8 ವರ್ಷದ ನಂತರ ಪತ್ನಿಯನ್ನು ಆಕೆಯ ಪ್ರೇಮಿಯೊಡನೆ ಮದುವೆ ಮಾಡಿಸಿದ ಪತಿ!

ಇದು ರಿಯಲ್ ‘ಹಮ್ ದಿಲ್ ದೇ ಚುಕೆ ಸನಮ್’:

ಇದು ನಿಜಜೀವನದಲ್ಲಿ ನಡೆದ “ಹಮ್ ದಿಲ್ ದೇ ಚುಕೇ ಸನಮ್” ಸಿನಿಮಾ ಕಥೆ! ಬಿಹಾರದ ಭಗಲ್ಪುರ್ ಜಿಲ್ಲೆಯ ಸುಲ್ತಾನ್ ಗಂಜ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಮಡದಿಯನ್ನು ಆಕೆಯ ಪ್ರೇಮಿಯೊಂದಿಗೆ ವಿವಾಹ ಮಾಡಿಸಿದ್ದಾನೆ.

ಭಗಲ್ಪುರ್(ಬಿಹಾರ): ಇದು ನಿಜಜೀವನದಲ್ಲಿ ನಡೆದ “ಹಮ್ ದಿಲ್ ದೇ ಚುಕೇ ಸನಮ್” ಸಿನಿಮಾ ಕಥೆ! ಬಿಹಾರದ ಭಗಲ್ಪುರ್ ಜಿಲ್ಲೆಯ ಸುಲ್ತಾನ್ ಗಂಜ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಮಡದಿಯನ್ನು ಆಕೆಯ ಪ್ರೇಮಿಯೊಂದಿಗೆ ವಿವಾಹ ಮಾಡಿಸಿದ್ದಾನೆ. ಇದು ಪ್ರಸಿದ್ಧ ಹಿಂದಿ ಸಿನಿಮಾ ಹಮ್ ದಿಲ್ ದೇ ಚುಕೆ ಸನಮ್‌ನಂತೆಯೇ ನಡೆದಿದೆ. ಇದರ ಬಗ್ಗೆ ಅಲ್ಲಿನ ಜನ ನಾನಾ ಪ್ರಕಾರವಾಗಿ ಮಾತನಾಡುತ್ತಿದ್ದಾರೆ.

Hum Dil De Chuke Sanam: lesser-known facts about the romantic musical-  Cinema express
‘ಹಮ್ ದಿಲ್ ದೇ ಚುಕೇ ಸನಮ್’ ಚಿತ್ರದ ದೃಶ್ಯ

ತಾನು ಮದುವೆಯಾಗಿದ್ದ ಯುವತಿ ಕಳೆದ ಎಂಟು ವರ್ಷಗಳಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಾಳೆ. ಆ ಯುವಕನ ಪ್ರೀತಿಯಲ್ಲಿ ಹುಚ್ಚಳಾಗಿದ್ದಾಳೆ ಎಂದು ಅರಿತ ನಂತರ ಆ ವ್ಯಕ್ತಿ ತನ್ನ ಪತ್ನಿಯನ್ನು ಆಕೆ ಪ್ರೀತಿಸುತ್ತಿದ್ದ ವ್ಯಕ್ತಿಯೊಂದಿಗೆ ವಿವಾಹ ಮಾಡಿಸಿದ್ದಾನೆ.

ಪ್ರಕರಣದ ವಿವರ

ಸುಲ್ತಾನ್ ಗಂಜ್ ನ ಐದನೇ ಬೀದಿ ನಿವಾಸಿ ಉತ್ತಮ್ ಮಂಡಲ್ ಸುಮಾರು ಎಂಟು ವರ್ಷಗಳ ಹಿಂದೆ ಖಗೇರಿಯಾ ಜಿಲ್ಲೆಯ ನಿವಾಸಿ ಸಪ್ನಾ ಕುಮಾರಿಯನ್ನು ಮದುವೆಯಾಗಿದ್ದ.  . ಮದುವೆಯ ನಂತರ, ಇಬ್ಬರ ನಡುವೆ ಎಲ್ಲವೂ ಸರಿಯಿತ್ತು. ದಂಪತಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಇದ್ದಕ್ಕಿದ್ದಂತೆ ಪತ್ನಿಯ ನಡವಳಿಕೆ ಬದಲಾಗಿತ್ತು.ಸಪ್ನಾ ತನ್ನ ನೆರೆಮನೆಯ ರಾಜುನನ್ನು ಪ್ರೀತಿಸುತ್ತಿದ್ದಳು. ಕ್ರಮೇಣ ಇಬ್ಬರ ನಡುವಿನ ನಿಕಟ ಸಂಬಂಧ ಗಾಢವಾಗಿತ್ತು. ಇದರಿಂದಾಗಿ ಸಪ್ನಾ ಹಾಗೂ ಉತ್ತಮ್ ನಡುವಿನ ದಾಂಪತ್ಯದಲ್ಲಿ ಸಂತೋಷ ಮಾಯವಾಗತೊಡಗಿತ್ತು. ಸಪ್ನಾ ಮತ್ತು ರಾಜು ನಡುವಿನ ಪ್ರೀತಿ ಬಹಳ ಆಳವಾದದ್ದಾಗಿತ್ತು ಮತ್ತು ಅವರಿಬ್ಬರೂ ವಿವಾಹವಾಗುವುದು ನಿಶ್ವಯವಾಗಿತ್ತು.

ಸಪ್ನಾ ತನ್ನ ಪ್ರೇಮಿ ರಾಜು ಜೊತೆ ದೇವಾಲಯದಲ್ಲಿ ಎರಡನೇ ಮದುವೆಯಾಗಿದ್ದಾಳೆ.ಈ ಸಮಯದಲ್ಲಿ, ರಾಜು ಅವರ ಕುಟುಂಬದೊಂದಿಗೆ, ಸಪ್ನಾ ಮತ್ತು ಉತ್ತಮ್ ಅವರ ಕುಟುಂಬದ ಸದಸ್ಯರು ಸಹ ಉಪಸ್ಥಿತರಿದ್ದರು. ಇದಕ್ಕೆ ಹೊರತು ನನಗೆ ಬೇರೆ ದಾರಿಗಳಿರಲಿಲ್ಲ ಎಂದು ಉತ್ತಮ್ ಹೇಳಿದ್ದಾನೆ. ಮದುವೆಯಾಗಿ ಸಪ್ನಾಗೆ ಎರಡು ಮಕ್ಕಳಿದ್ದರೂ ಆಕೆಗೆ ಪ್ರೀತಿಯ ಹುಚ್ಚು ತಲೆಗೇರಿದೆ. ಇದೀಗ ಆಕೆ ಮಕ್ಕಳನ್ನು ಸಾಕಲು ನಿರಾಕರಿಸಿದ್ದಾಳೆ.

Bihar: Husband helps wife get married to her lover
ನೂತನವಾಗಿ ವಿವಾಹವಾದ ಸಪ್ನಾ ಹಾಗೂ ಆಕೆಯ ಪ್ರೇಮಿ ರಾಜು

ಒಂದೊಮ್ಮೆ ಆಕೆ ರಾಜುವಿನೊಂದಿಗೆ ಮದುವೆಯಾಗದೆ ಹೋದಲ್ಲಿ ರಾಜು ಅವರನ್ನು ಕೊಲೆ ಮಾಡುವುದಕ್ಕೂ ಹೇಸುತ್ತಿರಲಿಲ್ಲ ಎಂದು ಉತ್ತಮ್ ಹೇಳಿದ್ದಾನೆ.ಸಪ್ನಾಳ ಪ್ರೇಮಿ ಇತ್ತೀಚೆಗೆ ಮಾರಕಾಸ್ತ್ರದಿಂದ ತನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಉತ್ತಮ್ ಆರೋಪಿಸಿದ್ದಾನೆ. ತನ್ನ ಹಾಗೂ ಮಕ್ಕಳ ಜೀವ ಉಳಿಸಿಕೊಳ್ಳುವ ಸಲುವಾಗಿ ಅವನು ತನ್ನ ಹೆಂಡತಿಗೆ ಮದುವೆಗೆ ಅವಕಾಶ ಕೊಟ್ಟನು ಮತ್ತು ಅವಳನ್ನು ಬಂಧನದಿಂದ ಮುಕ್ತಗೊಳಿಸಿದನು. ಮದುವೆಯ ನಂತರ ಸಪ್ನಾ ಮಕ್ಕಳನ್ನು ಸಾಕಲು ನಿರಾಕರಿಸಿದ್ದಾಳೆ. ಇದೀಗ ಮಕ್ಕಳಿಬ್ಬರೂ ಇನ್ನೂ ಉತ್ತಮ್ ಜೊತೆಗಿದ್ದಾರೆ. ಇಬ್ಬರೂ ಮಕ್ಕಳು ತಮ್ಮ ತಾಯಿಯನ್ನು ಹುಡುಕುತ್ತಿದ್ದಾರೆ. ಆದರೆ ಅವರ ತಾಯಿ ಇವರನ್ನೆಲ್ಲಾ ಬಿಟ್ಟು ಬಹುದೂರ ಸಾಗಿದ್ದಾಳೆಂದು ಮಕ್ಕಳಿಗೆ ಇನ್ನೂ ಅರಿವಾಗಿಲ್ಲ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *