ಮನೆಯಿಂದ ಕಾಳಜಿ ಕೇಂದ್ರಕ್ಕೆ ಬನ್ನಿ, ಅವಶ್ಯವಿದ್ದರೆ ಸಂಪೂರ್ಣ ಲಾಕ್ ಡೌನ್, ಚುರುಕಾದ ಜಿಲ್ಲಾಡಳಿತ

  • ಕಾರವಾರ, ದಾಂಡೇಲಿ ಫುಲ್ ಲಾಕ್ ಡೌನ್, * ಜಿಲ್ಲೆಯಲ್ಲಿ 26 ಕ್ಕೆ ಏರಿದ ಕಂಟೈನ್ಮೆಂಟ್ ಜೋನ್ ಸಂಖ್ಯೆ
  • ಹೋಮ್ ಐಸೋಲೇಶನ್ ನಿಂದ ಕೋವಿಡ್ ಕಾಳಜಿ ಕೇಂದ್ರಗಳಿಗೆ ಸೋಂಕಿತರನ್ನು ಕರೆತರುವ ಪ್ರಯತ್ನ
  • ಯಲ್ಲಾಪುರ, ಸಿದ್ಧಾಪುರಗಳಿಗೆ ಕೋವಿಡ್ ಪರೀಕ್ಷೆಯಲ್ಲಿ ಮೊದಲಸ್ಥಾನ
    • ಅವಶ್ಯವಿದ್ದರೆ ಇನ್ನಷ್ಟು ತಾಲೂಕುಗಳಲ್ಲಿ ಫುಲ್ ಲಾಕ್ ಡೌನ್
    • ಕಾರವಾರದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಜಿಲ್ಲಾಧಿಕಾರಿಗಳ ಸಭೆ

ಉತ್ತರ ಕನ್ನಡ ಜಿಲ್ಲೆಯ ಕೋವಿಡ್ ಕಾಳಜಿ ಕೇಂದ್ರಗಳು ಸುಸಜ್ಜಿತವಾಗಿದ್ದರೂ ಅಲ್ಲಿಗೆ ತೆರಳಲು ಹಿಂದೇಟು ಹಾಕುತ್ತಿರುವ ಕೋವಿಡ್ ಸೋಂಕಿತ ರನ್ನು ಆಕರ್ಷಿಸಲು ಜಿಲ್ಲಾಡಳಿತ ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಂಡೇಲಿ, ಹಳಿಯಾಳದಲ್ಲಿ ಕೋವಿಡ್ ಪರೀಕ್ಷೆಗೊಳಪಟ್ಟವರಲ್ಲಿ ಪ್ರತಿಶತ 60 ಕ್ಕಿಂತ ಹೆಚ್ಚು ಜನರಲ್ಲಿ ಕರೋನಾ ಸೋಕು ದೃಢಪಡುತ್ತಿದೆ. ಈ ಪ್ರಮಾಣದಿಂದಾಗಿ ಉತ್ತರ ಕನ್ನಡ ಜಿಲ್ಲೆ ದೇಶದಲ್ಲೇ ಅತಿ ಹೆಚ್ಚು ಸರಾಸರಿ ಕೋವಿಡ್ ದೃಢಪಡುತ್ತಿರುವ ಜಿಲ್ಲೆ ಎಂದು ಕುಖ್ಯಾತವಾಗಿದೆ. ಹೆಚ್ಚು ಪರೀಕ್ಷೆ, ಹೆಚ್ಚು ಸೋಂಕು ಪತ್ತೆ ವಿದ್ಯಮಾನ ಕೂಡಾ ಉತ್ತರ ಕನ್ನಡ ಜಿಲ್ಲೆಯ ವಿಶೇಷವಾಗಿದೆ.

ಜಿಲ್ಲೆಯಲ್ಲಿ ದಾಂಡೇಲಿ ಕಾರವಾರಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಶಿಸಿದ್ದರೆ ಉಳಿದ 12 ತಾಲೂಕುಗಳಲ್ಲಿ ಮುಂಜಾನೆ 6 ರಿಂದ ಖರೀದಿಗೆ ಅವಕಾ ಶ ನೀಡಲಾಗಿದೆ. ಕೋವಿಡ್ ಪರೀಕ್ಷೆಯಲ್ಲಿ ಸಿದ್ದಾಪುರ ಮತ್ತು ಯಲ್ಲಾಪುರ ಮೊದಲ ಸ್ಥಾನದಲ್ಲಿದ್ದರೆ ಕಾರವಾರ, ಹಳಿಯಾಳ, ದಾಂಡೇಲಿ ಸೇರಿದಂತೆ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ನಿಶ್ಚಿತ ಗುರಿಗಿಂತ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಜಿಲ್ಲೆಯಲ್ಲಿ ಪ್ರತಿ ತಾಲೂಕುಗಳಲ್ಲಿ ಒಂದರಿಂದ ಐದರ ವರೆಗೆ ಕೋವಿಡ್ ಕೇರ್ ಸೇಂಟರ್ಗಳನ್ನು ಮಾಡಲಾಗಿದೆ. ಇಂಥ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರು ಉಳಿದದ್ದು ಕಡಿಮೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಬಹಳಷ್ಟು ಸೋಂಕಿತರು ವಿಶ್ರಾಂತಿ ಪಡೆಯದೆ ಕರೋನಾ ವಿಸ್ತರಿಸುವ ಅಂಶ ಬೆಳಕಿಗೆ ಬಂದಿದ್ದು ಅಂಥ ಪ್ರಮಾಣ ಮತ್ತು ಸೂಕ್ತ ಚಿಕಿತ್ಸೆ ಗಾಗಿ ಟೆಲಿಮೆಡಿಸಿನ್ ವ್ಯವಸ್ಥೆ ಕಲ್ಫಿಸಿ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸೋಂಕಿತರಿಗೆ ಸೂಕ್ತ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *