ತೈಲ ಬೆಲೆ ಬಳಿಕ ವಿದ್ಯುತ್ ದರ ಏರಿಸಿ ಜನತೆಗೆ ಮತ್ತೊಂದು ಶಾಕ್ ನೀಡಿದ ಸರ್ಕಾರ!

ಪೆಟ್ರೋಲ್ ಹಾಗೂ ಡೀಸೆಲ್ ಬಳಿಕ ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಜನತೆಗೆ ದೊಡ್ಡ ಶಾಕ್ ನೀಡಿದೆ. 

File photo

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬಳಿಕ ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಜನತೆಗೆ ದೊಡ್ಡ ಶಾಕ್ ನೀಡಿದೆ. 

ರಾಜ್ಯದ ವಿವಿಧ ವಿದ್ಯುತ್ ವಿತರಣಾ ಕಂಪನಿಗಳು 135 ಪೈಸೆ (ರೂ.1.35) ಬೆಲೆ ಏರಿಕೆ ಕೋರಿ ಈ ಹಿಂದೆಯೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದವು. ಈ ಪ್ರಸ್ತಾವಗಳನ್ನು ಕೂಲಂಕಶವಾಗಿ ಪರಿಶೀಲಿಸಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಸರಾಸರಿ 30 ಪೈಸೆ ದರ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

https://imasdk.googleapis.com/js/core/bridge3.464.0_en.html#goog_20238697

ಇದರಂತೆ ಪ್ರತಿ ಯೂನಿಟ್’ಗೆ ಸರಾಸರಿ 30 ಪೈಸೆಯಂತೆ ವಿದ್ಯುತ್ ದರವನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೆಚ್ಚಳ ಮಾಡಿದೆ. ಇದರ ಪರಿಣಾಮ ಗೃಹ ಬಳಕೆ ಗ್ರಾಹಕರಿಗೆ ಪ್ರತಿ ಯೂನಿಟ್’ಗೆ 10 ಪೈಸೆ ಹೆಚ್ಚಳವಾಗಲಿದೆ. 

ಗೃಹ ಬಳಕೆದಾರರಿಗೆ ಮೊದಲ ಸ್ಲ್ಯಾಬ್ ಪರಿಷ್ಕರಣೆ ಮಾಡಲಾಗಿದ್ದು 0-30 ಯೂನಿಟ್ ವರೆಗೆ ಇದ್ದ ಮಿತಿಯನ್ನು 50 ಯೂನಿಟ್ ವರೆಗೆ ವಿಸ್ತರಿಸಲಾಗಿದೆ. ಜೊತೆಗೆ ನಿಗದಿತ ಶುಲ್ಕವನ್ನೂ ಹೆಚ್ಚಳ ಮಾಡಿದ್ದು ಪ್ರತಿ ಕಿಲೋ ವ್ಯಾಟ್’ಗೆ ರೂ.10 ಗಳಂತೆ ಪರಿಷ್ಕರಣೆ ಮಾಡಲಾಗಿದೆ. 

ಎಲ್ಲಾ ಎಸ್ಕಾಂಗಳಿಗೂ ಏಕರೂಪದ ದರ ಹೆಚ್ಚಳ ಮಾಡಲಾಗಿದ್ದು, ಪರಿಷ್ಕೃತ ದರ ಏ.1ರಿಂದಲೇ ಪೂರ್ವಾನ್ವಯವಾಗಲಿದ್ದು, ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಏಪ್ರಿಲ್, ಮೇ. ತಿಂಗಳ ದರ ಪರಿಷ್ಕರಣೆ ಬಾಕಿಯನ್ನು ಯಾವುದೇ ಬಡ್ಡಿ ವಿಧಿಸದೆ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ವಸೂಲಿ ಮಾಡಲು ಎಸ್ಕಾಂಗಳಿಗೆ ಆದೇಶ ನೀಡಿದೆ. 

ಬೆಸ್ಕಾಂ ವ್ಯಾಪ್ತಿಯ ಬಿಬಿಎಂಪಿ ಹಾಗೂ ಪುರಸಭೆ ಪ್ರದೇಶಗಳಲ್ಲಿ ಗೃಹ ಬಳಕೆದಾರರು, ಸರ್ಕಾರಿ, ಧರ್ಮಾರ್ಥ ಸಂಸ್ಥೆಗಳು ನಡೆಸುವ ವಿದ್ಯಾಸಂಸ್ಥೆ, ಆಸ್ಪತ್ರೆಗಳ ವಿದ್ಯುತ್ ಶಕ್ತಿ ದರರವನ್ನು ಯೂನಿಟ್’ಗೆ 10 ಪೈಸೆ ಹೆಚ್ಚಳ ಮಾಡಲಾಗಿದೆ. ಇತರೆ ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶ, ಗ್ರಾಮ ಪಂಚಾಯಿತಿ ಪ್ರದೇಶಗಳಲ್ಲಿ ಪ್ರತಿ ಯೂನಿಟ್ ಬಳಕೆಗೆ 10 ಪೈಸೆಯಂತೆ ಹೆಚ್ಚಳ ಮಾಡಲಾಗಿದೆ. 

0-50 ಯೂನಿಟ್ ಮಾಸಿಕ ಬಳಕೆ ಸ್ಲ್ಯಾಬ್’ಗೆ ಪ್ರತಿ ಯೂನಿಟ್’ಗೆ ಇದ್ದ ರೂ.4ಗಳನ್ನು ರೂ.4.10, 51-100 ಯೂನಿಟ್ ಬಳಕೆಗೆ ರೂ.5.45 ಗಳಿಂದ ರೂ.5.55, 101-100 ಯೂನಿಟ್’ಗೆ ರೂ.7 ರಿಂದ ರೂ.7.10, 200 ಯೂನಿಟ್ ಗಳಿಗಿಂತ ಹೆಚ್ಚಿನ ಬಳಕೆಗೆ ಪ್ರತಿ ಯೂನಿಟ್’ಗೆ ರೂ.8.05 ಇದ್ದ ಶುಲ್ಕವನ್ನು ರೂ.8.15ಕ್ಕೆ ಏರಿಕೆ ಮಾಡಲಾಗಿದೆ. 

ಉಳಿದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯಿಟಿ ಅಡಿಯ ಗೃಹ ಬಳಕೆದಾರರಿಗೆ 0-50 ಯೂನಿಟ್’ಗೆ ರೂ.3.90ರಿಂದ ರೂ.4, 51-100 ಯೂನಿಟ್’ಗೆ ರೂ.5.15ರಿಂದ ರೂ.5.25, 101-200 ಯೂನಿಟ್’ಗೆ ರೂ.6.70ರಿಂದ ರೂ.6.80 200 ಯೂನಿಟ್ ಮೇಲ್ಪಟ್ಟ ಬಳಕೆಗಿದ್ದ ರೂ.7.55 ರಿಂದ ರೂ.7.65ಕ್ಕೆ ಪರಿಷ್ಕರಿಸಲಾಗಿದೆ. 

ರಾಜ್ಯದ ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆ, ಸ್ಥಳೀಯ ನಗರಸಂಸ್ಥೆಗಳ ಚುನಾವಣೆ ಘೋಷಣೆ ಕಾರಣ ನೀತಿ ಸಂಹಿತೆ ಜಾರಿಯಲ್ಲಿದ್ದುದರಿಂದ ದರ ಪರಿಷ್ಕರಣೆ ಆದೇಶ ಹೊರಡಿಸುವುದು ವಿಳಂಬವಾಯಿತು. ಕೊವಿಡ್ ಸೋಂಕು ತಡೆಯಲು ಲಾಕ್​ಡೌನ್ ನಿರ್ಬಂಧ ಹೇರಿದ ಕಾರಣ ಆಯೋಗದ ನಿತ್ಯದ ಕಾರ್ಯಚಟುವಟಿಕೆಗಳಲ್ಲಿ ತೊಂದರೆಯಾಯಿತು ಎಂದು ಆಯೋಗ ಕಾರಣ ನೀಡಿದೆ.

“ಈ ಆದೇಶವು ಏಪ್ರಿಲ್ 1 ರಿಂದ ಜಾರಿಗೆ ಬಂದಿರುವುದರಿಂದ, ಏಪ್ರಿಲ್ ಮತ್ತು ಮೇ ತಿಂಗಳಿಗೆ ಬಾಕಿ ಮೊತ್ತವನ್ನು ಯಾವುದೇ ಬಡ್ಡಿದರ ವಿಧಿಸದೆ ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಸಂಗ್ರಹಿಸುವಂತೆ ಸೂಚಿಸಲಾಗಿದೆ.. ಪ್ರತಿ ಯೂನಿಟ್‌ಗೆ 1.39 ರೂ.ಗಳನ್ನು ಹೆಚ್ಚಿಸಬೇಕೆಂದು ನಾವು ಒತ್ತಾಯಿಸಿದ್ದೆವು. ಆದರೆ ಆಯೋಗವು 12 ತಿಂಗಳಲ್ಲಿ 856 ಕೋಟಿ ರೂ. ಸಂಗ್ರಹಿಸುವಂತೆ ಸೂಚಿಸಿದೆ, ಇದೇ ಕಾರಣಕ್ಕೆ ತೆರಿಗೆಯನ್ನು ಸ್ಲ್ಯಾಬ್ ಎಂದು ಲೆಕ್ಕಹಾಕಲಾಗುತ್ತಿದೆ ಎಂದು ಬೆಸ್ಕಾಂ ಅಧಿಕಾರಿಗಳು ಹೇಳಿದ್ದಾರೆ. 

ಎಫ್‌ಕೆಸಿಸಿಐನ ವಿದ್ಯುತ್ ತಜ್ಞ ಎಂ ಜಿ ಪ್ರಭಾಕರ್ ಅವರು ಮಾತನಾಡಿ, ಪ್ರೋತ್ಸಾಹಕ ಯೋಜನೆ ಮುಂದುವರೆದಿರುವುದು ಸಂತಸ ತಂದಿದೆ. ವಿದ್ಯುತ್ ಮಾರಾಟ ಮಾಡುವ ಬದಲು ಅದನ್ನು ಕೈಗಾರಿಕೆಗಳಿಗೆ ನೀಡಬಹುದಿತ್ತು. ಆತಂಕ ವಿಚಾರವೆಂದರೆ ಕೋವಿಡ್ ಮತ್ತು ಕಾರ್ಮಿಕ ಸಮಸ್ಯೆಗಳಿಂದಾಗಿ ಡಿಸೆಂಬರ್ ವರೆಗೆ ಕೈಗಾರಿಕಾ ಕ್ಷೇತ್ರಗಳು ಹೆಚ್ಚಿನ ವಿದ್ಯುತ್ ಬಳಕೆ ಮಾಡಿಲ್ಲ, ಜೂನ್ ವೇಳೆಗೆ ಹೆಚ್ಚಿನ ವಿದ್ಯುತ್ ಬಳಕೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಜೂನ್ ತಿಂಗಳು ಬಂದಿದ್ದು, ಕೈಗಾರಿಕಾ ಕ್ಷೇತ್ರಗಳು ಎಷ್ಟು ಪ್ರಮಾಣದ ವಿದ್ಯುತ್ ಬಳಕೆ ಮಾಡುತ್ತವೆ ಎಂಬ ಪ್ರಶ್ನೆಗಳು ಮೂಡುತ್ತಿವೆ. ಆಯೋಗವು ಈ ಕ್ಷೇತ್ರಗಳಲ್ಲಿನ ಅಂತರವನ್ನು ಮತ್ತು ಕೈಗಾರಿಕೆಗಳಿಗೆ ಪೂರೈಸುವ ಅಗತ್ಯವನ್ನು ಗುರುತಿಸಿರುವುದು ಸಂತದ ವಿಚಾರವಾಗಿದೆ ಎಂದು ಹೇಳಿದ್ದಾರೆ.  

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್ ಅವರು ಮಾತನಾಡಿ, ಈ ಪರಿಷ್ಕರಣೆಯು ರಾಜ್ಯದಲ್ಲಿ ವಿದ್ಯುತ್ ಪರಿಸ್ಥಿತಿ ಉತ್ತಮವಾಗಿದೆ ಎಂಬ ಸಂದೇಶವನ್ನು ಕೈಗಾರಿಕಾ ಕ್ಷೇತ್ರಗಳಿಗೆ ನೀಡಲಿದೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯೂ ಪುಟಿದೇಳಲು ಸರ್ಕಾರ ಪ್ರಯತ್ನಿಸುತ್ತಿದೆ ಎಂಬ ಸಂದೇಶವನ್ನೂ ರವಾನಿಸುತ್ತಿದೆ ಎಂದು ತಿಳಿಸಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *