local news- ಕೃಷಿ ಮಾಹಿತಿ, ವಿದ್ಯುತ್ ನಿಲುಗಡೆ…..

ಉದ್ಯೋಗ ಖಾತ್ರಿ ಅನುಕೂಲ… 2021-22 ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೈತರು ಕಾಳುಮೆಣಸು, ಅಡಿಕೆ, ಮರಸಂಬಾರು ಬೆಳೆ, ತೆಂಗು, ಮಾವು, ಗೇರು, ಅಂಗಾಂಶ ಬಾಳೆ, ಅಂಗಾಂಶ ಪಪ್ಪಾಯ ಪ್ರದೇಶ ವಿಸ್ತರಣೆ, ಅಡಿಕೆ ಮತ್ತು ಕಾಳುಮೆಣಸು ಪುನಃಶ್ಚೇತನ, ಅಡಿಕೆ ತೋಟದಲ್ಲಿ ಅಂತರ್ಗತ ಬಸಿಗಾಲುವೆ ನಿರ್ಮಾಣ ಕಾರ್ಯಕ್ರಮಗಳನ್ನು ಮಾರ್ಗಸೂಚಿ ಅನುಸಾರ ಅನುಷ್ಠಾನಗೊಳಿಸಿ, ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ :

  1. ಶ್ರೀ ಕಾಶಿನಾಥ ಪಾಟಿಲ್ (ಉಂಬಳಮನೆ ಹೋಬಳಿ) ; 9535906269
  2. ಶ್ರೀ ತೇಜಸ್ವಿ ನಾಯ್ಕ (ಕೊಂಡ್ಲಿ ಹೋಬಳಿ) : 9740636382
  3. ಶ್ರೀಮತಿ ದೀಪಾ ಮಡಿವಾಳ (ಕೋಡ್ಕಣಿ ಹೋಬಳಿ) : 9480644550

2021- 22 ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಕುರಿತು.


      2021-22 ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಸಿದ್ದಾಪುರ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸಲು ಕರ್ನಾಟಕ ಸರ್ಕಾರವು ಅಧಿಸೂಚನೆಯನ್ನು ನೀಡಿ ಆದೇಶಿಸಿದೆ. ಅಡಿಕೆ ಬೆಳೆಯ ವಿಮಾ ಮೊತ್ತ ರೂ. 51200.00 ಪ್ರತಿ ಎಕರೆಗೆ ಆಗಿದ್ದು, ರೈತರು ರೂ. 2560.00 ಪ್ರತಿ ಎಕರೆಗೆ  ಪ್ರೀಮಿಯಂ ಮೊತ್ತ ಪಾವತಿಸಬೇಕಾಗುತ್ತದೆ. ಕಾಳುಮೆಣಸು ಬೆಳೆಯ ವಿಮಾ ಮೊತ್ತ ರೂ. 18800.00 ಪ್ರತಿ ಎಕರೆಗೆ ಆಗಿದ್ದು, ರೈತರು ರೂ. 940.00 ಪ್ರತಿ ಎಕರೆಗೆ  ಪ್ರೀಮಿಯಂ ಮೊತ್ತ ಪಾವತಿಸಬೇಕಾಗುತ್ತದೆ. ವಿಮಾ ಕಂತು ಪಾವತಿಸಲು ಕೊನೆಯ ದಿನಾಂಕ 30/06/2021. ನಿಗದಿತ ನಮೂನೆಯಲ್ಲಿ ಅರ್ಜಿ, ಬ್ಯಾಂಕ್ ಪಾಸ ಬುಕ್ ನಕಲು. ಬೆಳೆ ನಮೂದಾಗಿರುವ ಪಹಣಿ ಪತ್ರಿಕೆ, ಸ್ವಯಂ ದೃಡೀಕರಣ ಹಾಗೂ ಆಧಾರ ಕಾರ್ಡ ನಕಲು ಪ್ರತಿಯನ್ನು ಹತ್ತಿರದ ಬ್ಯಾಂಕ್ / ಸೊಸೈಟಿಯಲ್ಲಿ ನೀಡಿ ನೊಂದಣಿ ಮಾಡಿಸಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ : 08389-230713

ಪರಿಹಾರ– ಸಿದ್ದಾಪುರ ತಾಲೂಕಿನ ಕಡಕೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರು ಹಾಗೂ ಧಾರವಾಡ ಹಾಲು ಒಕ್ಕೂಟದ ಕಲ್ಯಾಣ ಸಂಘದ ಸದಸ್ಯತ್ವ ಪಡೆದಿದ್ದ ಕೆರಿಯಾ ತಿಮ್ಮ ನಾಯ್ಕ ಅವರು ಇತ್ತೀಚೆಗೆ ನಿಧನಹೊಂದಿದ್ದು ಅವರ ವಾರಸುದಾರರಾದ ಅವರ ಪತ್ನಿ ಜಾಂಬವತಿ ಕೆರಿಯಾ ನಾಯ್ಕ ಅವರಿಗೆ ಧಾರವಾಡ ಹಾಲು ಒಕ್ಕೂಟದ ಕಲ್ಯಾಣ ಸಂಘದಿಂದ 10ಸಾವಿರ ರೂಗಳ ಪರಿಹಾರದ ಚೆಕ್‍ನ್ನು ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ ಬೇಡ್ಕಣಿ ಗುರುವಾರ ವಿತರಿಸಿದರು.
ಸಂಘದ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಮಗೇಗಾರ, ತಾಲೂಕು ವಿಸ್ತರಣಾಧಿಕಾರಿ ಪ್ರಕಾಶ ಕೆ, ಮುಖ್ಯ ಕಾರ್ಯನಿರ್ವಾಹಕಿ ಹೇಮಾವತಿ ಭಾಸ್ಕರ ನಾಯ್ಕ ಹಾಗೂ ರಮೇಶ ನಾಯ್ಕ ಇದ್ದರು.


ಗುರುವಾರ ಅರ್ಧದಿನ ವಿದ್ಯುತ್ ನಿಲುಗಡೆ- 110/11ಕೆ.ವಿ ಸಿದ್ದಾಪುರ ಉಪಕೇಂದ್ರದಲ್ಲಿ ದುರಸ್ತಿ ಹಾಗೂ ನಿರ್ವಹಣೆ ಮಾಡುವ ಕಾರ್ಯಕ್ಕೆ ದಿನಾಂಕ: : 17-6-2021 (ಗುರುವಾರ) ದಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ 110/11ಕೆ.ವಿ ಸಿದ್ದಾಪುರ ಉಪ ಕೇಂದ್ರದ ಮಾರ್ಗ ಮುಕ್ತತೆ ಪಡೆಯುವುದರಿಂದ ಸಿದ್ದಾಪುರ ತಾಲೂಕಿನಾದ್ಯಂತ ವಿದ್ಯುತ್ ನಿಲುಗಡೆಗೊಳಿಸಬೇಕಾಗಿರುತ್ತದೆ. ಆದ್ದರಿಂದ ಈ ವಿಷಯದ ಬಗ್ಗೆ ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಹೆಸ್ಕಾಂ ಪ್ರಕಟಣೆ ಮೂಲಕ ಕೋರಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *