

ಕರೋನಾ ಎರಡನೇ ಅಲೆ ಉತ್ತರ ಕನ್ನಡವನ್ನು ದೇಶಮಟ್ಟದಲ್ಲಿ ಗುರುತಿಸಿದೆ. ದೇಶ, ರಾಜ್ಯದ ಲ್ಲಿ ಕೋವಿಡ್ ಪರೀಕ್ಷೆಗೊಳಗಾದವರಲ್ಲಿ 47% ಸರಾಸರಿ ಸೋಂಕು ದೃಢಪಟ್ಟ ಉತ್ತರ ಕನ್ನಡ ಜಿಲ್ಲೆ ದೇಶದಲ್ಲೇ ಸರಾಸರಿ ಪ್ರಮಾಣದಲ್ಲಿ ಮೊದಲಸ್ಥಾನದಲ್ಲಿದೆ. ಸಿದ್ಧಾಪುರ, ಅಂಕೋಲಾ, ಶಿರಸಿ, ದಾಂಡೇಲಿ, ಹಳಿಯಾಳ ಸೇರಿದ ಬಹುತೇಕ ತಾಲೂಕುಗಳಲ್ಲಿ ಕೋವಿಡ್ ಆರ್ಭಟ ಜೋರಾಗಿದೆ. ಇಂದು ಸಿದ್ಧಾಪುರ ತಾಲೂಕಿನ ಮನ್ಮನೆ ಗ್ರಾಮ ಪಂಚಾಯತ್ ಮನ್ಮನೆ ಗ್ರಾಮವನ್ನು ಶೀಲ್ಡ್ ಡೌನ್ ಮಾಡಲಾಗಿದೆ.

ಸ್ಥಳಿಯ ಶಾಸಕ, ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖಗವಸು ತೆಗೆದು ಮದುವೆ ಸಂದರ್ಭದಲ್ಲಿ ಪಾಲ್ಗೊಂಡ ಮೇಲೆ ಈ ಗ್ರಾಮದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಪತ್ತೆಯಾಗಿದ್ದು ಮತ್ತು ವಿಸ್ತರಿಸಿದ್ದು ಎನ್ನುವ ಆರೋಪವೂ ಕೇಳಿ ಬಂದಿದೆ. ಸ್ವಯಂ ಕೋವಿಡ್ ಸೋಂಕಿತರಾಗಿರುವ ಕಾಗೇರಿ ವಿಶ್ವೇಶ್ವರ ಹೆಗಡೆ ಕೂಡಾ ಈವರೆಗೂ ಕೋವಿಡ್ ಚಿಕಿತ್ಸೆಯಿಂದ ಮುಕ್ತವಾಗಿಲ್ಲ ಎನ್ನಲಾಗುತ್ತಿದೆ.
ಸಿದ್ಧಾಪುರ ಕೋಲಶಿರ್ಸಿ ಗ್ರಾ.ಪಂ.-93,ಮನ್ಮನೆ-77,ಅಣಲೇಬೈಲ್-65 ಪ್ರಕರಣಗಳು







_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
