ಡಾ. ಶ್ರೇಯಸ್ ಎಸ್ ವೈದ್ಯ ಗೆ ಪ್ರಥಮ ರ್ಯಾಂಕ್..ಸಂಕಟದ ನಡುವೆ ಭರವಸೆಯ ಕತೆಗಳು…


ಸಿದ್ದಾಪುರ. ತಾಲೂಕಿನ ಪ್ರಸಿದ್ಧ ವೈದ್ಯ ದಂಪತಿಗಳಾದ ಡಾ. ಶ್ರೀಧರ ವೈದ್ಯ ಮತ್ತು ಡಾ. ಸುಮಂಗಲಾ ವೈದ್ಯರ ಪುತ್ರ ಡಾ. ಶ್ರೇಯಸ್ ವೈದ್ಯ ಪ್ರಥಮ ರ್ಯಾಂಕ್ ನೊಂದಿಗೆ ಪೀಡಿಯಾಟ್ರಿಕ್ಸ ನಲ್ಲಿ ಎಂ.ಡಿ. (ಸ್ನಾತಕೋತ್ತರ ಪದವಿ) ಪೂರೈಸಿದ್ದಾರೆ. ವಿಜಯಪುರದ ಬಿ.ಎಲ್.ಡಿ.ಇ. ಡೀಮ್ಡ್ ಯುನಿವರ್ಸಿಟಿಯಲ್ಲಿ ಉನ್ನತ ವೈದ್ಯಕೀಯ ಶಿಕ್ಷಣ ಪಡೆದು ಈ ಸಾಧನೆಗೈದಿದ್ದಾರೆ. ಇವರು ಪ್ರಾಥಮಿಕ ಶಿಕ್ಷಣವನ್ನು ಸಿದ್ದಾಪುರದ ಪ್ರಶಾಂತಿ ಶಾಲೆ ಮತ್ತು ಲಿಟ್ಲ ಫ್ಲಾವರ್ ಶಾಲೆಗಳಲ್ಲಿ ಪಡೆದಿದ್ದರು. ಮುಂದೆ ಪಿಯುಸಿ ಯನ್ನು ಮಹೇಶ ಪಿಯು ಕಾಲೇಜು ಮಂಗಳೂರು ಹಾಗೂ ಎಂ.ಬಿ.ಬಿ.ಎಸ್. ಪದವಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜು ಧಾರವಾಡದಲ್ಲಿ ಪೂರೈಸಿದ್ದರು.
ಪ್ರಸೂತಿ ತಜ್ಞ ತಂದೆ, ಅರವಳಿಕೆ ತಜ್ಞೆ ತಾಯಿಯೊಂದಿಗೆ ಮಕ್ಕಳ ತಜ್ಞರಾಗಿ ಮಗ ಶ್ರೇಯಸ್ ವೈದ್ಯ ವೃತ್ತಿಜೀವನ ಪ್ರಾರಂಭಿಸಲಿದ್ದಾರೆ.

ಸಂಕಟದ ನಡುವೆ ಭರವಸೆಯ ಕಥೆಗಳು: ಕೊರೋನಾ ಜಯಿಸಿದ 103 ವರ್ಷದ ವೃದ್ದ, ಪಂಜಾಬ್ ಮೂಲದ ನವಜಾತ ಶಿಶು!

ಮಹಾರಾಷ್ಟ್ರದ ಪಲ್ಗ್ಹರ್ ಮೂಲದ 103 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಪಲ್ಗ್ಹರ್: ಮಹಾರಾಷ್ಟ್ರದ ಪಲ್ಗ್ಹರ್ ಮೂಲದ 103 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಇಲ್ಲಿನ ವೀರೇಂದ್ರ ನಗರ ಪ್ರದೇಶದ ಮೂಲದವರಾದ ಶಮರಾವ್ ಇಂಗಳೆ ಅವರನ್ನು ಸೋಂಕಿನ ಕಾರಣ ಪಲ್ಗ್ಹರ್ ನ ಗ್ರಾಮೀಣ ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗದಿಂದ ಚೇತರಿಸಿಕೊಂಡ ನಂತರ ಅವರನ್ನು ಶನಿವಾರ ಡಿಸ್ಚಾರ್ಜ್ ಮಾಡಲಾಗಿದೆ. 

https://imasdk.googleapis.com/js/core/bridge3.455.0_en.html#goog_1128022454

https://imasdk.googleapis.com/js/core/bridge3.455.0_en.html#goog_1128022457

https://imasdk.googleapis.com/js/core/bridge3.455.0_en.html#goog_1128022460

ಆಸ್ಪತ್ರೆಯ ವೈದ್ಯರ ಪ್ರಕಾರ, ವೃದ್ಧರು ತನಗೆ ಒದಗಿಸಿದ ವೈದ್ಯಕೀಯ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದರು. ಅಲ್ಲದೆ ಆಸ್ಪತ್ರೆ ಸಿಬ್ಬಂದಿಗಳೊಂದಿಗೆ ಸಹಕರಿಸಿದರು. ಅವರು ಶನಿವಾರ ನಗುಮುಖದೊಡನೆ ಆಸ್ಪತ್ರೆಯಿಂದ ಹೊರ ನಡೆದರು. 

ಪಲ್ಗ್ಹರ್  ಕಲೆಕ್ಟರ್ ಡಾ.ಮಣಿಕ್ ಗುರ್ಶಾರ್ ಮತ್ತು ಆಸ್ಪತ್ರೆಯ ಸಿಬ್ಬಂದಿ ಅವರ ಡಿಸ್ಚಾರ್ಜ್ ಸಮಯದಲ್ಲಿ ಹೂವುಗಳನ್ನು ನೀಡಿ ಬೀಳ್ಕೊಟ್ಟರು. ಅಧಿಕೃತ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ ಒಟ್ಟು 95,682 ಕೊರೋನಾ ಪ್ರಕರಣಗಳು ಹಾಗೂ ಅಧಿಕೃತ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ ಒಟ್ಟು 95,682

ವೈರಸ್‌ನಿಂದ ಚೇತರಿಸಿಕೊಂಡ ಪಂಜಾಬ್‌ನ ನವಜಾತ ಶಿಶು

ಏಪ್ರಿಲ್ ಆರಂಭದಲ್ಲಿ, ಗುರ್ದೀಪ್ ಸಿಂಗ್ ಮತ್ತು ಅವರ ಪತ್ನಿ ಸಂದೀಪ್ ಕೌರ್ ಗಂಡು ಮಗುವಿಗೆ ಪೋಷಕರೆನಿಸಿಕೊಂಡರು. ಆದರೆ ಮಗು ಜನಿಸಿ ಕೇವಲ  20 ದಿನಗಳ ನಂತರ ಅವರ ಸಂತೋಷಕ್ಕೆಲ್ಲಾ ಅಂತ್ಯ ಹಾಡುವಂತೆ ಮಗುವಿಗೆ ಹೆಚ್ಚಿನ ಜ್ವರ ಮತ್ತು ರೋಗಗ್ರಸ್ತ ಸ್ಥಿತಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂತು.

ಆ ವೇಳೆ ಮಗುವಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಪರಿಣಾಮ ಗುರ್ದೀಪ್ ತನ್ನ ಮಗುವನ್ನು ನೋಡಲೂ ಆಗಲಿಲ್ಲ. 

ಹತ್ತು ದಿನಗಳ ನಂತರ, ಶುಕ್ರವಾರ ಜಲಂಧರ್‌ನ ಪಂಜಾಬ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಪಿಮ್ಸ್) ನಿಂದ ಶಿಶುವನ್ನು ಡಿಸ್ಚಾರ್ಜ್ ಮಾಡಲಾಗಿದ್ದು  ಆ ಸಮಯದಲ್ಲಿ ಮಗುವಿನ ತಂದೆ ಗುರ್ದೀಪ್, “ದೇವರು ನಮ್ಮ ಪ್ರಾರ್ಥನೆಯನ್ನು ಕೇಳಿದನೆಂದು ತೋರುತ್ತದೆ” ಎಂದು ಹೇಳಿದರು.

ಮಗುವಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದಾಗ ಕುಟುಂಬ ಆಘಾತವನ್ನು ಅನುಭವಿಸಿದೆ. ಆರ್‌ಟಿ-ಪಿಸಿಆರ್ ಸೇರಿದಂತೆ ಎಲ್ಲಾ ವೈದ್ಯಕೀಯ ಪರೀಕ್ಷೆಗಳ ಮೂಲಕ ಪರೀಕ್ಷಿಸಿದ ನಂತರ ಶಿಶುವನ್ನು ಜಲಂಧರ್‌ನ ಪಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಮಗನನ್ನು ಮತ್ತೊಮ್ಮೆ ತನ್ನ ಮಡಿಲಲ್ಲಿ ಮಲಗಿಸಿಕೊಂಡ ತಾಯಿಯ ಸಂತಸಕ್ಕೆ ಮಿತಿ ಇಲ್ಲ.

“ದೇವರ ಅನುಗ್ರಹದಿಂದ, ನನ್ನ ಮೊಮ್ಮಗ ಮನೆಗೆ ಮರಳಿದ್ದಾನೆ. ವೈದ್ಯರು ಅವನನ್ನು ಚೆನ್ನಾಗಿ ನೋಡಿಕೊಂಡರು” ಎಂದು ಶಿಶುವಿನ ಅಜ್ಜಿ ಕುಲ್ವಿಂದರ್ ಕೌರ್ ಹೇಳಿದರು. “ನಾವು ಮಗುವನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದೆವು. ಶಿಶುವೊಂದು ತುಂಬಾ ದೊಡ್ಡ ನೋವಿನಿಂದ ಬಳಲುತ್ತಿದ್ದದ್ದು ಕಾಣುವುದುಕಷ್ಟಕರವಾಗಿತ್ತು” ಎಂದು ಪಿಮ್ಸ್ ನರ್ಸ್ ನರ್ಬಿ ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *