ಮೈಸೂರಿನ ಈ ದಲಿತ ಕಾಲೋನಿ ಮಾದರಿ! ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ

ಕೋವಿಡ್ 19 ನಿರ್ವಹಣೆ ಹೇಗೆ ಎಂಬುದಕ್ಕೆ ಮೈಸೂರಿನ ಈ ದಲಿತ ಕಾಲೋನಿ ಮಾದರಿ!

ಸದ್ಯದ ಕೋವಿಡ್ 19 ಪರಿಸ್ಥಿತಿಯನ್ನು ಪಟ್ಟಣಗಳು ಹೇಗೆ ನಿರ್ವಹಿಸಬೇಕು ಎಂಬುದನ್ನು ಮೈಸೂರಿನ ಈ ದಲಿತ ಕಾಲೋನಿ ನೋಡಿ ಕಲಿಯಬೇಕಾಗಿದೆ.

Headmen of Sathyagala village reviewing Covid norms

ಕೋವಿಡ್ ಉಲ್ಬಣ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ

ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಕೋವಿಡ್‌ನಿಂದಾಗಿ ಸಾವುಗಳು ಹೆಚ್ಚಾಗುತ್ತಿದ್ದಂತೆ, ಶ್ರೀರಂಗಪಟ್ಟಣದ ಪ್ರಸಿದ್ಧ ಪಶ್ಚಿಮವಾಹಿನಿ ಮತ್ತಿತರೆಡೆಗಳಲ್ಲಿ ಮೃತರ ಚಿತಾಭಸ್ಮವನ್ನು ಬಿಡಲು ಭಾರೀ ಸಂಖ್ಯೆಯಲ್ಲಿ ಜನ ಸೇರಿರುವುದನ್ನು ಗಮನಿಸಿ ಈ ಆದೇಶ ನೀಡಲಾಗಿದೆ.

ಕೋವಿಡ್ 19 ರ ಹರಡುವಿಕೆಯ ಬಗ್ಗೆ ಸ್ಥಳೀಯರು ಭಯ ವ್ಯಕ್ತಪಡಿಸಿದ್ದರಿಂದ ರಾಜ್ಯ ಮತ್ತು ನೆರೆ ಜಿಲ್ಲೆ, ನೆರೆ ರಾಜ್ಯಗಳ ಜನ ಕಾವೇರಿಯಲ್ಲಿ ಚಿತಾಭಸ್ಮವನ್ನು ಬಿಡುವುದಕ್ಕೆ ತಾಲ್ಲೂಕು ಆಡಳಿತವು ನಿಷೇಧ ಹೇರಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ತಹಶೀಲ್ದಾರ್ ಎಂ ವಿ ರೂಪಾ ತಿಳಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಮೈಸೂರು: ಸದ್ಯದ ಕೋವಿಡ್ 19 ಪರಿಸ್ಥಿತಿಯನ್ನು ಪಟ್ಟಣಗಳು ಹೇಗೆ ನಿರ್ವಹಿಸಬೇಕು ಎಂಬುದನ್ನು ಮೈಸೂರಿನ ಈ ದಲಿತ ಕಾಲೋನಿ ನೋಡಿ ಕಲಿಯಬೇಕಾಗಿದೆ.

ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ತೆಗೆದುಕೊಳ್ಳಲು ಹಿಂಜರಿಯಬಾರದು ಹಾಗೂ ಆರ್ ಟಿ ಪಿಸಿಆರ್ ಪರೀಕ್ಷೆ ಕೂಡಿ ಮಾಡಿಸಿಕೊಳ್ಳಬೇಕು ಎಂದು ಚಾಮರಾಜನಗರ ಜಿಲ್ಲೆಯ ಸತ್ಯಗಾಲ ಗ್ರಾಮದ ದಲಿತ ಮುಖಂಡ ಎಲ್ಲರಿಗೂ ಜಾಗೃತಿ ಮೂಡಿಸಿದ್ದಾರೆ.

ಇದರ ಜೊತೆಗೆ ಬೆಂಗಳೂರು ಅಥವಾ ಮೈಸೂರಿನಿಂದ ಬರುವ ಯಾರನ್ನು ಗ್ರಾಮಕ್ಕೆ ಬಿಡದಿರಲು ನಿರ್ಧರಿಸಿದ್ದಾರೆ. ಸ್ಥಳೀಯ ಛತ್ರದಲ್ಲಿ ಯುವಕರ ಗುಂಪೊಂದು ಆರ್ ಟಿ ಪಿಸಿಆರ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.

ವೈದ್ಯಕೀಯ ತುರ್ತು ಅವಶ್ಯಕತೆಯಿದ್ದರೇ ಮಾತ್ರ ಗ್ರಾಮದಿಂದ ಹೊರಗೆ ಹೋಗಬೇಕು, ಅನಾವಶ್ಯಕವಾಗಿ ತೆರಳಬಾರದು ಎಂದು ಕಠಿಣ ನಿಯಮಕ್ಕೆ ಆದೇಶಿಸಿದ್ದಾರೆ. 

ಪಿಗ್ಮಿ ಸಂಗ್ರಹಗಾರರು ಸೇರಿದಂತೆ ಯಾವುದೇ ಕಂಪನಿಯ ಏಜೆಂಟ್ ಗಳು ಗ್ರಾಮಕ್ಕೆ ಬರದಂತೆ ತಡೆ ಒಡ್ಡಲಾಗಿದೆ.ಒಂದು ವೇಳೆ ನಿಯಮ ಮೀರಿ ಮಾಸ್ಕ್ ಧರಿಸದೇ ಬಂದರೇ  ದಂಡ ವಿಧಿಸಲು ತೀರ್ಮಾನಿಸಿದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪಂಚಾಯತಿ ನಿರ್ದೇಶನ ನೀಡಿದೆ.

ಹಲವರು ಲಸಿಕೆ ತೆಗೆದುಕೊಳ್ಳಲು ಬಯಸಿದ್ದಾರೆ, ಆದರೆ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಸಮರ್ಕವಾಗಿ ಕೆಲಸ ಮಾಡುವ ವೈದ್ಯರಿಲ್ಲ ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ, ಲಸಿಕೆ ಪಡೆದ ನಂತರ ಏನಾದರೂ ಅಡ್ಡ ಪರಿಣಾಮ ಉಂಟಾದರೇ ನಾವು ಚಿಕಿತ್ಸೆಗೆ ಎಲ್ಲಿಗೆ ಹೋಗಬೇಕು ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *