ಲಾಕ್ ಡೌನ್ ಇಲ್ಲ, ಮನೆಯಿಂದ ಹೊರಬರಬೇಡಿ… ಮೋದಿ ಮಾತು

ದೇಶ ಕರೋನಾ ಸಂಕಷ್ಟದಲ್ಲಿದ್ದು ಲಾಕ್ ಡೌನ್ ಸಾಧ್ಯತೆ ಇಲ್ಲ ಆದರೆ ಕೆಲಸವಿಲ್ಲದೆ ಮನೆಯಿಂದ ಹೊರಬೀಳದೆ ಲಾಕ್ ಡೌನ್ ಅನಿವಾರ್ಯತೆ ತಪ್ಪಿಸಿ ಎಂದು ಪ್ರಧಾನಿ ನರೆಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.

ದೇಶದ ಕರೋನಾ ಸಂಕಷ್ಟದಲ್ಲಿ ವೈದ್ಯರು, ಕರೋನಾ ಸೇನಾನಿಗಳು ಅವಿರತ ಶ್ರಮ ಪಟ್ಟಿದ್ದಾರೆ. ಜನರ ಸಹಕಾರ ದಿಂದ ಕರೋನಾ ವಿರುದ್ಧ ಗೆಲುವು ಸಾಧಿಸಲು ಸಾಧ್ಯವಾಗಿದೆ. ಈಗಾಗಲೇ 12 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಎಲ್ಲರಿಗೂ ಲಸಿಕೆ ಲಭ್ಯವಿದೆ. ಯುವಕರು,ಮಾಧ್ಯಮಗಳು ಕರೋನಾ ವಿರುದ್ಧ ಹೋರಾಟ, ಜನಜಾಗೃತಿಗೆ ಶ್ರಮಿಸಬೇಕು ಎಂದು ವಿನಂತಿಸಿದರು.

ಕೇಂದ್ರದ ಕೊರೋನಾ ಲಸಿಕೆ ನೀತಿ ಟೊಳ್ಳು: ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಕೇಂದ್ರ ಸರ್ಕಾರದ ಹೊಸ ಲಸಿಕೆ ನೀತಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ವಾಸ್ತವಾಂಶ ಇಲ್ಲದ ಟೊಳ್ಳು ನೀತಿ…

Mamata_PM_Modi1

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಲಸಿಕೆ ನೀತಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ವಾಸ್ತವಾಂಶ ಇಲ್ಲದ ಟೊಳ್ಳು ನೀತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮಮತಾ ಬ್ಯಾನರ್ಜಿ, “ಕೇಂದ್ರ ಸರ್ಕಾರವು 2021ರ ಏಪ್ರಿಲ್ 19 ರಂದು ಹೆಚ್ಚು ವಿಳಂಬವಾದ ಸಾರ್ವತ್ರಿಕ ಲಸಿಕೆ ನೀತಿಯನ್ನು ಘೋಷಿಸಿದೆ ಎಂಬ ಬಗ್ಗೆ ನನಗೆ ಮಾಹಿತಿ ಬಂತು. ಇದು ಟೊಳ್ಳಾಗಿ ಕಾಣುತ್ತದೆ, ವಾಸ್ತ ವಾಂಶ ಇಲ್ಲದ ಮತ್ತು ಬಿಕ್ಕಟ್ಟಿನ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿರುವುದು ವಿಷಾದನೀಯ” ಎಂದು ಉಲ್ಲೇಖಿಸಿದ್ದಾರೆ.

ಇದಕ್ಕು ಮುನ್ನ ಫೆಬ್ರವರಿ 24, 2021ರಂದು ಪ್ರಧಾನಿಗೆ ಬರೆದ ಪತ್ರದಲ್ಲಿ, ಪಶ್ಚಿಮ ಬಂಗಾಳ ಲಸಿಕೆಗಳನ್ನು ನೇರವಾಗಿ ತನ್ನ ಸಂಪನ್ಮೂಲಗಳೊಂದಿಗೆ ಖರೀದಿಸಲು ಅವಕಾಶ ನೀಡುವಂತೆ ಮತ್ತು ರಾಜ್ಯದ ಜನರಿಗೆ ಉಚಿತ ಲಸಿಕೆ ನೀಡುವಂತೆ ಕೋರಿರುವುದನ್ನು ದೀದಿ ನೆನಪಿಸಿದ್ದಾರೆ.

ಈ ಹಿಂದೆ ಬರೆದ ಪತ್ರಕ್ಕೆ ನಿಮ್ಮ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈಗ ಕೋವಿಡ್ ಎರಡನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಕೇಂದ್ರ ಖಾಲಿ ವಾಕ್ಚಾತುರ್ಯದಲ್ಲಿ ಪಾಲ್ಗೊಳ್ಳುವ ಮೂಲಕ  ದೇಶದ ಜನರಿಗೆ ಲಸಿಕೆ ಲಭ್ಯವಾಗಿಸುವ ಜವಾಬ್ದಾರಿಯಿಂದ ದೂರ ಸರಿಯುತ್ತದೆ” ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ನಿನ್ನೆಯಷ್ಟೇ ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವಂತೆ ಆದೇಶಿಸಿದ್ದು, ರಾಜ್ಯಗಳು, ಖಾಸಗಿ ಆಸ್ಪತ್ರೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ನೇರವಾಗಿ ಉತ್ಪಾದಕರಿಂದ ಲಸಿಕೆ ಖರೀದಿಸಿ ಸಂಗ್ರಹಿಸಲು ಅನುವು ಮಾಡಿಕೊಟ್ಚಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *