಂಬೈ ಮಂಗಳೂರು ಸುಳ್ಯ ನಾಪೋಕ್ಲು ಕಡೆಗಳಲ್ಲಿ ತಲೆಮರೆಸಿಕೊಂಡಿದ್ದನು ಈಗ ಕೊಡಗು ಜಿಲ್ಲೆಯ ಪೊನ್ನoಪೇಟೆ ತಾಲೂಕಿನ ಶಿವ ಕಾಲನಿಯಲ್ಲಿ ತಲೆಮರೆಸಿಕೊಂಡು ವಾಸವಾಗಿದ್ದವನಿಗೆ ದಿನಾಂಕ 16-04-20 21ರಂದು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಅವನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಒಟ್ಟು 21 ಪ್ರಕರಣಗಳು ದಾಖಲಾಗಿದ್ದು ಅವುಗಳ ಪೈಕಿ 01 ಡಕಾಯಿತಿ ಪ್ರಕರಣ,01ಕಳ್ಳತನ ಪ್ರಕರಣ ಹಾಗೂ ಗಲಭೆ ಹಾಗೂ ಗಲಾಟೆಗೆ ಸಂಬಂಧಿಸಿದ 19 ಇನ್ನಿತರ ಪ್ರಕರಣಗಳು ದಾಖಲಾಗಿ ಮಾನ್ಯ ಜೆಎಂಎಫ್ ಸಿ ನ್ಯಾಯಾಲಯ ಸಿದ್ದಾಪುರದಲ್ಲಿ ವಿಚಾರಣೆಯಲ್ಲಿವೆ. ಶಿವಪ್ರಕಾಶ್ ದೇವರಾಜು ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ ಕಾರವಾರ, ಶ್ರೀ ಬದ್ರಿನಾಥ್ ಎಸ್.ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ ಕಾರವಾರ. ರವಿ ಡಿ ನಾಯ್ಕ್ ಪೊಲೀಸ್ ಉಪಾಧೀಕ್ಷಕರು ಶಿರಸಿ ಉಪವಿಭಾಗ ಅವರ ಮಾರ್ಗದರ್ಶನದಲ್ಲಿ ಶ್ರೀ ಎನ್ ಮಹೇಶ್ ಪೊಲೀಸ್ ನಿರೀಕ್ಷಕರು ಸಿದ್ದಾಪುರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಶ್ರೀ ಮಹಂತಪ್ಪ ಕುಂಬಾರ್ ಪಿಎಸ್ಐ ಕಾ. ಸು.01 ಹಾಗೂ ಶ್ರೀ ಮಂಜೇಶ್ವರ್ ಪಿಎಸ್ಸೈ ಅಪರಾಧ ಸಿದ್ದಾಪುರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳಾದ ಸಿ ಹೆಚ್ ಸಿ 729. ಗಂಗಾಧರ್ ಹೊಂಗಲ್ ಹಾಗೂ ಸಿ ಹೆಚ್ ಸಿ 223 ರಮೇಶ್ ಕೂಡಲ್ ಮತ್ತು ಸಿಪಿಸಿ 619 ರವಿ ಜಿ ನಾಯ್ಕ್ ಇವರು ಕಳೆದ 25 ವರ್ಷಗಳಿಂದ ನಾಪತ್ತೆಯಾಗಿ ತಲೆಮರೆಸಿಕೊಂಡು ಕೊಡಗು ಜಿಲ್ಲೆಯ ಪೊನ್ನoಪೇಟೆ ತಾಲೂಕಿನ ಶಿವ ಕಾಲನಿಯಲ್ಲಿ ವಾಸ ಮಾಡಿಕೊಂಡಿದ್ದ ಆರೋಪಿತನಾದ ಕಮಲಾಕರ್ ತಂದೆ ನಾರಾಯಣ ಕೊಡಿಯಾ, 54 ವರ್ಷ, ವೃತ್ತಿ :ಕ್ಷೌರಿಕ ಕೆಲಸ. ಗ್ರಾಮ :ಹಾರ್ಸಿಕಟ್ಟ ತಾಲೂಕು :ಸಿದ್ದಾಪುರ,ಜಿಲ್ಲೆ :ಉತ್ತರ ಕನ್ನಡ, ಈತನನ್ನು ಪತ್ತೆಮಾಡಿ ದಸ್ತಗಿರಿ ಮಾಡಿ ಇಂದು ದಿನಾಂಕ 17- 04-2021 ರಂದು ಮಾನ್ಯ ನ್ಯಾಯಾಲಯದ ಮುಂದೆ ಹಾಜರು ಪಡಿಸಿರುತ್ತಾರೆ. ಸಿದ್ದಾಪುರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಈ ಕಾರ್ಯಕ್ಕೆ ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ ರವರು ಪ್ರಶ0ಸೆ ವ್ಯಕ್ತಪಡಿಸಿರುತ್ತಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *