local news- ಸುಪ್ರೀಂ ತೀರ್ಪು: ಗೋಕರ್ಣದಲ್ಲಿ ಸಂಭ್ರಮಾಚರಣೆ

ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾ ಅಘನಾಶಿನಿ ಸ್ಪೈಸ್‍ಸ್ ಪ್ರೊಡ್ಯೂಸರ್ ಕಂಪನಿ ಹಾಗೂ ಗೋಫಲ ಟ್ರಸ್ಟ್ ರಾಮಚಂದ್ರಾಪುರಮಠ ಆಶ್ರಯದಲ್ಲಿ ಕೃಷಿಕರ ಜತೆ ಸಂವಾದ ಹಾರ್ಸಿಕಟ್ಟಾ ಅಘನಾಶಿನಿ ಸ್ಪೈಸ್‍ಸ್ ಪ್ರೊಡ್ಯೂಸರ್ ಕಂಪನಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಗೋಫಲ ಟ್ರಸ್ಟ್‍ನ ಜನರಲ್ ಮ್ಯಾನೇಜರ್ ಬಾಲಸುಬ್ರಹ್ಮಣ್ಯ ಮಾತನಾಡಿ ಇಂದು ಸಾವಯವ ಗೊಬ್ಬರದ ಅವಶ್ಯಕತೆ ಇದೆ. ಉತ್ತಮ ಗುಣಮಟ್ಟದ ಫಸಲನ್ನು ತೆಗೆಯಬೇಕಾದರೆ ಭೂಮಿಯನ್ನು ಫಲವತ್ತತೆಯನ್ನಾಗಿ ಮಾಡಿಕೊಳ್ಳುವುದಕ್ಕೆ ಸಾವಯವ ಗೊಬ್ಬರ ಬಳಸಬೇಕು ಎಂದು ಹೇಳಿದರು.


ನಂತರ ರೈತರೊಂದಿಗೆ ನಡೆದ ಸಂವಾದದಲ್ಲಿ ಶಿರಸಿ ತೋಟಗಾರಿಕಾ ಮಹಾವಿದ್ಯಾಲಯದ ಬೇಸಾಯ ತಜ್ಞ ಡಾ.ಶಂಕರ ಮೇಟಿ,ಪುಷ್ಪ ಕೃಷಿ ತಜ್ಞ ಡಾ.ಪ್ರೀತಮ್,ಸೂಕ್ಷ್ಮಾಣುಜೀವಿ ತಜ್ಞ ಡಾ.ಗುರುಮೂರ್ತಿ, ಸಿದ್ದಾಪುರ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಅರುಣ ಎಚ್.ಜಿ, ತೋಟಗಾರಿಕಾ ಅಧಿಕಾರಿ ಮಹಾಬಲೇಶ್ವರ ಬಿ.ಎಸ್, ಕಾಶಿನಾಥ ಪಾಟೀಲ್, ಪ್ರಗತಿಪರ ಕೃಷಿಕ ರಾಘವೇಂದ್ರ ಹೆಗಡೆ ಮುಸವಳ್ಳಿ ಪಾಲ್ಗೊಂಡಿದ್ದರು.
ಹಾರ್ಸಿಕಟ್ಟಾ ಅಘನಾಶಿನಿ ಸ್ಪೈಸ್‍ಸ್ ಪ್ರೊಡ್ಯೂಸರ್ ಕಂಪನಿ ಅಧ್ಯಕ್ಷ ಎಸ್.ಆರ್.ಹೆಗಡೆ ಕುಂಬಾರಕುಳಿ ಅಧ್ಯಕ್ಷತೆವಹಿಸಿದ್ದರು.ಸಂವಾದದಲ್ಲಿ ಐವತ್ತಕ್ಕೂ ಹೆಚ್ಚು ರೈತರಿದ್ದರು. ಕಂಪನಿ ಸಿಇಒ ದರ್ಶನ ಹೆಗಡೆ ಹೊನ್ನೆಹದ್ದ, ಪ್ರಮೋದ ಕೊಡಿಯಾ ಹೊನ್ನೆಹದ್ದ ಇತರರಿದ್ದರು.

ಚಂದ್ರಮ್ಮ ಮಲ್ಲಿಕಾರ್ಜುನ ಗೌಡರ್ ನಿಧನ
ಶ್ರೀಮತಿ ಚಂದ್ರಮ್ಮ ಮಲ್ಲಿಕಾರ್ಜುನ ಗೌಡರ್ ವಯಸ್ಸು 77 ಸಾ|| ಹೊಳೆಮರೂರು ತಾ|| ಸೊರಬ ಇವರು ದಿನಾಂಕ: 17-04-2021 ರಂದು ಸ್ವಗೃಹದಲ್ಲಿ ನಿಧನರಾಗಿದ್ದು ಮೃತರು ನಾಲ್ಕು ಹೆಣ್ಣು ಮಕ್ಕಳು (ಮದುವೆ ಆಗಿದೆ) ಹಾಗೂ ಪತಿಯವರನ್ನು ಅಗಲಿದ್ದಾರೆ. ಇವರು ದಿ|| ದೆಸಾಯಿ ಗೌಡರ್ ರ ಹಿರಿಯ ಸಹೋದರಿ ಯಾಗಿದ್ದರು.

ಮಹಾಬಲೇಶ್ವರ ದೇವಾಲಯ ಕುರಿತು ಸುಪ್ರೀಂ ತೀರ್ಪು: ಗೋಕರ್ಣದಲ್ಲಿ ಸಂಭ್ರಮಾಚರಣೆ

 ರಾಮಚಂದ್ರಾಪುರ ಮಠಕ್ಕೆ ಹಿಂದಿನ ಬಿಜೆಪಿ ಸರ್ಕಾರವು ನೀಡಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ಮತ್ತೆ ಹಿಂತಿರುಗಿಸುವಂತೆ ಸುಪ್ರೀಂ ಕೋರ್ಟ್ ಆದೇಶಿದ್ದಲ್ಲದೆ ದೇವಾಲಯದ ನಿರ್ವಹಣೆಗಾಗಿ ಸಮಿತಿಯನ್ನು ರಚಿಸುವಂತೆ ನಿರ್ದೇಶನ ನೀಡಿದೆ.

ಕಾರವಾರ: ರಾಮಚಂದ್ರಾಪುರ ಮಠಕ್ಕೆ ಹಿಂದಿನ ಬಿಜೆಪಿ ಸರ್ಕಾರವು ನೀಡಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ಮತ್ತೆ ಹಿಂತಿರುಗಿಸುವಂತೆ ಸುಪ್ರೀಂ ಕೋರ್ಟ್ ಆದೇಶಿದ್ದಲ್ಲದೆ ದೇವಾಲಯದ ನಿರ್ವಹಣೆಗಾಗಿ ಸಮಿತಿಯನ್ನು ರಚಿಸುವಂತೆ ನಿರ್ದೇಶನ ನೀಡಿದೆ.

ದೇವಾಲಯದ ಪುರೋಹಿತರ ನಡುವಿನ ಹನ್ನೆರಡು ವರ್ಷಗಳ ಜಗಳ ಇದೀಗ ಅಂತ್ಯವಾಗಿದೆ, ಅವರ ಪೂರ್ವಜರು ಮಹಾಬಲೇಶ್ವರನಿಗೆ ಶತಮಾನಗಳಿಂದ ಸೇವೆ ಸಲ್ಲಿಸಿದರು, ಮತ್ತು ರಾಮಚಂದ್ರಾಪುರ ಮಠದ ಆಡಳಿತ ಇದೀಗ ಕೊನೆಯಾಗಿದೆ. ದೇವಾಲಯದ ಆಡಳಿತವನ್ನು ಮಠದಿಂದ ಹಿಂಪಡೆಯುವಂತೆ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. 2019 ರಲ್ಲಿ ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಅವರ ಆಶ್ರಯದಲ್ಲಿ ಸಮಿತಿಯನ್ನು ರಚಿಸುವಂತೆ ಅದು ನಿರ್ದೇಶಿಸಿದೆ.

https://imasdk.googleapis.com/js/core/bridge3.452.0_en.html#goog_602564736

ನ್ಯಾಯಾಲಯದ ಈ ಈ ಆದೇಶವು ದೇವಾಲಯದ ಅರ್ಚಕರು ಹಾಗೂ ಯಾಜಕರಲ್ಲಿ ಸಂತೋಷವನ್ನು ತಂದಿದೆ. ಅವರ ಪೂರ್ವಜರು ಮಹಾಬಲೇಶ್ವರನನ್ನು ಶತಮಾನದಿಂದ ಪೂಜಿಸುತ್ತಿದ್ದರು, ಇದೀಗ ಮತ್ತೆ ತಮಗೆ ದೇವಾಲಯದ ನಿರ್ವಹಣೆ ಸಿಕ್ಕಿರುವುದಕ್ಕೆ ಅವರು ಪಟಾಕಿಗಳನ್ನು ಸಿಡಿಸಿ, ಸಿಹಿತಿನಿಸನ್ನು ವಿತರಿಸಿ ಸಂಭ್ರಮಿಸಿದ್ದಾರೆ. “ತೀರ್ಪಿನ ಬಗ್ಗೆ ನಮಗೆ ತುಂಬಾ ಸಂತೋಷವಾಗಿದೆ” ಎಂದು ಅರ್ಚಕರಲ್ಲಿ ಒಬ್ಬರೂ, ಅರ್ಜಿದಾರರಾದ ರಾಜಗೋಪಾಲ್ ಅಡಿ ಹೇಳಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಪೀಠವು 15 ದಿನಗಳ ಒಳಗೆ ದೇವಾಲಯವನ್ನು ಸರ್ಕಾರಕ್ಕೆ ಹಸ್ತಾಂತರಿಸುವಂತೆ ನೋಡಿಕೊಳ್ಳಬೇಕು ಮತ್ತು ತಕ್ಷಣವೇ ಸಮಿತಿಯನ್ನು ರಚಿಸಬೇಕೆಂದು ಸೋಮವಾರದ ತನ್ನ ಆದೇಶದಲ್ಲಿ ಹೇಳಿದೆ.

ಹಿನ್ನೆಲೆ

ಹಿಂದಿನ ಬಿ.ಎಸ್.ಯಡಿಯೂರಪ್ಪ ಸರ್ಕಾರವು 2008 ರಲ್ಲಿ ದೇವಾಲಯವನ್ನು ಮಠಕ್ಕೆ ಹಸ್ತಾಂತರಿಸಿದ ನಂತರ, ಶ್ರೀ ಕ್ಷೇತ್ರ ಗೋಕರ್ಣ ಹಿತರಕ್ಷಣಾ ಸಮಿತಿಯು ದೇವಾಲಯವನ್ನು ಹಸ್ತಾಂತರಿಸುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೊರೆ ಹೋಗಿತ್ತು. ಅರ್ಜಿದಾರರು ತಮ್ಮ ಅರ್ಜಿಯಲ್ಲಿ ದೇವಾಲಯವನ್ನು ಹಸ್ತಾಂತರಿಸುವುದು ಕಾನೂನುಬಾಹಿರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಸರಿಯಲ್ಲ ಎಂದು ವಾದಿಸಿತ್ತು, ದೇವಾಲಯವು ಸಾರ್ವಜನಿಕರಿಗೆ ಸೇರಿದ್ದು, ಇಲ್ಲಿನ ಪುರೋಹಿತರು ಆನುವಂಶಿಕರಾಗಿದ್ದಾರೆ ಎಂದು ಅವರು ಹೇಳಿದರು.ನ್ಯಾಯಮೂರ್ತಿ ಬಿ ವಿ ನಾಗರತ್ನ ಮತ್ತು ನ್ಯಾಯಮೂರ್ತಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ದೇವಾಲಯವನ್ನು ಮಠಕ್ಕೆ ಹಸ್ತಾಂತರಿಸುವ ಸರ್ಕಾರದ ಆದೇಶವನ್ನು ರದ್ದುಪಡಿಸುವವರೆಗೂ ಈ ವಿಷಯವನ್ನು 10 ವರ್ಷಗಳಿಗಿಂತ ಹೆಚ್ಚು ಕಾಲ ಎಳೆದುಕೊಂಡೊಯ್ದಿತು. ಆ ಬಳಿಕ ನ್ಯಾಯಮೂರ್ತಿ ಶ್ರೀ ಕೃಷ್ಣ ಅವರೊಂದಿಗೆ ಸಮಿತಿ ರಚಿಸುವಂತೆ ಅದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. ಆದರೆ ವಿಭಾಗೀಯ ಪೀಠದ ಆದೇಶಕ್ಕೆ ತಡೆ ಕೋರಿ ಮಠವು ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *