ರಾಘವೇಂದ್ರ ಹೊಸೂರ್ ನಿಧನ, ಬಂಗಾರ್ಯ ಮೋಶ್ಯಾ ನಾಯ್ಕ ಹಳಿಯಾಳ ಇನ್ನಿಲ್ಲ

ಸಿದ್ದಾಪುರದ ಅರಣ್ಯ ಇಲಾಖೆಯ ಸಿಬ್ಬಂದಿ ರಾಘವೇಂದ್ರ ಹೊಸೂರು ಕರೋನಾಕ್ಕೆ ಬಲಿಯಾದ ಮಾಹಿತಿ ಬಂದಿದೆ. ರಾಘವೇಂದ್ರ ಹೊಸೂರು ಮೂಲತ: ಸಿದ್ಧಾಪುರ ಹೊಸೂರಿನ ಮಡಿವಾಳ ಕೇರಿಯವರು ಶಿರಸಿಯಲ್ಲಿ ವಾಸವಾಗಿದ್ದ ಇವರು ಶಿರಸಿಗೆ ವರ್ಗಾವಣೆಯಾಗಿದ್ದರು. ಮೃತರು ತಾಯಿ ,ಪತ್ನಿ ಮಕ್ಕಳು ಸೇರಿದಂತೆ ಅಪಾರ ಸ್ನೇಹಿತರು, ಬಂಧು ಬಳಗವನ್ನು ಅಗಲಿದ್ದಾರೆ.

ಬಂಗಾರ್ಯ ಮೋಶ್ಯಾ ನಾಯ್ಕ. ಇನ್ನಿಲ್ಲ
ಸಿದ್ದಾಪುರ: ತಾಲೂಕಿನ ಹಿರಿಯ ಯಕ್ಷಗಾನ ಕಲಾವಿದರು ಹಾಗೂ ಮುಠ್ಠಳಿ ಹಳಿಯಾಳದ ಮಹಿಷಾಸುರ ಮರ್ಧಿನಿ ದೇವಸ್ಥಾನದ ಸಂಸ್ಥಾಪಕರು ಹಾಗೂ ಪ್ರಧಾನ ಅರ್ಚಕರಾಗಿದ್ದ ಬಂಗಾರ್ಯ ಮೋಶ್ಯಾ ನಾಯ್ಕ (89) ಹಳಿಯಾಳ ಮಂಗಳವಾರ ನಿಧನಹೊಂದಿದರು.
ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವಿದೆ.
ಹುಕ್ಲಮಕ್ಕಿ ಯಕ್ಷಗಾನಮೇಳದ ಮ್ಯಾನೇಜರ್ ಆಗಿ, ಹಳಿಯಾಳ ಮಹಿಷಾಸುರ ಮರ್ಧಿನಿ ಯಕ್ಷಗಾನ ಮಂಡಳಿಯ ಸಂಸ್ಥಾಪಕರಾಗಿದ್ದಲ್ಲದೆ ಯಕ್ಷಗಾನ ಕಲಾವಿದರಾಗಿಯೂ ತಮ್ಮನ್ನು ಗುರತಿಸಿಕೊಂಡಿದ್ದರು. ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಹಾರ್ಸಿಕಟ್ಟಾ ಗ್ರಾಪಂ ಘಟಕದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಹಾಗೂ ತಾಲೂಕು ಮಟ್ಟದ ಮುಖಂಡರಾಗಿದ್ದರು.
ಸಂತಾಪ: ಬಂಗಾರ್ಯ ನಾಯ್ಕ ಹಳಿಯಾಳ ಅವರ ನಿಧನಕ್ಕೆ ದಿವಾನ್ ಯಕ್ಷಸಮೂಹ ಹಾರ್ಸಿಕಟ್ಟಾದ ಅಧ್ಯಕ್ಷ ಪಿ.ವಿ.ಹೆಗಡೆ ಹೊಸಗದ್ದೆ, ಕಾರ್ಯದರ್ಶಿ ರಮೇಶ ಹೆಗಡೆ ಹಾರ್ಸಿಮನೆ, ಆರ್.ವಿ.ಹೆಗಡೆ ಹೊನ್ನೆಹದ್ದ, ಅನಂತ ಶಾನಭಾಗ, ಶ್ರೀಕಾಂತ ಶಾನಭಾಗ, ಗೋಪಾಲ ಹೆಗಡೆ ಹುಲಿಮನೆ, ಗೋಪಾಲ ಹೆಗಡೆ ವಾಜಗದ್ದೆ,ಯಕ್ಷಚಂದನ ದಂಟಕಲ್ಲಿನ ಅಧ್ಯಕ್ಷ ಹಾಗೂ ಯಕ್ಷಗಾನ ಭಾಗವತರಾದ ಸತೀಶ ಹೆಗಡೆ ದಂಟಕಲ್, ಎಂ.ಆರ್.ಹೆಗಡೆ ದಂಟಕಲ್, ಸುಜಾತಾ ಹೆಗಡೆ ದಂಟಕಲ್ಲ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *