ಕುಮಟಾ ಮೂಲದ ದಿಶಾ ಕ್ಯಾಲಿಫೋರ್ನಿಯಾದ ಅಟಾರ್ನಿ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೆಕೋಡಿ ಗ್ರಾಮದ ದಿಶಾ ಭಾಗ್ವತ್ ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ಅಟಾರ್ನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದು ಜಿಲ್ಲೆಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದ್ದು, ಅತಿ ಚಿಕ್ಕ ವಯಸ್ಸಿನಲ್ಲೇ ಅತ್ಯಂತ ಮಹತ್ತರ ಸಾಧನೆ ಮಾಡಿರುವ ಕುಮಾರಿ. ದಿಶಾ ಭಾಗ್ವತ್ ಅವರ ಪರಿಶ್ರಮ, ಶ್ರದ್ಧೆ ಹಾಗೂ ಸಾಧಿಸಬೇಕು ಎನ್ನುವ ಹಂಬಲವು ಇಂದಿನ ಯುವ ಪೀಳಿಗೆ ಮಾದರಿಯಾಗಿದೆ‌. ಇವರನ್ನು ಅನೇಕರು ಅಭಿನಂದಿಸಿದ್ದಾರೆ.

ಪೊಲೆಂಡ್‌ ಕುಸ್ತಿ ಟೂರ್ನಿ; ಚಿನ್ನ ಮುಡಿಗೇರಿಸಿಕೊಂಡ ವಿನೇಶ್‌ ಫೋಗಟ್‌

ಭಾರತದ ತಾರಾ ಕುಸ್ತಿ ಪಟು ವಿನೇಶ್‌ ಫೋಗಟ್‌ ವಾರ್ಸಾದಲ್ಲಿ ನಡೆಯುತ್ತಿರುವ ಪೋಲೆಂಡ್‌ ಕುಸ್ತಿ ಟೂರ್ನಿಯ ಮಹಿಳೆಯರ 53 ಕೆಜಿ ವಿಭಾಗದ ಫೈನಲ್‌ ನಲ್ಲಿ ಉಕ್ರೇನಿನ ಕ್ರಿಸ್ಟಿಯಾನ ಬ್ರೀಜಾ ಅವರನ್ನು ಮಣಿಸಿ ಚಿನ್ನದ ಪದಕ ಮುಂಡಿಗೇರಿಸಿಕೊಂಡಿದ್ದಾರೆ.

ನವದೆಹಲಿ: ಭಾರತದ ತಾರಾ ಕುಸ್ತಿ ಪಟು ವಿನೇಶ್‌ ಫೋಗಟ್‌ ವಾರ್ಸಾದಲ್ಲಿ ನಡೆಯುತ್ತಿರುವ ಪೋಲೆಂಡ್‌ ಕುಸ್ತಿ ಟೂರ್ನಿಯ ಮಹಿಳೆಯರ 53 ಕೆಜಿ ವಿಭಾಗದ ಫೈನಲ್‌ ನಲ್ಲಿ ಉಕ್ರೇನಿನ ಕ್ರಿಸ್ಟಿಯಾನ ಬ್ರೀಜಾ ಅವರನ್ನು ಮಣಿಸಿ ಚಿನ್ನದ ಪದಕ ಮುಂಡಿಗೇರಿಸಿಕೊಂಡಿದ್ದಾರೆ.

ಶುಕ್ರವಾರ ನಡೆದ ಫೈನಲ್‌ ಪಂದ್ಯದಲ್ಲಿ ಫೋಗಟ್‌ ಎದುರಾಳಿ ಬ್ರೀಜಾ ಅವರನ್ನು 8-0 ಪಾಯಿಂಟ್‌ ಗಳಿಂದ ಸೋಲಿಸಿದರು. 26 ವರ್ಷದ ವಿನೀಶ್‌ ಈ ಋತುವಿನಲ್ಲಿ ತಮ್ಮದಾಗಿಸಿಕೊಂಡ ಮೂರನೇ ಚಿನ್ನದ ಪದಕ ಇದಾಗಿದೆ. ಮಾರ್ಚ್‌ ನಲ್ಲಿ ನಡೆದ ಮೆಟ್ಟಿಯೂ ಪೆಲಿಕಾನ್‌ ಇವೆಂಟ್‌ ಹಾಗೂ ಏಪ್ರಿಲ್‌ ನಲ್ಲಿ ನಡೆದ ಏಷಿಯನ್‌ ಚಾಂಪಿಯನ್‌ ಶಿಪ್‌ ನಲ್ಲಿ ಸ್ವರ್ಣಪದಕ ಗೆದ್ದಿದ್ದರು.

ಪೊಲೆಂಡ್‌ ಕುಸ್ತಿ ಟೂರ್ನಿಯಲ್ಲಿ ಭಾರತಕ್ಕೆ ಇದು ಎರಡನೇಯ ಪದಕವಾಗಿದೆ. ಇದಕ್ಕೂ ಮೊದಲು ಬುಧವಾರ ನಡೆದಿದ್ದ ಪುರುಷರ 61 ಕೆ.ಜಿ.ವಿಭಾಗದಲ್ಲಿ ರವಿಕುಮಾರ್‌ ದಹಿಯಾ ಬೆಳ್ಳಿ ಪದಕ ಗೆದ್ದಿದ್ದರು.

ಭಾರತ ತಂಡದ ಮತ್ತೊಬ್ಬ ಸದಸ್ಯೆ ಅಂನ್ಶು ಮಲಿಕ್‌ 57 ಕೆಜೆ ವಿಭಾಗದಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಜ್ವರದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಅವರು ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿ ಬರುವವರೆಗೆ ಆಕೆ ಐಸಲೇಷನ್‌ ಗೆ ಒಳಗಾಗಿದ್ದಾರೆ.

ಅಧಿಕೃತ ತೂಕದ ಸಮಯದಲ್ಲಿ ಅಂನ್ಶು ಮಲಿಕ್‌ ಅವರಿಗೆ ಜ್ವರದ ಲಕ್ಷಣಗಳು ಕಂಡು ಬಂದ ಕಾರಣ ಸ್ಪರ್ಧೆಯಿಂದ ದೂರ ಸರಿಯುವಂತೆ ಸೂಚಿಸಲಾಗಿದೆ. ಟೂರ್ನಿಯಿಂದ ದೂರ ಸರಿದ ಎರಡನೇ ಭಾರತೀಯ ಕುಸ್ತಿ ಪಟು ಆಗಿದ್ದಾರೆ

ಇದಕ್ಕೂ ಮೊದಲು, ಮಂಗಳವಾರ, ಪುರುಷರ 86 ಕೆಜಿ ವಿಭಾಗದ ದೀಪಕ್‌ ಪುನಿಯಾ ಕಾಲಿನ ಗಾಯದಿಂದಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.

ಟೊಕಿಯೊ ಒಲಿಂಪಿಕ್ಸ್‌ ಗೆ ತೆರಳಲಿರುವ ನಾಲ್ವರು ಕುಸ್ತಿ ಪಟುಗಳಾದ ವಿನೇಶ್‌ ಪೋಗಟ್‌, ಅಂನ್ಶುಮಲಿಕ್‌, ರವಿಕುಮಾರ್‌ ದಹಿಯಾ ಹಾಗೂ ದೀಪಕ್‌ ಪುನಿಯಾ ಅವರನ್ನು ಪೊಲೆಂಡ್‌ ಟೂರ್ನಿಯಲ್ಲಿ ಪಾಲ್ಗೊಂಡಿದ್ದಾರೆ. ಮುಂದಿನತಿಂಗಳು ಆರಂಭವಾಗಲಿರುವ ಟೊಕಿಯೋ ಒಲಿಂಪಿಕ್ಸ್‌ ಗೆ ಮೊದಲು ನಡೆಯುತ್ತಿರುವ ಈ ಟೂರ್ನಿ ಕೊನೆಯ ರ್ಯಾಂಕಿಂಗ್‌ ಸರಣಿಯಾಗಿದೆ, (kpc)


 

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *