ಅಮ್ಮನ ನೆನಪನ್ನಾದರೂ ಕೊಡಿ’: ಮಡಿಕೇರಿಯ 9 ವರ್ಷದ ಬಾಲಕಿಯ ಕರುಣಾಜನಕ ಮನವಿ

ಹೊಸ ಆದೇಶದಂತೆ ಶಿರಸಿ ಉಪವಿಭಾಗದ ಸಿದ್ದಾಪುರ, ಯಲ್ಲಾಪುರ, ಶಿರಸಿ, ಮುಂಡಗೋಡು ಸೇರಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೂನ್ 7 ರ ವರೆಗೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಮುಂಜಾನೆ 6 ರಿಂದ ಹತ್ತರ ವರೆಗೆ ಖರೀದಿಗೆ ಅವಕಾಶ ಉಳಿದ ದಿಗಳಲ್ಲಿ ಸಂಪೂರ್ಣ ಲಾಕ್ ಡೌನ್

ಸಿದ್ಧಾಪುರ- ನಾಟಿವೈದ್ಯ ಗೋವಿಂದ್ ನಾಯ್ಕ ಕರೋನಾಗೆ ಬಲಿ, ಸಂಪೂರ್ಣ ಲಾಕ್ ಡೌನ್ ನಡುವೆ ಕೋಳಿಮಾಂಸ ಮಾರುತಿದ್ದ ನಗರದ ಎರಡು ಜನ ವ್ಯಾಪಾರಿಗಳ ಮೇಲೆ ಸಿದ್ಧಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. for details- visit- samajamukhi.net, samaajamukhi & samajamukhiNews you tube channel

ಅಮ್ಮನನ್ನು ಕಳೆದುಕೊಂಡೆ, ಅಮ್ಮನ ನೆನಪನ್ನಾದರೂ ಕೊಡಿ’: ಮಡಿಕೇರಿಯ 9 ವರ್ಷದ ಬಾಲಕಿಯ ಕರುಣಾಜನಕ ಮನವಿ   

ಕೊರೋನಾ ಎರಡನೇ ಅಲೆಯಲ್ಲಿ ಸಿಲುಕಿ ಬಳಲುತ್ತಿರುವವರ ಗೋಳಾಟ ಒಂದೆಡೆಯಾದರೆ ತಮ್ಮವರನ್ನು, ತಮ್ಮ ಪೋಷಕರನ್ನು ಕಳೆದುಕೊಂಡವರ, ಅನಾಥರಾದ ಮಕ್ಕಳ ಗೋಳಿನ ಕಥೆ ಇನ್ನೊಂದೆಡೆ. ತಂದೆ-ತಾಯಿಗಳನ್ನು ಕಳೆದುಕೊಂಡ ಮಕ್ಕಳ ಆಕ್ರಂದನವೂ ಮುಗಿಲುಮುಟ್ಟುತ್ತಿದೆ.

Girl Hritiksha

ಮಡಿಕೇರಿ: ಕೊರೋನಾ ಎರಡನೇ ಅಲೆಯಲ್ಲಿ ಸಿಲುಕಿ ಬಳಲುತ್ತಿರುವವರ ಗೋಳಾಟ ಒಂದೆಡೆಯಾದರೆ ತಮ್ಮವರನ್ನು, ತಮ್ಮ ಪೋಷಕರನ್ನು ಕಳೆದುಕೊಂಡವರ, ಅನಾಥರಾದ ಮಕ್ಕಳ ಗೋಳಿನ ಕಥೆ ಇನ್ನೊಂದೆಡೆ. ತಂದೆ-ತಾಯಿಗಳನ್ನು ಕಳೆದುಕೊಂಡ ಮಕ್ಕಳ ಆಕ್ರಂದನವೂ ಮುಗಿಲುಮುಟ್ಟುತ್ತಿದೆ.

ಏನಿದು ಘಟನೆ: ಕೊಡಗು ಜಿಲ್ಲೆಯ ಮಡಿಕೇರಿಯ ಕುಶಾಲಪ್ಪನಗರ ಲೇಔಟ್ ನ ಕೋವಿಡ್ ಆಸ್ಪತ್ರೆಯಲ್ಲಿ ಮೊನ್ನೆ ಮೇ 16ರಂದು 9 ವರ್ಷದ ಬಾಲಕಿ ಹೃತಿಕ್ಷಾ ತಾಯಿ ಕೋವಿಡ್ ನಿಂದ ಮೃತಪಟ್ಟಿದ್ದರು.ಅದಕ್ಕೆ 10 ದಿನ ಮೊದಲು ಮೇ 6ರಂದು ಹೃತಿಕ್ಷಾ ತಾಯಿ ಕೋವಿಡ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಹೃತಿಕ್ಷಾ 4ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಆಕೆಯ ತಂದೆ 41 ವರ್ಷದ ನವೀನ್ ಕುಮಾರ್ ಪೇಂಟಿಂಗ್ ಕೆಲಸ ಮಾಡುತ್ತಿದ್ದು ಮೂವರಿಗೂ ಸೋಂಕು ತಗುಲಿತ್ತು. ತಾಯಿ ರೋಗ ಉಲ್ಬಣಗೊಂಡು ಆಸ್ಪತ್ರೆ ಸೇರಿದ್ದರೆ ತಂದೆ-ಮಗಳು ಹೋಂ ಕ್ವಾರಂಟೈನ್ ನಲ್ಲಿದ್ದರು. 

ಹೃತಿಕ್ಷಾಳ ತಾಯಿ ಆಸ್ಪತ್ರೆಗೆ ದಾಖಲಾದಾಗ ಮೊಬೈಲ್ ಫೋನ್ ಇಟ್ಟುಕೊಂಡಿದ್ದರು. ಅದರಲ್ಲಿ ಅವರ ಫೋಟೋಗಳು, ಕುಟುಂಬಕ್ಕೆ ಸಂಬಂಧಿಸಿದ ಫೋಟೋಗಳು, ಸಂಪರ್ಕ ಸಂಖ್ಯೆಗಳು, ಅನೇಕ ಮಾಹಿತಿಗಳಿದ್ದವು. ಹೃತಿಕ್ಷಾ ಆನ್ ಲೈನ್ ಕ್ಲಾಸ್ ಗೆ ಅವಲಂಬಿತವಾಗಿದ್ದುದು ತಾಯಿಯ ಮೊಬೈಲ್ ನಲ್ಲಿಯೇ, ಇದೀಗ ಆಕೆಯ ತಾಯಿಯ ಜೊತೆ ಮೊಬೈಲ್ ಕೂಡ ಕಾಣೆಯಾಗಿದ್ದು ಬಾಲಕಿ ಹೃತಿಕ್ಷಾಳನ್ನು ಇನ್ನಷ್ಟು ದುಃಖಕ್ಕೀಡುಮಾಡಿದೆ.

ಕಾಣೆಯಾಗಿರುವ ಮೊಬೈಲ್ ನಲ್ಲಿ ತಾಯಿಗೆ ಸಂಬಂಧಪಟ್ಟ ಸಾಕಷ್ಟು ನೆನಪುಗಳಿವೆ, ಫೋಟೋಗಳಿವೆ, ಹೀಗಾಗಿ ಮೊಬೈಲ್ ಹುಡುಕಿಕೊಡಿ ಎಂದು ಬಾಲಕಿ ಹೃತಿಕ್ಷಾ ಮತ್ತು ಆಕೆಯ ತಂದೆ ನವೀನ್ ಕುಮಾರ್ ಕೊಡಗು ಜಿಲ್ಲಾಧಿಕಾರಿಗಳಿಗೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಪತ್ನಿ ಸತ್ತ ನಂತರ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದ ಬೇರೆಲ್ಲಾ ವಸ್ತುಗಳು ಸಿಕ್ಕಿವೆ, ಆದರೆ ಮೊಬೈಲ್ ಕಾಣೆಯಾಗಿದೆ, ನಾವು ಆಸ್ಪತ್ರೆಯಲ್ಲಿ ಕೇಳಿದಾಗ ಸಕಾರಾತ್ಮಕ ಉತ್ತರ ಬರಲಿಲ್ಲ, ನಮ್ಮ ಆಸ್ಪತ್ರೆಯಲ್ಲಿ ಮೊಬೈಲ್ ಕಳವಾಗಲು ಸಾಧ್ಯವಿಲ್ಲ ಎಂದು ಅಲ್ಲಿನ ಸಿಬ್ಬಂದಿ ಹೇಳಿದರು.ನಮಗೆ ತೀವ್ರ ದುಃಖವಾಗಿ ಈ ಮನವಿ ಸಲ್ಲಿಸುತ್ತಿದ್ದೇವೆ ಎಂದು ನವೀನ್ ಕುಮಾರ್ ಹೇಳುತ್ತಿದ್ದಾರೆ.

ಇದೀಗ ಆಸ್ಪತ್ರೆಯ ಸಿಬ್ಬಂದಿಗಳನ್ನೆಲ್ಲಾ ವಿಚಾರಿಸಿ, ಸಿಸಿಟಿವಿ ಕ್ಯಾಮರಾ ಪರಿಶೀಲಿಸಿ ಮೊಬೈಲ್ ಹುಡುಕಿಕೊಡುವ ಭರವಸೆಯನ್ನು ಸಂಬಂಧಪಟ್ಟ ಅಧಿಕಾರಿಗಳು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿನಿಂದ ದಾಖಲಾಗಿ ಮೃತಪಟ್ಟವರಲ್ಲಿ ಅನೇಕರ ವಸ್ತುಗಳು, ಮೊಬೈಲ್ ಗಳು ಕಾಣೆಯಾಗಿವೆ ಎಂಬ ದೂರುಗಳು ಬಂದಿವೆ. ಹಲವು ಆಸ್ಪತ್ರೆಗಳಲ್ಲಿ ರೋಗಿಗಳ ಆಭರಣಗಳು, ಹಣ, ಬೇರೆ ವಸ್ತುಗಳು ಕಾಣೆಯಾಗಿರುವ ದೂರುಗಳು ಕೇಳಿಬರುತ್ತಿವೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *