ಕರ್ನಾಟಕಕ್ಕೆ ಬೇಕಾಗಿದೆ ಲಾಕ್ಡೌನ್ ,ಲಾಕ್‍ಡೌನ್ ಮಾಡಲು ಮುಖ್ಯಮಂತ್ರಿಗಳಿಗೆ ಅಶೀಸರ & ಇಲಿಯಾಸ್ ಮನವಿ

ಇಡೀ ಭಾರತಕ್ಕೆ ಲಾಕ್ಡೌನ್ ಅಗತ್ಯವಿಲ್ಲ, ಕರ್ನಾಟಕಕ್ಕೆ ಬೇಕಾಗಿದೆ: ತಜ್ಞರು

ದೇಶದಲ್ಲಿ ದಿನ ಕಳೆದಂತೆ ಸೋಂಕಿತರ ಸಂಖ್ಯೆ ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲೆ ಎಲ್ಲೆಡೆ ಇಡೀ ದೇಶವನ್ನು ಲಾಕ್ಡೌನ್ ಮಾಡುವಂತೆ ಆಗ್ರಹಗಳು ಕೇಳಿ ಬರುತ್ತಿವೆ. ಆದರೆ, ಕೆಲ ತಜ್ಞರು ಇಡೀ ಭಾರತಕ್ಕೆ ಲಾಕ್ಡೌನ್ ಅಗತ್ಯವಿಲ್ಲ. ಆದರೆ, ಹೆಚ್ಚೆಚ್ಚು ಸೋಂಕು ಇರುವ ಪ್ರದೇಶ ಹಾಗೂ ರಾಜ್ಯಗಳಿಗೆ ಲಾಕ್ಡೌನ್ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ವ್ಯಾಪಕವಾಗಿ ವಿಸ್ತರಿಸುತ್ತಿರುವ ಕರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಮಾತ್ರ ದಿವ್ಯ ಔಷಧಎಂದಿರುವ ಜೆ.ಡಿ.ಎಸ್. ಉತ್ತರ ಕನ್ನಡ ಜಿಲ್ಲಾ ಅಲ್ಫಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್ ಶೇಖ್ ಈ ದುರಿತ ಕಾಲದಲ್ಲಿ ಬಿ.ಪಿ.ಎಲ್. ಕಾರ್ಡ್ ರದ್ದುಮಾಡಿರುವುದು, ಸ್ಥಳೀಯ ಸಂಸ್ಥೆಗಳಲ್ಲಿ ತೆರಿಗೆ ವಸೂಲಾತಿಗೆ ಒತ್ತಾಯಿಸುವುದು, ಸಾಲಮರುಪಾವತಿಗೆ ಸಮಯಾವಕಾಶ ನೀಡದಿರುವುದು ಇವು ನಾಗರಿಕ ಸಮಾಜ ಒಪ್ಪುವ ಅಂಶಗಳಲ್ಲ.ಇಂಥ ಜನವಿರೋಧಿ ಕೆಲಸಗಳಿಂದ ಬಿ.ಜೆ.ಪಿ. ಅದರ ನಾಯಕರ ಜನಪರ ಕಾಳಜಿ ಪರೀಕ್ಷೆಗೊಳಪಡುತ್ತಿದೆ ಎಂದು ಅಸಮಧಾನವ್ಯಕ್ತಪಡಿಸಿದ್ದಾರೆ.

ಲಾಕ್‍ಡೌನ್ ಮಾಡಲು ಮುಖ್ಯಮಂತ್ರಿಗಳಿಗೆ ಅಶೀಸರ ಮನವಿ
ಸಿದ್ದಾಪುರ
ರಾಜ್ಯದಲ್ಲಿ ಕೊರೊನಾ ಕಾಯಿಲೆ ಉಲ್ಪಣಿಸುತ್ತಿದ್ದು, ಗ್ರಾಮೀಣ ಪ್ರದೇಶಕ್ಕೂ ವ್ಯಾಪಕವಾಗಿ ಹಬ್ಬಿದೆ. ಇನ್ನೂ ಹೆಚ್ಚು ಹರಡಿದರೆ ನಿಯಂತ್ರಣ ಕಷ್ಟ. ಕಾಯಿಲೆ ಹರಡದಂತೆ ನಿಯಂತ್ರಿಸುವ ದೃಷ್ಟಿಯಿಂದ ಲಾಕ್‍ಡೌನ್ ವಿಧಿಸುವದು ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವgನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ತಿಳಿಸಿದರು.

File photo

ಬೆಂಗಳೂರು: ದೇಶದಲ್ಲಿ ದಿನ ಕಳೆದಂತೆ ಸೋಂಕಿತರ ಸಂಖ್ಯೆ ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲೆ ಎಲ್ಲೆಡೆ ಇಡೀ ದೇಶವನ್ನು ಲಾಕ್ಡೌನ್ ಮಾಡುವಂತೆ ಆಗ್ರಹಗಳು ಕೇಳಿ ಬರುತ್ತಿವೆ. ಆದರೆ, ಕೆಲ ತಜ್ಞರು ಇಡೀ ಭಾರತಕ್ಕೆ ಲಾಕ್ಡೌನ್ ಅಗತ್ಯವಿಲ್ಲ. ಆದರೆ, ಹೆಚ್ಚೆಚ್ಚು ಸೋಂಕು ಇರುವ ಪ್ರದೇಶ ಹಾಗೂ ರಾಜ್ಯಗಳಿಗೆ ಲಾಕ್ಡೌನ್ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಕೋವಿಡ್ ತಜ್ಞ ಸಮಿತಿಯ ಸದಸ್ಯ ಹಾಗೂ ವೈರಾಲಜಿಸ್ಟ್ (ಸೂಕ್ಷ್ಮರೋಗಾಣು ಶಾಸ್ತ್ರಜ್ಞ) ಡಾ.ವಿ.ರವಿಯವರು ಮಾತನಾಡಿ, ಪ್ರಸ್ತುತ ಬೆಳವಣಿಗೆ ಗಮನಿಸಿದರೆ, ಇಡೀ ಭಾರತಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಎಂದೆನಿಸುತ್ತದೆ. ಕೆಲವು ತಿಂಗಳ ವೈಜ್ಞಾನಿಕ ವರದಿಯನ್ನು ಆಧರಿಸಿ ಆಯಾ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಗೊಳಿಸುವ ಕುರಿತು ನಿರ್ಧಾರ ಕೈಗೊಳ್ಳಬೇಕಿದೆ. ಸೋಂಕು ನಿಯಂತ್ರಿಸಲು ಇಡೀ ದೇಶವನ್ನೇ ಲಾಕ್ಡೌನ್ ಮಾಡುವುದು ಪರಿಹಾರವಲ್ಲ ಎಂದು ಹೇಳಿದ್ದಾರೆ. 

https://imasdk.googleapis.com/js/core/bridge3.455.0_en.html#goog_1313849326

ಭಾರತದ ವಾಸ್ತವಿಕ ಸತ್ಯಗಳು ಬೇರೆಯಾಗಿದೆ. ಮಹಾರಾಷ್ಟ್ರದಲ್ಲಿ ಸೋಂಕು ವ್ಯಾಪಕಗೊಂಡಿತ್ತು. ಇದೀಗ ನಿಧಾನಗತಿಯಲ್ಲಿ ಕಡಿಮೆಯಾಗುತ್ತಿದೆ. ಮಹಾರಾಷ್ಟ್ರದಲ್ಲಿ ಅತ್ಯಂತ ಕಠಿಣ ಲಾಕ್ಡೌನ್ ಜಾರಿಗೆ ತರಲಾಗಿತ್ತು. ಇದೀಗ ಸಡಿಲಗೊಳಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕದಲ್ಲಿಯೂ ಸೋಂಕು ವ್ಯಾಪಕಗೊಂಡಿದ್ದು, ಕೆಲವು ವಾರಗಳ ಬಳಿಕ ಕಡಿಮೆಯಾಗಲಿದೆ. ಹೀಗಾಗಿ ಇಡೀ ಭಾರತವನ್ನೇ ಲಾಕ್ಡೌನ್ ಮಾಡುವ ಬದಲು ಆಯಾ ರಾಜ್ಯಗಳಲ್ಲಿ ಮಾತ್ರ ಲಾಕ್ಡೌನ್ ಜಾರಿ ಮಾಡಬೇಕು ಎಂದು ತಿಳಿಸಿದ್ದಾರೆ. 

ಮಾರ್ಚ್ ಮಧ್ಯಂತರ- ಮೇ ತಿಂಗಳಿನಲ್ಲಿ ದೇಶದಲ್ಲಿ ಕೊರೋನಾ 2ನೇ ಅಲೆ ಏಳಲಿದೆ ಎಂದು ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲೇ ನಾನು ಎಚ್ಚರಿಕೆ ನೀಡಿದ್ದೆ. ನಾನಷ್ಟೇ ಅಲ್ಲ, ಹಲವು ತಜ್ಞರು ಸಲಹೆ ಹಾಗೂ ಎಚ್ಚರಿಕೆಯನ್ನು ನೀಡಿತ್ತರು. ಆದರೆ, ಸಲಹೆಗಳನ್ನು ನಮ್ಮ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ನಿರ್ಲಕ್ಷ್ಯಿಸಿದ್ದರು. ಮಹಾರಾಷ್ಟ್ರದಲ್ಲಿ ಸೋಂಕು ವ್ಯಾಪಕಗೊಂಡಾಗಲೂ ಕೂಡ ಯಾವುದೇ ಕಠಿಣ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿಲ್ಲ. ಜನರು ಎಲ್ಲಾ ಎಚ್ಚರಿಕೆಗಳನ್ನು ಗಾಳಿಗೆ ತೂರಿದ್ದರು. ಸರ್ಕಾರ ಕೂಡ ಚುನಾವಣಾ ರ್ಯಾಲಿಗಳನ್ನು ನಡೆಸಿತು, ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿದರು. 

ಸೋಂಕು ನಿಯಂತ್ರಣಗೊಂಡರೂ ಕೂಡ ಸರ್ಕಾರ ಆರ್ಥಿಕ ಚಟುವಟಿಕೆಗಳ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಜನರು ಕಡ್ಡಾಯವಾಗಿ ಮಾಸ್ಕ್’ಗಳನ್ನು ಧರಿಸಲೇಬೇಕು. ಲಸಿಕೆ ಪಡೆಯಬೇಕು. ಅಕ್ಟೋಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಕೊರೋನಾ 3ನೇ ಅಲೆ ಆರಂಭವಾಗಲಿದೆ. ಇದು ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಏಕೆಂದರೆ ಮಕ್ಕಳಿಗೆ ಯಾವುದೇ ಲಸಿಕೆಗಳೂ ಬಂದಿಲ್ಲ ಎಂದು ಎಚ್ಚರಿಸಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *