ಬೆಡ್ ಬುಕ್ಕಿಂಗ್ ಅವ್ಯವಹಾರ, ಮಾಫಿಯಾ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ

: ಸಿಎಂ ಭೇಟಿ ಮಾಡಿ ಕ್ರಮಕ್ಕೆ ಆಗ್ರಹ

ಕೊರೋನಾ ಕಾಲದಲ್ಲೂ ಜನರ ಜೀವದ ಜೊತೆ ಆಟಾಡುತ್ತಿರುವ, ಅಕ್ರಮವಾಗಿ ಬೆಡ್ ಬುಕ್ಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಸಂಸದ ತೇಜಸ್ವಿ ಸೂರ್ಯ ಬಹಿರಂಗಪಡಿಸಿದ್ದಾರೆ. 

MP Tejasvi Surya

ಬೆಂಗಳೂರು: ಕೊರೋನಾ ಕಾಲದಲ್ಲೂ ಜನರ ಜೀವದ ಜೊತೆ ಆಟಾಡುತ್ತಿರುವ, ಅಕ್ರಮವಾಗಿ ಬೆಡ್ ಬುಕ್ಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಸಂಸದ ತೇಜಸ್ವಿ ಸೂರ್ಯ  ಬಹಿರಂಗಪಡಿಸಿದ್ದಾರೆ. 

ಮೇ.04 ರಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ, ಅಕ್ರಮವಾಗಿ ಬಿಬಿಎಂಪಿ ಬೆಡ್ ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. 

ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈ ವರೆಗೂ ಪ್ರಭಾವಿಗಳಿಂದ 4,065 ಬೆಡ್ ಗಳನ್ನು ಬುಕ್ ಮಾಡಿದ್ದಾರೆ.  

ಬಿಬಿಎಂಪಿ ಬೆಡ್ ಬುಕ್ಕಿಂಗ್ ವೆಬ್ ಸೈಟ್ ಗಳಲ್ಲಿ ಬೆಡ್ ಗಳು ಭರ್ತಿಯಾಗಿರುವುದು ತೋರಿಸುತ್ತಿದೆ. ಆದರೆ ಬೆಡ್ ಅಗತ್ಯವಿಲ್ಲದೇ ಇರುವ ಮನೆಯಲ್ಲಿಯೇ ಐಸೊಲೇಷನ್ ಆಗಿರುವವರ, ಮೃತಪಟ್ಟವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವವರ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡುತ್ತಿರುವ ಮಾಫಿಯಾವನ್ನು ತೇಜಸ್ವಿ ಸೂರ್ಯ ಸಾಕ್ಷ್ಯ ಸಮೇತವಾಗಿ ಬಹಿರಂಗಗೊಳಿಸಿದ್ದಾರೆ. 

“ಕೆಲವು ಬಿಬಿಎಂಪಿ ಅಧಿಕಾರಿಗಳೆ ಇದರಲ್ಲಿ ಶಾಮೀಲಾಗಿದ್ದಾರೆ, ಮನಸೋ ಇಚ್ಛೆ ಬೆಡ್ ಬುಕ್ ಮಾಡುವುದಕ್ಕೆ ಅದೇನು ಬಿಬಿಎಂಪಿ ಅಧಿಕಾರಿಗಳ ಜಹಗೀರ? ಎಂದು ತೇಜಸ್ವಿ ಸೂರ್ಯ ಕೆಂಡಾಮಂಡಲರಾಗಿದ್ದಾರೆ. 

“ಕೋವಿಡ್-19 ವಾರ್ ರೂಮ್ ಗೆ ಹೋಗಿ ಸಮಸ್ಯೆಗಳಿದ್ದರೆ ಬಗೆಹರಿಸಲು ಸಹಕರಿಸಲು ಯತ್ನಿಸಿದರೂ ಜನಪ್ರತಿನಿಧಿಗಳಿಗೆ ವಾರ್ ರೂಮ್ ಗಳಿಗೆ ಹೋಗಲು ಬಿಡುತ್ತಿರಲಿಲ್ಲ” ಶಾಸಕ ಸತೀಶ್ ರೆಡ್ಡಿ ಅವರು ಜನರನ್ನು ಕರೆದೊಯ್ದು ಪ್ರತಿಭಟನೆ ನಡೆಸಿದರೂ ಸಹ ವಾರ್ ರೂಮ್ ಒಳಗೆ ಹೋಗಿ ತಪಾಸಣೆ ನಡೆಸುವುದಕ್ಕೆ ಬಿಡದಂತಹ ವಾತಾವರಣ ಇದೆ” ಎಂದು ತೇಜಸ್ವಿ ಸೂರ್ಯ ಗಂಭೀರ ಆರೋಪ ಮಾಡಿದ್ದಾರೆ. 
    
“ಸಂಜೆ 5:30 ಕ್ಕೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇನೆ, ವಿಶೇಷ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತೇನೆ, ಇದು ಕೇವಲ ಭ್ರಷ್ಟಾಚಾರವಲ್ಲ, ಕೊಲೆ, ಬೆಡ್ ಸಿಗದೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಲ್ಲಿ ಕ್ಷಮೆ ಕೇಳುತ್ತೇನೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಈ ವಿಷಯವನ್ನು ಬಿಡುವುದಿಲ್ಲ” ಎಂದು ತೇಜಸ್ವಿ ಸೂರ್ಯ ಭರವಸೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ, ಉದಯ್ ಗರುಡಾಚಾರ್ ಭಾಗಿಯಾಗಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *