ಬುಡಕಟ್ಟು ಸಮುದಾಯಕ್ಕೆ ಪಡಿತರ ವಿತರಿಸಿದ ನಟ ಚೇತನ್ ಕುಮಾರ್

ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಕುಮಾರ್ ಬುಡಕಟ್ಟು ಜನಾಂಗದ ನೆರವಿಗೆ ನಿಂತಿದ್ದಾರೆ. ಚೇತನ್ ಫೌಂಡೇಶನ್ ಮೂಲಕ ಅಗತ್ಯವಿರುವವರಿಗೆ ಫುಡ್ ಕಿಟ್ ವಿತರಿಸಲು ಮುಂದಾಗಿದ್ದಾರೆ.

actor Chetan Kumar reaches out to tribals with ration kits

ತುಮಕೂರು: ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಕುಮಾರ್ ಬುಡಕಟ್ಟು ಜನಾಂಗದ ನೆರವಿಗೆ ನಿಂತಿದ್ದಾರೆ.

ಚೇತನ್ ಫೌಂಡೇಶನ್ ಮೂಲಕ ಅಗತ್ಯವಿರುವವರಿಗೆ ಫುಡ್ ಕಿಟ್ ವಿತರಿಸಲು ಮುಂದಾಗಿದ್ದಾರೆ. ತುಮಕೂರಿನ ಶಿಳ್ಳೆಖ್ಯಾತ ಸಮುದಾಯ, ತಿಪಟೂರಿನ ಮಂಗಳಮುಖಿಯರು ಮತ್ತು ಬೆಂಗಳೂರಿನ ಸ್ಮಶಾನಗಳಲ್ಲಿ ಕೆಲಸ ಮಾಡುವವರಿಗೆ ತಮ್ಮ ಫೌಂಡೇಶನ್ ಮೂಲಕ ಪಡಿತರ ಕಿಟ್ ಕಳುಹಿಸುತ್ತಿದ್ದಾರೆ. 

ಲಾಕ್ ಡೌನ್ ನಿಂದಾಗಿ ದೈನಂದಿನ ಸಂಪಾದನೆಯಿಲ್ಲದೇ ಸಂಕಷ್ಟಕ್ಕೊಳಗಾಗಿರುವವರಿಗೆ ಚೇತನ್ ಸಹಾಯ ಹಸ್ತ ನೀಡಿದ್ದಾರೆ. ಚೇತನ್ ಅವರ ಈ ಕಾರ್ಯಕ್ಕೆ ಮಂಗಳಮುಖಿಯರು ಶ್ಲಾಘನೆ ಮಾಡಿದ್ದಾರೆ.

ಬೆಂಗಳೂರಿನ ಸುಮಾರು 300 ಸ್ಮಶಾನ ಕಾರ್ಮಿಕರ ಸೇವೆಗಳನ್ನು ಕ್ರಮಬದ್ಧಗೊಳಿಸುವಂತೆ ನಟ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರಿಗೆ ಪತ್ರ ಬರೆದಿದ್ದಾರೆ.  ಲಸಿಕೆಗಳು, ವಿಮೆ, ಹಾಸಿಗೆಗಳು ಮತ್ತು ಹಣಕಾಸಿನ ವಿಷಯದಲ್ಲಿ ಅವರಿಗೆ ತಕ್ಷಣದ ವೈದ್ಯಕೀಯ ನೆರವು ನೀಡಿ ಎಂದು ನಟ ಒತ್ತಾಯಿಸಿದ್ದಾರೆ.ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರ ಜೊತೆ ಸಂಪರ್ಕದಲ್ಲಿದ್ದು, ಈ ವಿಷಯ ಸಂಬಂಧ ಅವರ ಗಮನ ಸೆಳೆಯುವುದಾಗಿ ತಿಳಿಸಿದ್ದಾರೆ.

ಉಡುಪಿಯ ಕೊರಗ ಸಮುದಾಯವು ಈಗಲೂ ‘ಅಜ್ಜಲು ಪದತಿ’ಗೆ ಬಲಿಯಾಗಿದೆ ಎಂದು ನಟ ಚೇತನ್ ಆಘಾತ ವ್ಯಕ್ತ ಪಡಿಸಿದ್ದಾರೆ, ಈ ಪದ್ಧತಿಯಲ್ಲಿ  ಹಿಂದೂಗಳ ಉಗುರು ಮತ್ತು ಕೂದಲನ್ನು ತಿನ್ನಲು ಒತ್ತಾಯಿಸಲಾಗುತ್ತದೆ ಎಂದು ಹೇಳಿದ್ದಾರೆ. ಕೊರಗ ಸಮುದಾಯಕ್ಕೆ ಚೇತನ್ ಕುಮಾರ್ ಅಭಿಮಾನಿಗಳಾದ ಜಗದೀಶ್ ಗಂಗೊಳ್ಳಿ ಮತ್ತು ವಜ್ರರಂಗ್ ಫುಡ್ ಕಿಟ್
ತಲುಪಿಸಿದ್ದಾರೆ.

ಭವಿಷ್ಯದಲ್ಲಿ ಅಗತ್ಯವಿರುವವರಿಗೆ ವೈದ್ಯಕೀಯ ಸಹಾಯವನ್ನು ನೀಡಲು ನಾನು ಯೋಜಿಸುತ್ತಿದ್ದೇನೆ, ಏಕೆಂದರೆ ನನ್ನ ಕುಟುಂಬವು ಈಗಾಗಲೇ ಮೈಸೂರಿನ ಹೆಬ್ಬಾಳದಲ್ಲಿ ಕ್ಯಾನ್ಸರ್ ಆಸ್ಪತ್ರೆಯನ್ನು ನಡೆಸುತ್ತಿದೆ” ಎಂದು ಅವರು ಹೇಳಿದರು.

ಒಂದು ವೇಳೆ ನೀವು ಸಿಎಂ ಆದರೆ ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಚೇತನ್ ಕುಮಾರ್, ನಾನು ಸಿಎಂ ಆದರೆ ಸಂಪತ್ತನ್ನು ಹಂಚುವುದು ನನ್ನ ಮೊದಲ ಆದ್ಯತೆ, ಇದು ನನ್ನಿಂದಲೇ ಪ್ರಾರಂಭವಾಗುತ್ತದೆ ಎಂದು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *