ಪಿ.ಎಚ್.ನಾಯ್ಕ ಮೆಣಸಿ, ವಸಂತ ಹೆಗಡೆ ಸಶಿಗುಳಿ ನಿಧನ

ಉತ್ತರ ಕನ್ನಡ ಜಿಲ್ಲೆಯ ಜನತಾದಳ ಯು ಅಧ್ಯಕ್ಷ ಕ್ಯಾದಗಿ, ಇಟಗಿ ಗ್ರಾಮ ಪಂಚಾಯತ್ ಗಳ ಮಾಜಿ ಸದಸ್ಯ ವಸಂತ ಹೆಗಡೆ ಮತ್ತು ನಿವೃತ್ತ ಉಪನ್ಯಾಸಕ ಪಿ.ಎಚ್.ನಾಯ್ಕ ಮೆಣಸಿ ನಿಧನರಾಗಿದ್ದಾರೆ.

ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದ ವಸಂತ ಹೆಗಡೆ ಸಶಿಗುಳಿ ಶಿವಮೊಗ್ಗ ಮೆಗ್ಗಾನ್ ಆಸ್ಫತ್ರೆಯಲ್ಲಿ ಬುಧವಾರ ಬೆಳಿಗ್ಗೆ ಹೃದಯಾಘಾತಕ್ಕೊಳಗಾಗಿದ್ದರು. ಕಳೆದ ಎರಡು ದಿವಸಗಳ ಹಿಂದೆ ಸಿದ್ಧಾಪುರದಲ್ಲಿ ಕೋವಿಡ್ ಚಿಕಿತ್ಸೆ ಪಡೆದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗಕ್ಕೆ ರವಾನಿಸಲಾಗಿತ್ತು. ವಸಂತ ಹೆಗಡೆ ಈ ಹಿಂದೆ ತಲಾ ಒಂದೊಂದು ಬಾರಿ ಕ್ಯಾದಗಿ ಮತ್ತು ಇಟಗಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಉತ್ತರ ಕನ್ನಡ ಜಿಲ್ಲಾ ಜೆ.ಡಿ.ಯು.ಅಧ್ಯಕ್ಷರಾಗಿದ್ದ ಹೆಗಡೆ ಸಾಮಾಜಿಕ, ರಾಜಕೀಯ ಸೇವೆಗಳ ಮೂಲಕ ಜನಪ್ರೀಯರಾಗಿದ್ದರು. ವಸಂತ ಹೆಗಡೆಯವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕ್ಯಾದಗಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎಸ್.ಆರ್. ನಾಯ್ಕ, ಇಟಗಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಲಲಿತಾ ನಾಯ್ಕ, ಕೆ.ಟಿ.ನಾಯ್ಕ ಹೆಗ್ಗೇರಿ ಸೇರಿದ ಕೆಲವರು ಅವರ ಸಾಮಾಜಿಕ ಕೆಲಸಗಳನ್ನು ಸ್ಮರಿಸಿದ್ದಾರೆ.

ಪಿ.ಎಚ್.ನಾಯ್ಕಮೆಣಸಿ- ಕುಮಟಾ ಬಾಳಿಗಾ ಕಾಲೇಜಿನ ವಿಜ್ಞಾನ ಉಪನ್ಯಾಸಕರಾಗಿ ನಿವೃತ್ತರಾಗಿದ್ದ ಪಿ.ಎಚ್. ನಾಯ್ಕ ಮೆಣಸಿ ಬುಧವಾರ ನಿಧನರಾಗಿದ್ದಾರೆ. ಸಿದ್ಧಾಪುರದ ಮೂಲನಿವಾಸಿ ದೀವರ ಸಮೂದಾಯದ ಮೊದಲ ವಿಜ್ಞಾನ ಸ್ನಾತಕೋತ್ತರ ಪದವಿಧರರಾಗಿದ್ದ ನಾಯ್ಕ ತಮ್ಮ ಸೇವಾ ನಿವೃತ್ತಿಯ ನಂತರ ಹುಟ್ಟೂರು ಮೆಣಸಿಯಲ್ಲಿ ವಿಶ್ರಾಂತ ಜೀವನ ನಡೆಸುತಿದ್ದರು. ತಾಲೂಕಾ ನಾಮಧಾರಿ ಅಭಿವೃದ್ಧಿ ಸಂಘ, ಸಾಹಿತ್ಯ ಪರಿಷತ್, ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ದುಡಿದಿದ್ದ ಪಿ.ಎಚ್. ನಾಯ್ಕ ಹಲವು ಪ್ರಶಸ್ತಿ, ಗೌರವ, ಪುರಸ್ಕಾರ ಪಡೆದ ಹಿರಿಯನಾಗರಿಕರಾಗಿದ್ದರು. ಸಿದ್ಧಾಪುರ ವಕೀಲರ ಸಂಘದ ಅಧ್ಯಕ್ಷ ದಿನೇಶ್ ನಾಯ್ಕರೊಂದಿಗೆ ಎಡರು ಜನ ಪುತ್ರರು, ಪುತ್ರಿ ಸೇರಿದ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. ಪಿ.ಎಚ್. ನಾಯ್ಕರ ನಿಧನಕ್ಕೆ ಸಿದ್ಧಾಪುರ ವಕೀಲರ ಸಂಘದ ಕಾರ್ಯದರ್ಶಿ ಕೆ.ಜಿ.ನಾಯ್ಕ, ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಎಂ.ಬಿ.ನಾಯ್ಕ ಕಡಕೇರಿ, ತಾ.ಕ.ಸಾ. ಪ. ಮಾಜಿ ಅಧ್ಯಕ್ಷ ಸಮಾಜಮುಖಿ ಕನ್ನೇಶ್ ಕೋಲಶಿರ್ಸಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *