ಕೋವಿಡ್ ಪೀಡಿತರ ಮನೆಯವರೂ ಹೊರ ಬರುವಂತಿಲ್ಲ- & ಸಿದ್ದಾಪುರದ ಎರಡು ಸಾವುಗಳು

ಕೋವಿಡ್ ಪೀಡಿತರ ಮನೆಯವರೂ ಹೊರ ಬರುವಂತಿಲ್ಲ-

ಸಿದ್ದಾಪುರ
ಕರೊನಾ ಲಾಕ್ ಡೌನ್ ನಿಯಮಾವಳಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಗ್ರಾಮದಲ್ಲಿ ಯಾವುದೇ ಅಂಗಡಿಯನ್ನು ಬಾಗಿಲು ತೆಗೆಯುವ ಹಾಗಿಲ್ಲ. ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸುವುದಕ್ಕೆ ಈಗಾಗಲೇ ಗ್ರಾಪಂನಿಂದ ಅನುಮತಿ ನೀಡಲಾಗಿದೆ. ಅನಾವಶ್ಯಕವಾಗಿ ಯಾರೂ ಓಡಾಡದೇ ಕರೊನಾ ನಿಯಂತ್ರಿಸುವುದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಗ್ರಾಪಂ ನೋಡಲ್ ಅಧಿಕಾರಿ ತಾಲೂಕು ಪಶುಸಂಗೋಪನಾ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಡಾ.ಶ್ರೇಯಸ್ ರಾಜ್ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾ ಗ್ರಾಪಂನಲ್ಲಿ ನಡೆದ ಕೋವಿಡ್-19ರ ಮುಂಜಾಗೃತಾ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಪಂ ಪಿಡಿಓ ರಾಜೇಶ ನಾಯ್ಕ ಮಾತನಾಡಿ ಗ್ರಾಪಂ ವ್ಯಾಪ್ತಿಯ ಎಲ್ಲ ಆಶಾ ಕಾರ್ಯಕರ್ತರು ಊರಿಗೆ ಹೊರಗಿನಿಂದ ಬಂದವರನ್ನು ಗುರುತಿಸಿ ಅವರ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕು. ಯಾವುದೇ ಮನೆಯಲ್ಲಿ ಕರೊನಾ ಪಾಸಿಟಿವ್ ಇದ್ದಲ್ಲಿ ಅವರ ಮನೆಯವರು ಯಾರೂ ಹೊರಗೆ ಓಡಾಡದಂತೆ ನೋ ಡಿಕೊಳ್ಳಬೇಕು. ಅವರಿಗೆ ಅವಶ್ಯ ಇರುವ ಔಷಧಿಗಳನ್ನು ಪೂರೈಸಬೇಕು. ಅವಶ್ಯಕ ವಸ್ತು ಹಾಗೂ ತರಕಾರಿಗಳನ್ನು ಮನೆ ಮನೆಗೆ ನೀಡುವುದಕ್ಕೆ ಈಗಾಗಲೇ ಅವಕಾಶ ನೀಡಲಾಗಿದೆ. ಗ್ರಾಪಂನಿಂದ ಅವಶ್ಯಕ ವಸ್ತು ಹಾಗೂ ತರಕಾರಿಗಳನ್ನು ಮಾರಾಟ ಮಾಡುವುದಕ್ಕೆ ಅನುಮತಿ ಪಡೆದ ವಾಹನ ಮಾಲೀಕರು ಬೇರೆ ಉದ್ದೇಶಕ್ಕೆ ಬಳಸುತ್ತಿದ್ದಾರೆ ಎಂದು ಮಾಹಿತಿ ಬಂದಿದ್ದು ಅವರನ್ನು ವಿಚಾರಿಸಿ ಕ್ರಮ ಕೈಗೊಳ್ಳಲಾಗವುದು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ವಿದ್ಯಾ ಪ್ರಕಾಶ ನಾಯ್ಕ ಅಧ್ಯಕ್ಷತೆವಹಿಸಿದ್ದರು. ಗ್ರಾಪಂ ಸದಸ್ಯರಾದ ಆರ್.ಕೆ.ನಾಯ್ಕ, ಸೀತಾರಾಮ ಶೇಟ್, ಗ್ರಾಮಲೆಕ್ಕಾಧಿಕಾರಿ ಹೇಮಾವತಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಹೆಲ್ಪ ಡೆಸ್ಕ ಪ್ರತಿನಿಧಿಗಳು ಇದ್ದರು. ಕಾರ್ಯದರ್ಶಿ ಎಸ್.ಎಸ್.ಸಾಗರೇಕರ್ ಕಾರ್ಯಕ್ರಮ ನಿರ್ವಹಿಸಿದರು.

ನಿಧನ-ನಾರಾಯಣ ತಿಮ್ಮಪ್ಪ ನಾಯ್ಕ.
ಸಿದ್ದಾಪುರ: ತಾಲೂಕಿನ ನಿಡಗೋಡ ನಿವಾಸಿ ನಿವೃತ್ತ ಶಿಕ್ಷಕ ನಾರಾಯಣ ತಿಮ್ಮಪ್ಪ ನಾಯ್ಕ (72) ನಿಧನಹೊಂದಿದರು.
ಅವರಿಗೆ ಪತ್ನಿ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವಿದೆ.
ಎನ್.ಟಿ.ನಾಯ್ಕ ಗುರೂಜಿ ಎಂದೇ ಗುರುತಿಸಿಕೊಂಡಿದ್ದ ಅವರು ಹೆಗ್ಗೋಡಮನೆ ಹಾಗೂ ವಾಜಗದ್ದೆ ಸಹಿಪ್ರಾ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಜನಮನ್ನಣೆಗಳಿಸಿದ್ದರು.

ಸಿದ್ಧಾಪುರದಲ್ಲಿ ಇಂದು ಕೋವಿಡ್ ದೃಢಪಟ್ಟವರ ಸಂಖ್ಯೆ 136

ಗುಣಮುಖರಾದವರು-98 ವಿವರ ಕೆಳಗಿನಂತಿದೆ.

ಸಿದ್ಧಾಪುರ ಎ.ಪಿ.ಎಂ.ಸಿ. ರಸ್ತೆಯಲ್ಲಿ ವಾಸಿಸುತಿದ್ದ ಭದ್ರಾಚಾರಿ ಯಾನೆ ಸನ್ಯಾಸಿ ಭದ್ರಯ್ಯ ಇಂದು ನಿಧನರಾದರು. ಸೇವಾ ಭಾರತ ಸಂಘಟನೆ ಅವರ ಶವ ಸಂಸ್ಕಾರವನ್ನು ವಿಧಿವತ್ತಾಗಿ ಪೂರೈಸಿದೆ.

ನಗರದ ಪಿಗ್ಮಿ ಸಂಗ್ರಹಕಾರ, ಎಲ್.ಐ.ಸಿ. ಪ್ರತಿನಿಧಿ ಶಿವಾನಂದ ಅನಂತ ಕಾಮತ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಇವರಿಗೆ ಯಕೃತ್ ಕಾಯಿಲೆ ಹಿನ್ನೆಲೆಯಲ್ಲಿ ಕೆಲವು ಕಾಲ ಚಿಕಿತ್ಸೆ ನೀಡಲಾಗಿತ್ತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *