ಅಮ್ಮನ ನೆನಪನ್ನಾದರೂ ಕೊಡಿ’: ಮಡಿಕೇರಿಯ 9 ವರ್ಷದ ಬಾಲಕಿಯ ಕರುಣಾಜನಕ ಮನವಿ

ಹೊಸ ಆದೇಶದಂತೆ ಶಿರಸಿ ಉಪವಿಭಾಗದ ಸಿದ್ದಾಪುರ, ಯಲ್ಲಾಪುರ, ಶಿರಸಿ, ಮುಂಡಗೋಡು ಸೇರಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೂನ್ 7 ರ ವರೆಗೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಮುಂಜಾನೆ 6 ರಿಂದ ಹತ್ತರ ವರೆಗೆ ಖರೀದಿಗೆ ಅವಕಾಶ ಉಳಿದ ದಿಗಳಲ್ಲಿ ಸಂಪೂರ್ಣ ಲಾಕ್ ಡೌನ್

ಸಿದ್ಧಾಪುರ- ನಾಟಿವೈದ್ಯ ಗೋವಿಂದ್ ನಾಯ್ಕ ಕರೋನಾಗೆ ಬಲಿ, ಸಂಪೂರ್ಣ ಲಾಕ್ ಡೌನ್ ನಡುವೆ ಕೋಳಿಮಾಂಸ ಮಾರುತಿದ್ದ ನಗರದ ಎರಡು ಜನ ವ್ಯಾಪಾರಿಗಳ ಮೇಲೆ ಸಿದ್ಧಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. for details- visit- samajamukhi.net, samaajamukhi & samajamukhiNews you tube channel

ಅಮ್ಮನನ್ನು ಕಳೆದುಕೊಂಡೆ, ಅಮ್ಮನ ನೆನಪನ್ನಾದರೂ ಕೊಡಿ’: ಮಡಿಕೇರಿಯ 9 ವರ್ಷದ ಬಾಲಕಿಯ ಕರುಣಾಜನಕ ಮನವಿ   

ಕೊರೋನಾ ಎರಡನೇ ಅಲೆಯಲ್ಲಿ ಸಿಲುಕಿ ಬಳಲುತ್ತಿರುವವರ ಗೋಳಾಟ ಒಂದೆಡೆಯಾದರೆ ತಮ್ಮವರನ್ನು, ತಮ್ಮ ಪೋಷಕರನ್ನು ಕಳೆದುಕೊಂಡವರ, ಅನಾಥರಾದ ಮಕ್ಕಳ ಗೋಳಿನ ಕಥೆ ಇನ್ನೊಂದೆಡೆ. ತಂದೆ-ತಾಯಿಗಳನ್ನು ಕಳೆದುಕೊಂಡ ಮಕ್ಕಳ ಆಕ್ರಂದನವೂ ಮುಗಿಲುಮುಟ್ಟುತ್ತಿದೆ.

Girl Hritiksha

ಮಡಿಕೇರಿ: ಕೊರೋನಾ ಎರಡನೇ ಅಲೆಯಲ್ಲಿ ಸಿಲುಕಿ ಬಳಲುತ್ತಿರುವವರ ಗೋಳಾಟ ಒಂದೆಡೆಯಾದರೆ ತಮ್ಮವರನ್ನು, ತಮ್ಮ ಪೋಷಕರನ್ನು ಕಳೆದುಕೊಂಡವರ, ಅನಾಥರಾದ ಮಕ್ಕಳ ಗೋಳಿನ ಕಥೆ ಇನ್ನೊಂದೆಡೆ. ತಂದೆ-ತಾಯಿಗಳನ್ನು ಕಳೆದುಕೊಂಡ ಮಕ್ಕಳ ಆಕ್ರಂದನವೂ ಮುಗಿಲುಮುಟ್ಟುತ್ತಿದೆ.

ಏನಿದು ಘಟನೆ: ಕೊಡಗು ಜಿಲ್ಲೆಯ ಮಡಿಕೇರಿಯ ಕುಶಾಲಪ್ಪನಗರ ಲೇಔಟ್ ನ ಕೋವಿಡ್ ಆಸ್ಪತ್ರೆಯಲ್ಲಿ ಮೊನ್ನೆ ಮೇ 16ರಂದು 9 ವರ್ಷದ ಬಾಲಕಿ ಹೃತಿಕ್ಷಾ ತಾಯಿ ಕೋವಿಡ್ ನಿಂದ ಮೃತಪಟ್ಟಿದ್ದರು.ಅದಕ್ಕೆ 10 ದಿನ ಮೊದಲು ಮೇ 6ರಂದು ಹೃತಿಕ್ಷಾ ತಾಯಿ ಕೋವಿಡ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಹೃತಿಕ್ಷಾ 4ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಆಕೆಯ ತಂದೆ 41 ವರ್ಷದ ನವೀನ್ ಕುಮಾರ್ ಪೇಂಟಿಂಗ್ ಕೆಲಸ ಮಾಡುತ್ತಿದ್ದು ಮೂವರಿಗೂ ಸೋಂಕು ತಗುಲಿತ್ತು. ತಾಯಿ ರೋಗ ಉಲ್ಬಣಗೊಂಡು ಆಸ್ಪತ್ರೆ ಸೇರಿದ್ದರೆ ತಂದೆ-ಮಗಳು ಹೋಂ ಕ್ವಾರಂಟೈನ್ ನಲ್ಲಿದ್ದರು. 

ಹೃತಿಕ್ಷಾಳ ತಾಯಿ ಆಸ್ಪತ್ರೆಗೆ ದಾಖಲಾದಾಗ ಮೊಬೈಲ್ ಫೋನ್ ಇಟ್ಟುಕೊಂಡಿದ್ದರು. ಅದರಲ್ಲಿ ಅವರ ಫೋಟೋಗಳು, ಕುಟುಂಬಕ್ಕೆ ಸಂಬಂಧಿಸಿದ ಫೋಟೋಗಳು, ಸಂಪರ್ಕ ಸಂಖ್ಯೆಗಳು, ಅನೇಕ ಮಾಹಿತಿಗಳಿದ್ದವು. ಹೃತಿಕ್ಷಾ ಆನ್ ಲೈನ್ ಕ್ಲಾಸ್ ಗೆ ಅವಲಂಬಿತವಾಗಿದ್ದುದು ತಾಯಿಯ ಮೊಬೈಲ್ ನಲ್ಲಿಯೇ, ಇದೀಗ ಆಕೆಯ ತಾಯಿಯ ಜೊತೆ ಮೊಬೈಲ್ ಕೂಡ ಕಾಣೆಯಾಗಿದ್ದು ಬಾಲಕಿ ಹೃತಿಕ್ಷಾಳನ್ನು ಇನ್ನಷ್ಟು ದುಃಖಕ್ಕೀಡುಮಾಡಿದೆ.

ಕಾಣೆಯಾಗಿರುವ ಮೊಬೈಲ್ ನಲ್ಲಿ ತಾಯಿಗೆ ಸಂಬಂಧಪಟ್ಟ ಸಾಕಷ್ಟು ನೆನಪುಗಳಿವೆ, ಫೋಟೋಗಳಿವೆ, ಹೀಗಾಗಿ ಮೊಬೈಲ್ ಹುಡುಕಿಕೊಡಿ ಎಂದು ಬಾಲಕಿ ಹೃತಿಕ್ಷಾ ಮತ್ತು ಆಕೆಯ ತಂದೆ ನವೀನ್ ಕುಮಾರ್ ಕೊಡಗು ಜಿಲ್ಲಾಧಿಕಾರಿಗಳಿಗೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಪತ್ನಿ ಸತ್ತ ನಂತರ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದ ಬೇರೆಲ್ಲಾ ವಸ್ತುಗಳು ಸಿಕ್ಕಿವೆ, ಆದರೆ ಮೊಬೈಲ್ ಕಾಣೆಯಾಗಿದೆ, ನಾವು ಆಸ್ಪತ್ರೆಯಲ್ಲಿ ಕೇಳಿದಾಗ ಸಕಾರಾತ್ಮಕ ಉತ್ತರ ಬರಲಿಲ್ಲ, ನಮ್ಮ ಆಸ್ಪತ್ರೆಯಲ್ಲಿ ಮೊಬೈಲ್ ಕಳವಾಗಲು ಸಾಧ್ಯವಿಲ್ಲ ಎಂದು ಅಲ್ಲಿನ ಸಿಬ್ಬಂದಿ ಹೇಳಿದರು.ನಮಗೆ ತೀವ್ರ ದುಃಖವಾಗಿ ಈ ಮನವಿ ಸಲ್ಲಿಸುತ್ತಿದ್ದೇವೆ ಎಂದು ನವೀನ್ ಕುಮಾರ್ ಹೇಳುತ್ತಿದ್ದಾರೆ.

ಇದೀಗ ಆಸ್ಪತ್ರೆಯ ಸಿಬ್ಬಂದಿಗಳನ್ನೆಲ್ಲಾ ವಿಚಾರಿಸಿ, ಸಿಸಿಟಿವಿ ಕ್ಯಾಮರಾ ಪರಿಶೀಲಿಸಿ ಮೊಬೈಲ್ ಹುಡುಕಿಕೊಡುವ ಭರವಸೆಯನ್ನು ಸಂಬಂಧಪಟ್ಟ ಅಧಿಕಾರಿಗಳು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿನಿಂದ ದಾಖಲಾಗಿ ಮೃತಪಟ್ಟವರಲ್ಲಿ ಅನೇಕರ ವಸ್ತುಗಳು, ಮೊಬೈಲ್ ಗಳು ಕಾಣೆಯಾಗಿವೆ ಎಂಬ ದೂರುಗಳು ಬಂದಿವೆ. ಹಲವು ಆಸ್ಪತ್ರೆಗಳಲ್ಲಿ ರೋಗಿಗಳ ಆಭರಣಗಳು, ಹಣ, ಬೇರೆ ವಸ್ತುಗಳು ಕಾಣೆಯಾಗಿರುವ ದೂರುಗಳು ಕೇಳಿಬರುತ್ತಿವೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *