ಕರೋನಾ ನಂತರವೂ ಮುಂದುವರಿಯುತ್ತಾ ಕಾಂಗ್ರೆಸ್ ಆರೋಗ್ಯ ಹಸ್ತ?

ರಾಜ್ಯದಲ್ಲಿ ಕರೋನಾ ಕಾವು ನಿಧಾನವಾಗಿ ಇಳಿಯುತ್ತಿದೆ. ಕರೋನಾ ಲಾಕ್ ಡೌನ್  ಮುಂದಿನ ವಾರದಿಂದಲೇ ಸಡಿಲವಾಗಲಿದೆ.  ಕರೋನಾ ನಂತರ ಈಗಿನ ವ್ಯವಸ್ಥೆಗಳು ಅಮೂಲಾಗ್ರವಾಗಿ ಬದಲಾಗಲಿವೆ.ರಾಜ್ಯದ ಬಹುತೇಕ ಕಡೆ ಆರೋಗ್ಯ ತುರ್ತು ಪರಿಸ್ಥಿ ತಿ ನಿಭಾಯಿಸಲು ಸರ್ಕಾರೇತರ ವ್ಯಕ್ತಿಗಳು,ಸಂಸ್ಥೆಗಳು ಪಕ್ಷಗಳು ವಿಭಿನ್ನ ವ್ಯವಸ್ಥೆಗಳನ್ನು ಮಾಡಿದ್ದರು.ಅಂಥ ವಿಶೇಶ ಆರೋಗ್ಯ ವ್ಯವಸ್ಥೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಾರಂಭಿಸಿದ್ದ ಆರೋಗ್ಯ ಹಸ್ತವೂ ಒಂದು.


ಈ ಆರೋಗ್ಯ ಹಸ್ತ ಯೋಜನೆಯಡಿ ಗ್ರಾಮೀಣ ಜನರ ಆರೋಗ್ಯ ತಪಾಸಣೆ ಕರೋನಾ ಸೇನಾನಿಗಳಿಗೆ ಸುರಕ್ಷತಾ ಸಲಕರಣೆ ವಿತರಣೆ ಸೇರಿದ್ದವು. ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳಲ್ಲಿ ಈ ಆರೋಗ್ಯ ಹಸ್ತ ಕಾರ್ಯಕ್ರಮ ನಡೆಯುತ್ತಿದೆ. ಪ್ರತಿಗ್ರಾಮ ಪಂಚಾಯತ್ ಕೇಂದ್ರಗಳಿಗೆ ತೆರಳಿ ಆರೋಗ್ಯ ತಪಾಸಣೆ, ಔಷಧೋಪಚಾರ ಮಾಡುವ ಈ ವ್ಯವಸ್ಥೆಯೊಂದಿಗೆ ಅನಿವಾರ್ಯತೆಯಲ್ಲಿ ಎಂಬುಲನ್ಸ್ ಕೂಡಾ ನೀಡಲಾಗುತಿತ್ತು.


ಕರೋನಾ ಅನಿವಾರ್ಯತೆಯಲ್ಲಿ ಜನಸಾಮಾನ್ಯರಿಗೆ ನೆರವಾದ ಕಾಂಗ್ರೆಸ್ ಸಹಾಯಹಸ್ತ ಕರೋನಾ ಮುಗಿದ ನಂತರ ಸ್ಥಗಿತಗೊಳ್ಳಲಿದೆಯಾ ಎನ್ನುವ ಪ್ರಶ್ನೆ ಜನಸಾಮಾನ್ಯರಲ್ಲಿ ಮೊಳಕೆಯೊಡೆದಿತ್ತು. ಈ ಪ್ರಶ್ನೆ ಅನುಮಾನಗಳಿಗೆ ಉತ್ತರ ನೀಡಿರುವ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನಾಯಕರು ಕರೋನಾ ಅವಧಿಯಲ್ಲಿ ಪ್ರಾರಂಭವಾಗಿರುವ ಕಾಂಗ್ರೆಸ್ ನ ಆರೋಗ್ಯ ಹಸ್ತ ಕಾರ್ಯಕ್ರಮ ಮುಂದುವರಿಯಲಿದೆ ಎಂದು ಸ್ಪಸ್ಟಪಡಿಸಿದ್ದಾರೆ.

ಶಿರಸಿ ಸಿದ್ಧಾಪುರ ತಾಲೂಕುಗಳ 45 ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮ ನಡೆಸಿದ ಕಾಂಗ್ರೆಸ್ ಜಿಲ್ಲೆಯಾದ್ಯಂತ ಈ ಕಾರ್ಯಕ್ರಮದ ಮೂಲಕ ಜನಸಾಮಾನ್ಯರಿಗೆ ನೆರವಾಗಿದೆ.

ಸಿದ್ಧಾಪುರದ ಹಲಗೇರಿ ಗ್ರಾಮ ಪಂಚಾಯತ್ ಸುಂಕತ್ತಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಕೆಲವು ಮಾರ್ಪಾಡುಗಳೊಂದಿಗೆ ಕಾಂಗ್ರೆಸ್ ಆರೋಗ್ಯ ಹಸ್ತ ಮುಂದುವರಿಯಲಿದೆ, ರಾಜ್ಯ ಕೇಂದ್ರ ಸರ್ಕಾರಗಳು ವ್ಯವಸ್ಥಿತವಾಗಿ ತಮ್ಮ ಜವಾಬ್ಧಾರಿ ನಿರ್ವಹಿಸಿದ್ದರೆ ಈ ತೊಂದರೆ ಆಗುತ್ತಿರಲಿಲ್ಲ. ಕರೋನಾ ಕಾಲದಲ್ಲಿ ಜನರಿಗಾದ ತೊಂದರೆಗೆ ಸ್ಫಂದಿಸುವ ಉದ್ದೇಶದಿಂದ ಪ್ರಾರಂಭವಾದ ಈ ಆರೋಗ್ಯ ಹಸ್ತ ಕಾರ್ಯಕ್ರಮ ನಿರೀಕ್ಷೆಮೀರಿ ಯಶಸ್ವಿಯಾಗಿದ್ದು ಜನರ ಅಗತ್ಯ ಅನಿವಾರ್ಯತೆ ಆಧರಿಸಿ ಮುಂದೆಕೂಡಾ ಮುಂದುವರಿಯಲಿದೆ ಎಂದರು. ಈ ಸಮಯದಲ್ಲಿ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಡಿ.ಸಿ.ಸಿ. ಪ್ರಮುಖ ಎಸ್.ಕೆ. ಭಾಗವತ್ ಶಿರಸಿಮಕ್ಕಿ, ಪ್ರಸನ್ನ ಶೆಟ್ಟಿ,ಸಿ.ಆರ್. ನಾಯ್ಕ, ವಿ.ಎನ್. ನಾಯ್ಕ ಜಾಬಿ, ಮಾರುತಿ ನಾಯ್ಕ, ಎಚ್. ಆರ್. ನಾಯ್ಕ, ರವಿಕುಮಾರ ಎಸ್.ಆರ್. ಸೇರಿದಂತೆ ಅನೇಕರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *