covid19- ಯಲ್ಲಾಪುರದ ಮಾವಿನ್ಮನೆ ಗ್ರಾ.ಪಂ. ರಾಜ್ಯಕ್ಕೇ ಮಾದರಿ

ಕರ್ನಾಟಕದ ಈ ಪುಟ್ಟ ಗ್ರಾಮದಲ್ಲಿ ಈಗ ಕೋವಿಡ್ ಸಕ್ರಿಯ ಪ್ರಕರಣಗಳು ‘ಶೂನ್ಯ’: ಇದು ಹೇಗೆ ಸಾಧ್ಯವಾಯ್ತು ನೀವೇ ನೋಡಿ!

ಉತ್ತರ ಕನ್ನಡದ ಯಲ್ಲಾಪುರ ತಾಲ್ಲೂಕಿನ ಮಾವಿನ್ಮನೆ ಎಂಬ ಗ್ರಾಮ ಪಂಚಾಯಿತಿಯು ಸಾಮಾಜಿಕ ಅಂತರ ಮತ್ತು ಲಾಕ್‌ಡೌನ್ ಮಾನದಂಡಗಳನ್ನು ಕಠಿಣವಾಗಿ ಅನುಸರಿಸುವ ಮೂಲಕ ನಡೆಯುತ್ತಿರುವ ಕೋವಿಡ್ ಬಿಕ್ಕಟ್ಟನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ತೋರಿಸಿದೆ. 

task force of Mavina Mane Gram Panchayat

ಕಾರವಾರ: ಕೊರೋನಾ ಎರಡನೇ ಅಲೆ ಗ್ರಾಮಗಳಿಗೂ ದಾಂಗುಡಿ ಇಡುತ್ತಿದ್ದು ಭೀಕರತೆ ಸೃಷ್ಟಿಸುತ್ತಿದೆ. ಅಂತಹದರಲ್ಲಿ ಉತ್ತರ ಕನ್ನಡದ ಯಲ್ಲಾಪುರ ತಾಲ್ಲೂಕಿನ ಮಾವಿನ್ಮನೆ ಎಂಬ ಗ್ರಾಮ ಪಂಚಾಯಿತಿಯು ಸಾಮಾಜಿಕ ಅಂತರ ಮತ್ತು ಲಾಕ್‌ಡೌನ್ ಮಾನದಂಡಗಳನ್ನು ಕಠಿಣವಾಗಿ ಅನುಸರಿಸುವ ಮೂಲಕ ನಡೆಯುತ್ತಿರುವ ಕೋವಿಡ್ ಬಿಕ್ಕಟ್ಟನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ತೋರಿಸಿದೆ. 

100ಕ್ಕೂ ಹೆಚ್ಚು ಪ್ರಕರಣಗಳನ್ನು ಹೊಂದಿದ್ದ ಪಂಚಾಯತ್ ಈಗ ಕೋವಿಡ್‌ನಿಂದ ಮುಕ್ತವಾಗಿದೆ. ಇದರಿಂದ ಪ್ರಭಾವಿತರಾದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬರ್ ವೈಯಕ್ತಿಕವಾಗಿ ಪಂಚಾಯತ್‌ಗೆ ಭೇಟಿ ನೀಡಿ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ. ಕೇವಲ ಏಳು ಹಳ್ಳಿಗಳನ್ನು ಹೊಂದಿರುವ ಸಣ್ಣ ಪಂಚಾಯತ್, ಮಾವಿನ್ಮನೆ ಯಾವುದೇ ಸಹಾಯಕ್ಕಾಗಿ ಕಾಯದೆ ತನ್ನದೇ ಆದ ದಾರಿಯನ್ನು ಕಂಡುಕೊಳ್ಳುವ ಮೂಲಕ ಇತರರಿಗೆ ಉದಾಹರಣೆಯಾಗಿದೆ. ಪಶ್ಚಿಮ ಘಟ್ಟದಲ್ಲಿರುವ ಹಳ್ಳಿಗಳು ಸಾಮಾಜಿಕ ಅಂತರವನ್ನು ಹೇಗೆ ಅನುಸರಿಸಬೇಕು ಮತ್ತು ಪರಸ್ಪರ ಸಹಾಯ ಮಾಡುವ ಮೂಲಕ ಸಾಂಕ್ರಾಮಿಕ ರೋಗವನ್ನು ನಿವಾರಿಸ ಬಹುದು ಎಂಬುದನ್ನು ಇದು ತೋರಿಸಿದೆ.

‘ಉತ್ತರ ಕನ್ನಡದಿಂದ ಬೆಂಗಳೂರಿಗೆ ಹೋದರೆ ನನ್ನನ್ನು ಯಾವುದೇ ಟೋಲ್ ಬೂತ್ ಅಥವಾ ಚೆಕ್‌ಪೋಸ್ಟ್ ನಲ್ಲಿ ತಡೆಯುವುದಿಲ್ಲ, ಆದರೆ ಈ ಗ್ರಾಮ ಪಂಚಾಯಿತಿಯಲ್ಲಿ, ಆರು ಬಾರಿ ನನ್ನನ್ನು ನಿಲ್ಲಿಸುವಂತೆ ಕೇಳಿದರು. ಈ ರೀತಿಯಾಗಿ ಅವರು ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಾರೆ ಎಂದು ಹೆಬ್ಬರ್ತಿಳಿಸಿದರು. ಎಲ್ಲಾ ಗ್ರಾಮಗಳು ಕೋವಿಡ್ 19 ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ತಮಗೆ ಸಹಾಯ ಮಾಡಿದರೆ. ಸರ್ಕಾರದ ಮೇಲೆ ಬಹಳ ಕಡಿಮೆ ಹೊರೆ ಬೀಳುತ್ತದೆ ಎಂದರು. 

ಪಂಚಾಯತ್‌ನಲ್ಲಿ 500 ಮನೆಗಳಿಲ್ಲದಿದ್ದರೂ ಇಲ್ಲಿ 108 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಮೊದಲ ಅಲೆಯ ಸಮಯದಲ್ಲಿ ಸಾಂಕ್ರಾಮಿಕ ರೋಗವನ್ನು ದೂರವಿಡುವಲ್ಲಿ ಯಶಸ್ವಿಯಾಗಿದ್ದ ಗ್ರಾಮಸ್ಥರಿಗೆ ಎರಡನೇ ಅಲೆ ಆಘಾತ ತಂದಿತ್ತು. ‘ಏಪ್ರಿಲ್ 19ರಂದು ಮಲವಳ್ಳಿ ಗ್ರಾಮದಲ್ಲಿ ನಡೆದ ಮದುವೆ ಕಾರ್ಯಕ್ರಮದ ನಂತರ 15 ಅತಿಥಿಗಳಿಗೆ ರೋಗಲಕ್ಷಣಗಳು ಕಾಣಿಸಿಕೊಂಡವು. ಶೀಘ್ರದಲ್ಲೇ ಈ ಸಂಖ್ಯೆ 108ಕ್ಕೆ ಏರಿತು ಎಂದು ಇಲ್ಲಿನ ಕಾರ್ಯಪಡೆಯ ಸದಸ್ಯ ಗೋಪಾಲ್ ಕೃಷ್ಣ ಮಾಹಿತಿ ನೀಡಿದರು.

ಕೂಡಲೇ ಸಮಯವನ್ನು ವ್ಯರ್ಥ ಮಾಡದೆ, ಪಂಚಾಯತ್ ವ್ಯವಸ್ಥೆ ಕಾರ್ಯರೂಪಕ್ಕೆ ಬಂದು ರೋಗ ಹರಡದಂತೆ ನೋಡಿಕೊಳ್ಳಲು ತನ್ನದೇ ಜನರೊಂದಿಗೆ ಕಾರ್ಯಪಡೆ ರಚಿಸಿತು. ‘ಕಾರ್ಯಪಡೆ ಹಲವಾರು ಚೆಕ್ ಪೋಸ್ಟ್‌ಗಳನ್ನು ರಚಿಸಿತು. ಇದರಿಂದ ಜನರು ತಮ್ಮ ವಾಹನಗಳನ್ನು ಹೊರತೆಗೆಯಲು ಸಾಧ್ಯವಾಗುವುದಿಲ್ಲ. ಅಲ್ಲದೆ ತುರ್ತು ಪರಿಸ್ಥಿತಿ ಹೊರತು ಹೊರಗಿನವರು ತಮ್ಮ ಗ್ರಾಮಕ್ಕೆ ಪ್ರವೇಶಿಸುವುದಿಲ್ಲ. ಮಾವಿನ್ಮ ನೆ ಸಹಕಾರ ಸಂಘ, ಸಹಕಾರಿ ಸಮಾಜ ಮತ್ತು ಕೆಲವು ದಾನಿಗಳು ಒಗ್ಗೂಡಿ ದಿನಸಿ ಸಾಮಗ್ರಿಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಹಳ್ಳಿಗಳ ಪ್ರತಿಯೊಂದು ಮನೆಗೂ ಸರಬರಾಜು ಮಾಡಿದರು. ಇದರಿಂದ ಯಾರೂ ಹೊರಹೋಗುವ ಅಗತ್ಯವಿಲ್ಲ. ರೋಗಿಗಳ ವೈದ್ಯಕೀಯ ನೆರವು, ಪರೀಕ್ಷೆ ಮತ್ತು ನಿಯಮಿತ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಪಿಡಿಒಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಇತರರನ್ನು ಸಂಪರ್ಕಿಸಲಾಯಿತು ಎಂದು ಪಂಚಾಯತ್ ಅಧ್ಯಕ್ಷರು ಮಾಹಿತಿ ನೀಡಿದರು.

ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮತ್ತು ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಪ್ರತಿದಿನವೂ ಮನೆಗಳಿಗೆ ಭೇಟಿ ನೀಡಿ ಆಮ್ಲಜನಕದ ಮಟ್ಟ, ದೇಹದ ತಾಪಮಾನ, ಯಾರಾದರೂ ಕೋವಿಡ್-ಸಂಬಂಧಿತ ರೋಗಲಕ್ಷಣಗಳನ್ನು ಹೊಂದಿದ್ದಾರಾ? ಎಂದು ಪರೀಕ್ಷಿಸುತ್ತಿದ್ದರು. ಈಗಾಗಲೇ ನೂರು ರೋಗಿಗಳು ಸಂಪೂರ್ಣ ಗುಣಮುಖರಾಗಿದ್ದಾರೆ. ಇನ್ನು ಕೊನೆಯ ಎಂಟು ಜನರು ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ ಎಂದು ಘೋಷಿಸಲಾಗಿದೆ. ಸದ್ಯಕ್ಕೆ ಪಂಚಾಯಿತಿಯನ್ನು ಕೋವಿಡ್ ಮುಕ್ತ ಎಂದು ಘೋಷಿಸಲಾಗಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *