ಜನಪರತೆ, ಜನಪ್ರೀಯತೆ ಸುಮ್ಮನೆ ಬರುವುದೆ….?

ಉತ್ತರ ಕನ್ನಡ ಜಿಲ್ಲೆ, ರಾಜ್ಯ, ದೇಶ ಅನೇಕ ಪಕ್ಷ, ರಾಜಕಾರಣಿಗಳನ್ನು ಕಂಡಿದೆ. ಅಂಥವರಲ್ಲಿ ನರೇಂದ್ರ ಮೋದಿ, ವಿಶ್ವೇ ಶ್ವರ ಹೆಗಡೆ, ಅನಂತಕುಮಾರ ಹೆಗಡೆ ಸೇರಿದ ನೂರಾರು ಜನರಿದ್ದಾರು. ಮಿ.ಪ್ರತಿಪಕ್ಷ ಲೋಹಿಯಾ ಅನಾರೋಗ್ಯಕ್ಕೀಡಾದಾಗ ಸರ್ಕಾರಿ ಆಸ್ಫತ್ರೆ ಬಿಟ್ಟು ಕಾಸಗಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಬೇಡ ಎಂದು ವಿರೋಧಿಸಿದ್ದರು. ರಾಜ್ಯ ವಿಧಾನಸಭಾ ಅಧ್ಯಕ್ಷ ಕಾಗೇರಿ ಬಡವರಿಗೆ ಚಿಕಿತ್ಸೆ ನೀಡದ ಶಿರಸಿ ಟಿ.ಎಸ್.ಎಸ್. ಆಸ್ಫತ್ರೆಯ ವಿಶೇಷ ಮುತುವರ್ಜಿಯ ವ್ಯವಸ್ಥೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆದರೆಂದು ಕೇಳಿದೆ.

ಉತ್ತರ ಕನ್ನಡದ ಕಾಲುಶತಮಾನದ ಸಂಸದ ಅನಂತ ಹೆಗಡೆ ತಾವೂ ಪಾಲುದಾರರಾದ ಕೆ.ಎಸ್. ಹೆಗಡೆ ಆಸ್ಫತ್ರೆಯಲ್ಲಿ ಹೈಟೆಕ್ ಚಿಕಿತ್ಸೆ ಪಡೆದರು. ಇರಲಿ ಅವರ ಪ್ರಾಣ, ಭವಿಷ್ಯವೂ ಮಹತ್ವದ್ದೇ…. ಆದರೆ ಲಾಕ್ ಡೌನ್ ನೆಪದಲ್ಲಿ ದಿನಸಿ, ತರಕಾರಿ ಮಾರುವ ಮಾಫಿಯಾ ಸೃಷ್ಟಿಸಿರುವ ಶಿರಸಿ-ಸಿದ್ಧಾಪುರದ ಅಧಿಕಾರಿಗಳನ್ನು ನಿಯಂತ್ರಿಸುವ ತಾಕತ್ತಿಲ್ಲದ ಜನಪ್ರತಿನಿಧಿಗಳು ಕರೋನಾ ಲೂಟಿಯ ಪಾಲುದಾರರಾಗಿ ಉತ್ತರ ಕನ್ನಡವನ್ನು ದೋಚುತಿದ್ದಾರೆ. ಇದರ ನಡುವೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಜನಮೆಚ್ಚುವ ಕೆಲಸ ಮಾಡಿದ್ದಾರೆ.

ಜನಸಾಮಾನ್ಯರು ಹೇಳುವಂತೆ 25 ವರ್ಷಗಳಿಗಿಂತ ಹೆಚ್ಚು ಕಾಲ ಜನಪ್ರತಿನಿಧಿಗಳಾದ ಶಿರಸಿಯ ವಿಶ್ವೇಶ್ವರ ಹೆಗಡೆ, ಅನಂತಹೆಗಡೆ ಗಳಿಗೆ ಹಿಂದುತ್ವದ ಭಾಷಣದ ಮೇಲೆ ಮತದಾನ ಮಾಡುವ ಮೂರ್ಖರಿಗೆ ಅವರನ್ನು ಪ್ರಶ್ನಿಸುವ ನೈತಿಕತೆಯಾದರೂ ಉಳಿದಿದೆಯಾ? ಸಿದ್ಧಾಪುರ, ಶಿರಸಿ ಸೇರಿದಂತೆ ಉತ್ತರ ಕನ್ನಡದಿಂದ ಸಾಗಹಾಕುವ ರೋಗಿಗಳಲ್ಲಿ ಬಹಳಷ್ಟು ಜನ ಹೆಣವಾಗಿ ಊರಿಗೂ ಮರಳುತ್ತಿಲ್ಲ ಎನ್ನುವ ವಾಸ್ತವ ರಾಷ್ಟ್ರೀಯವಾದಿ, ಹಿಂದುತ್ವವಾದಿ ಜನಪ್ರತಿನಿಧಿಗಳಿಗೆ ಅರ್ಥವಾಗುತ್ತಿದೆಯಾ…….ಜನ ಪ್ರಶ್ನೆ ಮಾಡಿದ್ದರೆ ಉತ್ತರ ಕನ್ನಡ ಉತ್ತರ ಕಾಣದ ಮತಾಂಧರ ಜಿಲ್ಲೆ ಎಂಬ ಆರೋಪಕ್ಕೆ ಒಳಗಾಗುತಿತ್ತೇ?

ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ಇಂದು ಯಲ್ಲಾಪುರ ಪಟ್ಟಣದ ತಾಲೂಕಾ ಪಂಚಾಯತ ಆವರಣದಲ್ಲಿ ಪಕ್ಷದ ಗಣ್ಯರ ಸಮ್ಮುಖದಲ್ಲಿ ” ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ” ವಾಹನಕ್ಕೆ ಚಾಲನೆ ನೀಡಲಾಯಿತು. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಪ್ರತಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಂಡ್ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಒಂದೊಂದು ವಾಹನವನ್ನು ಉಚಿತವಾಗಿ ನೀಡಲಾಗಿದೆ. ಈ ಹೆಲ್ಪ್ ಲೈನ್ ಸಂಖ್ಯೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ಮತ್ತು ಪಕ್ಷದ ಕಾರ್ಯಕರ್ತರು ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ಸಂಖ್ಯೆಗೆ ಕರೆ ಮಾಡಿ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಬೇಕಾಗಿ ವಿನಂತಿಸಿಕೊಳ್ಳುತ್ತೇವೆ.ಸಹಾಯವಾಣಿ ಸಂಖ್ಯೆ +918050749099+918050767599

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *