ಕೋವಿಡ್ ಲಸಿಕೆ: ಬಿಜೆಪಿ ಕಾರ್ಯಕರ್ತರಿಂದ ಹೊಸ ಕಾರ್ಯಯೋಜನೆ

ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ. 

ಭಾರತದಲ್ಲಿ ಕೊರೋನಾ ಲಸಿಕೆಗೆ ಮೊದಲ ಸಾವು: ಖಚಿತ ಪಡಿಸಿದ ರಾಷ್ಟ್ರೀಯ ಸರ್ಕಾರಿ ಸಮಿತಿ

ದೇಶದಲ್ಲಿ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್ ನಿಂದ ಮೃತಪಟ್ಟಿದ್ದಾನೆ ಎಂದು ಸರ್ಕಾರಿ ಸಮಿತಿ ದೃಢಪಡಿಸಿದೆ.

Represent purposes only

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್ ನಿಂದ ಮೃತಪಟ್ಟಿದ್ದಾನೆ ಎಂದು ಸರ್ಕಾರಿ ಸಮಿತಿ ದೃಢಪಡಿಸಿದೆ.

ಲಸಿಕೆ ಪಡೆದ ನಂತರ ವ್ಯಕ್ತಿಯಲ್ಲಿ ಅಡ್ಡಪರಿಣಾಮವಾಗಿ ಅನಾಫಿಲ್ಯಾಕ್ಸಿಸ್(ತೀವ್ರ ಅಲರ್ಜಿ ಪರಿಣಾಮ) ಗೆ ಗುರಿಯಾಗಿದ್ದು ಇದರಿಂದಲೇ 2021ರ ಮಾರ್ಚ್ 8ರಂದು ಮೃತಪಟ್ಟಿರುವುದಾಗಿ ರಾಷ್ಟ್ರೀಯ ಎಇಎಫ್‌ಐ ಸಮಿತಿಯ ವರದಿಯಲ್ಲಿ ತಿಳಿಸಿದೆ.

ಇನ್ನು ಜನವರಿ 16 ಮತ್ತು 19ರಂದು ಲಸಿಕೆ ಪಡೆದಿದ್ದ ಇಬ್ಬರಿಗೂ ತೀವ್ರ ಅಲರ್ಜಿಯಾಗಿದ್ದು ಕೂಡಲೇ ಅವರು ಆಸ್ಪತ್ರೆಗೆ ದಾಖಲಾದ ನಂತರ ಚೇತರಿಸಿಕೊಂಡಿದ್ದಾರೆ ಎಂದು ಸಮಿತಿ ತಿಳಿಸಿದೆ.

31 ಪ್ರಕರಣಗಳ ಸಾಂದರ್ಭಿಕ ಮೌಲ್ಯಮಾಪನದ ಫಲಿತಾಂಶಗಳನ್ನು ಸಮಗ್ರ ಪರಿಶೀಲನೆ ಮತ್ತು ಚರ್ಚೆಗಳ ನಂತರ ಫೆಬ್ರವರಿ 5ರಂದು(ಐದು ಪ್ರಕರಣಗಳು), ಮಾರ್ಚ್ 9(ಎಂಟು ಪ್ರಕರಣಗಳು) ಮತ್ತು ಮಾರ್ಚ್ 31ರಂದು(18 ಪ್ರಕರಣಗಳು) ವರದಿಯಾಗಿತ್ತು ಎಂದು  ರಾಷ್ಟ್ರೀಯ ಎಇಎಫ್‌ಐ ಸಮಿತಿ ತಿಳಿಸಿದೆ.

ವರದಿಯ ಪ್ರಕಾರ, “ಸಾಂದರ್ಭಿಕವಾಗಿ ಮೌಲ್ಯಮಾಪನ ಮಾಡಲಾದ 31 ಪ್ರಕರಣಗಳಲ್ಲಿ 18 ಸಾವುಗಳು ಲಸಿಕೆ ಪಡೆದ ನಂತರ ಸಾಂದರ್ಭಿಕವಾಗಿ, ಅಂದರೆ ಕಾಕತಾಳೀಯವಾಗಿ ಸಂಭವಿಸಿದೆ. ಇದಕ್ಕೂ ಲಸಿಕೆಗೂ ಸಂಬಂಧವಿಲ್ಲ. ಇನ್ನು ಏಳು ಸಾವುಗಳು ಎರಡೂ ಕಾರಣಗಳಿಗೆ ಸಂಭವಿಸಿದೆ. ಇನ್ನು ಮೂರು ಸಾವುಗಳು ಲಸಿಕೆಯಿಂದಾಗಿದೆ ಎಂದು ತಿಳಿದುಬಂದಿದ್ದು ಒಂದು ಸಾವು ಉದ್ವೇಗದಿಂದಾಗಿದ್ದರೆ ಮತ್ತೆರಡು ಪ್ರಕರಣಗಳನ್ನು ವರ್ಗಿಕರಿಸಲು ಸಾಧ್ಯವಾಗುತ್ತಿಲ್ಲ ಎಂದು ಸಮಿತಿ ತಿಳಿಸಿದೆ. 

ಲಸಿಕೆ ಉತ್ಪನ್ನ-ಸಂಬಂಧಿತ ಪ್ರತಿಕ್ರಿಯೆಗಳು ನಿರೀಕ್ಷಿತ ಪ್ರತಿಕ್ರಿಯೆಗಳಾಗಿದ್ದು, ಪ್ರಸ್ತುತ ವೈಜ್ಞಾನಿಕ ಪುರಾವೆಗಳ ಆಧಾರದ ಮೇಲೆ ಲಸಿಕೆ ಕಾರಣವೆಂದು ಎಇಎಫ್ಐ ವರದಿ ಹೇಳಿದೆ. ಅಂತಹ ಪ್ರತಿಕ್ರಿಯೆಗಳ ಉದಾಹರಣೆಗಳೆಂದರೆ ಅಲರ್ಜಿ ಮತ್ತು ಅನಾಫಿಲ್ಯಾಕ್ಸಿಸ್ ಇತ್ಯಾದಿ.

File photo

ಬೆಂಗಳೂರು: ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ. 

ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್ ಅವರು, ಮುಂದಿನ ಎರಡು ಅಥವಾ ಮೂರು ತಿಂಗಳಲ್ಲಿ ಬಿಜೆಪಿ ರಾಜ್ಯ ಘಟಕವು ಕರ್ನಾಟಕದಲ್ಲಿ ಶೇ 100 ರಷ್ಟು ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ರಾಜ್ಯದಾದ್ಯಂತ ಸ್ಥಾಪಿಸಲಾಗಿರುವ ಬೂತ್‌ಗಳಲ್ಲಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. ಅಲ್ಲದೆ, 25 ಲಕ್ಷ ಕಾರ್ಯಕರ್ತರು ಸೇವೆ ಸಲ್ಲಿಸಲಿದ್ದಾರೆಂದು ತಿಳಿಸಿದ್ದಾರೆ. 

https://imasdk.googleapis.com/js/core/bridge3.464.0_en.html#goog_1581465593

ಕೋವಿಡ್ ಎಲ್ಲಾ ನಿಯಮಗಳು ಹಾಗೂ ಮುನ್ನೆಚ್ಚರಿಕೆಗಳನ್ನು ಅನುಸರಿಸಿ ಕಳೆದ ತಿಂಗಳಷ್ಟೇ ರಾಜ್ಯ ಬಿಜೆಪಿ ರಾಜ್ಯದ 29,000 ಗ್ರಾಮಗಳ 58,000 ಬೂತ್‌ಗಳಲ್ಲಿ ಕೋವಿಡ್ ಸೋಂಕಿತರಿಗೆ ಸಹಾಯ ಮಾಡುವ ಕಾರ್ಯವನ್ನು ಆರಂಭಿಸಿತ್ತು. 

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 7 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಸೇವಾ ಹಿ ಸಂಘಟನ್ ಕಾರ್ಯಕ್ರಮವನ್ನು ಬಿಜೆಪಿ ಆರಂಭಿಸಿದೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *